ಶಂಕರ್ ನಾಗ್ ಇಲ್ಲದ ಆ ಮೂರು ದಶಕ ಇಂದು ಆಟೋರಾಜನ ಪುಣ್ಯಸ್ಮರಣೆ

ಶಂಕರ್ ನಾಗ್…

ಕನ್ನಡ‌ ಚಿತ್ರರಂಗ ಕಂಡ ಅದ್ಬುತ ನಟ,‌ ನಿರ್ದೇಶಕ ಮತ್ತು ತಂತ್ರಜ್ಞ. ಇದ್ದ ಅಲ್ಪ ಸಮಯದಲ್ಲೇ ಸಾಕಷ್ಟು ಸಂದೇಶವುಳ್ಳ ಸಿನಿಮಾ ಕಟ್ಟಿಕೊಡುವ ಮೂಲಕ ಕನ್ಮಡಿಗರ ಪಾಲಿಗೆ ಪ್ರೀತಿಯ ಶಂಕ್ರಣ್ಣ ಆಗಿ ಉಳಿದವರು. ಅವರು ಈಗ ನಮ್ಮೊಂದಿಗಿಲ್ಲ. ಆದರೆ ಅವರ ಸಿನಿಮಾಗಳ ಮೂಲಕ ಎಲ್ಲರ ಮನದಲ್ಲಿ ಅಚ್ಚಳಿಯದೆ ಉಳಿದಿದ್ದಾರೆ.
ಅವರು ಇಲ್ಲದ 30 ವರ್ಷಗಳು ಕಳೆದಿವೆ. ಸೆ.30, 1990 ಅವರು ಇಹಲೋಕ ತ್ಯಜಿಸಿದರು. ಮೂರು ದಶಕ ಕಳೆದರೂ ಅವರ ನೆನಪು ಮಾತ್ರ ಜೀವಂತ. ಸೆ.30 ಆಟೋರಾಜನ ಪುಣ್ಯಸ್ಮರಣೆ. ಶಂಕರ್ ನಾಗ್ ಅವರಿಗೆ ಎಲ್ಲಾ ವರ್ಗದ ಅಭಿಮಾನಿಗಳೂ ಇದ್ದಾರೆ. ಅವರ ಎದೆಯಲ್ಲಿ ಸದಾ ಹಸಿರಾಗಿರುವ ಶಂಕರ್ ನಾಗ್ ಎಂದೂ ಮರೆಯದ ಧ್ರುವತಾರೆ.
ಇಂದಿಗೂ ಅವರು ಗೀತಾ, ಸಾಂಗ್ಲಿಯಾನ, ಮಿಂಚಿನ ಓಟ, ಒಂದು ಮುತ್ತಿನ ಕಥೆ, ಮಾಲ್ಗುಡಿ ಡೇಸ್… ಮೂಲಕ ನೆನಪಾಗುತ್ತಲೇ ಇದ್ದಾರೆ.

Related Posts

error: Content is protected !!