ವಿಷ್ಣುವರ್ಧನ್ ಅಲ್ಲ, ಇದು ಟಿಪ್ಪುವರ್ಧನ್!

 ಟ್ರೈಲರ್ ಬಿಡುಗಡೆ ಮೂಲಕ‌ ಸದ್ದು ಮಾಡಿದ ಏಕವ್ಯಕ್ತಿ ಸಿನಿಮಾ

ಕೋರೋನಾ ಸಂಕಷ್ಟದ ಪರಿಣಾಮ‌ ಚಿತ್ರಮಂದಿರಗಳು ಬಾಗಿಲು ಮುಚ್ಚಿರುವುದು ನಿಮಗೆ ಗೊತ್ತಿರುವ ವಿಚಾರ. ಹಾಗಾಗಿ ಈಗ ನಿರ್ಮಾಪಕರು ತಮ್ಮ ಚಿತ್ರಗಳ ಬಿಡುಗಡೆಗೆ ಪರ್ಯಾಯ ಮಾರ್ಗ ಕಂಡುಕೊಂಡಿದ್ದು, ಒಟಿಟಿ‌ ಮೂಲಕ ಬಿಡುಗಡೆ ಆಗುತ್ತಿರುವ ಸಿನಿಮಾಗಳ‌ಸಾಲಿಗೆ ಈಗ ಹೊಸ ಸೆರ್ಪಡೆ ಟಿಪ್ಪುವರ್ಧನ. ಇದು ನೈಜ ಘಟನೆಗಳ ಸುತ್ತಲ‌ಕಥಾ ಹಂದರದ ಚಿತ್ರ.  ‘V4 streem’ OTT ಮೂಲಕ ಡಾ.ವಿಷ್ಣುವರ್ಧನ್ ಹುಟ್ಟಹಬ್ಬದಂದು (18.9.20) ವಿಶ್ವದಾದ್ಯಂತ  ಬಿಡುಗಡೆ ಆಗುತ್ತಿದೆ‌.

ಸಿನಿಮಾಕ್ಕೆ ರಚನೆ,ಚಿತ್ರಕತೆ, ಸಂಭಾಷಣೆ ಜತೆಗೆ ಎರಡು ಹಾಡುಗಳಿಗೆ ಸಾಹಿತ್ಯ ಬರೆದು ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸುವ ಮೂಲಕ ಚಿತ್ರದ ಪ್ರಮುಖ‌ಪಾತ್ರಕ್ಕೆ ಬಣ್ಣ ಹಚ್ಚಿದವರು ಎಂ.‌ಟಿಪ್ಪುವರ್ಧನ್.

ಮೂರು ಹಂತದಲ್ಲಿ ಬರುವ ಕತೆಯು ರಾಜಕೀಯ ವ್ಯಕ್ತಿಗಳು ಜನತೆಗೆ ಯಾವಾಗಲೂ ಒಳ್ಳೆಯದನ್ನೇ ಮಾಡಬೇಕೆಂದು ಸಂದೇಶದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ. ಜೊತೆಗೆ ಹಿಂದು-ಮುಸ್ಲಿಂ ವಿಭಿನ್ನ ಜಾತಿಯ ಗೆಳೆಯರ ಗೆಳೆತನದ ನಂಟು, ಪ್ರೀತಿಯನ್ನು ಹೇಳಲಾಗಿದೆ. ಭ್ರಷ್ಟ, ಪ್ರಾಮಾಣಿಕ ರಾಜಕಾರಣಿಗಳ ಮಧ್ಯೆ ಘರ್ಷಣೆ ಆದಾಗ, ಅದಕ್ಕೆ ಒಳ್ಳೆಯ ಉತ್ತರವನ್ನು ಶಿಸ್ತಿನ ರಾಜಕಾರಣಿ ಹೇಳುತ್ತಾ ಹೋಗುತ್ತಾನೆ. ಮತ್ತು ಐಎಎಸ್ ಹುಡುಗನ ಕನ್ನಡ ಪ್ರೇಮ ದಿಟ್ಟತನದ ಅಧಿಕಾರ ಸೇವೆ ಎತ್ತಿ ತೋರಿಸಿರುವುದು ಹಿರಿಮೆಯಾಗಿದೆ.

ತಾರಗಣದಲ್ಲಿ ಅರಸಿಕೆರೆಕೇಶವಮೂರ್ತಿ, ಇನ್ಸಾಫ್‌ಖಾನ್, ಸೂರಜ್‌ಟಿಪ್ಪು, ವಟಗಲ್‌ನಾಗರಾಜ್. ತೇಜಸ್ವಿನಿ, ಗೀತಪ್ರಿಯ, ರಮ್ಯ, ಮೈಕಲ್‌ಮಧು. ಡಾ.ಚಿಕ್ಕಹೆಜ್ಜಾಜಿಮಹಾದೇವ್, ನಂದಕುಮಾರ್ ಮುಂತಾದವರು ನಟಿಸಿದ್ದಾರೆ. ನಾಲ್ಕು ಹಾಡುಗಳಿಗೆ ಆರ್.ದಾಮೋದರ್ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ಬಾಬು, ಸಂಕಲನ ಕವಿತಾಭಂಡಾರಿ ಅವರದಾಗಿದೆ. ಬೆಂಗಳೂರು, ಗಜೇಂದ್ರಗಡ, ಕೋಲಾರ ಮತ್ತು ಬಂಗಾರಪೇಟೆ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಆರ್.ಬಿ.ನಡಾಫ್ ಗಜೇಂದ್ರಗಡ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಟಿಪ್ಪುವರ್ಧನ್ ಅವರು ಡಾ.ವಿಷ್ಣುವರ್ಧನ್ ಅಭಿಮಾನಿಯಾಗಿದ್ದು, ಅವರ ಹುಟ್ಟಹಬ್ಬದ ಪ್ರಯುಕ್ತ ಸಿನಿಮಾವನ್ನು ಸಾಹಸ ಸಿಂಹನಿಗೆ ಅರ್ಪಿಸುವ ಸಲುವಾಗಿ ಅದೇ ದಿನದಂದು ಓಟಿಟಿ ಮೂಲಕ ಜನರಿಗೆ ತೋರಿಸುತ್ತಿದ್ದಾರೆ.
ಪ್ರಚಾರದ ಸಲುವಾಗಿ ಮಂಗಳವಾರದಂದು ಸಿನಿಮಾದ ಟ್ರೈಲರ್ ಬಿಡುಗಡೆಗೊಂಡಿತು. ಈ ಸಂದರ್ಭದಲ್ಲಿ ಚಿತ್ರತಂಡದ ಹಾಜರಿ ಇತ್ತು. ತಂಡಕ್ಕೆ ಶುಭಹಾರೈಸಲು ನಾಗೇಂದ್ರಅರಸು, ನಟ ಅಮಿತ್, ವಿಸ್ಟ್ರೀಮ್ ಪದಾದಿಕಾರಿಗಳು ಉಪಸ್ಥಿತರಿದ್ದರು.

Related Posts

error: Content is protected !!