ಪದವಿಪೂರ್ವಕ್ಕೆ ಚಾಲನೆ- ಶಾಮನೂರು ಫ್ಯಾಮಿಲಿಯ ಹೊಸ ಚಿತ್ರ

ನಿರ್ಮಾಣದಲ್ಲಿ ಯೋಗರಾಜ್‌ ಭಟ್‌ ಸಾಥ್‌

ಈ ಹಿಂದೆ “ಪದವಿ ಪೂರ್ವ” ಸಿನಿಮಾ ಕುರಿತು ಒಂದಷ್ಟು ಹೇಳಲಾಗಿತ್ತು. ಈಗ ಆ ಚಿತ್ರಕ್ಕೆ ಮುಹೂರ್ತ ಕೂಡ ನಡೆದಿದೆ. ಇತ್ತೀಚೆಗೆ ರಾಜಾಜಿನಗರದ ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಚಿತ್ರಕ್ಕೆ ಪೂಜೆ ನಡೆದಿದ್ದು, ಯೋಗರಾಜ್‌ಭಟ್‌ ಕ್ಯಾಮೆರಾ ಚಾಲನೆ ಮಾಡುವ ಮೂಲಕ ಚಿತ್ರಕ್ಕೆ ಶುಭಕೋರಿದ್ದಾರೆ.

ಅಂದಹಾಗೆ, ಇದು ಹರಿಪ್ರಸಾದ್ ಜಯಣ್ಣ ನಿರ್ದೇಶನದ ಚಿತ್ರ. ಇನ್ನು, ಯೋಗರಾಜ್ ಭಟ್ ಮತ್ತು ರವಿಶಾಮನೂರ್ ಅವರು ಜಂಟಿಯಾಗಿ ನಿರ್ಮಿಸುತ್ತಿರುವ ಚಿತ್ರವಿದು. ಅಂದು ನಿರ್ಮಾಪಕರಾದ ರವಿ ಶಾಮನೂರು ಅವರ ಪುತ್ರಿ ಸೃಷ್ಠಿ ಶಾಮನೂರ್ ಕ್ಲಾಪ್ ಮಾಡಿದ್ದಾರೆ. ಚಿತ್ರದಲ್ಲಿ ಪೃಥ್ವಿ ಶಾಮನೂರ್ ನಾಯಕರಾದರೆ, ಅವರಿಗೆ ಅಂಜಲಿ ಅನೀಶ್ ಹಾಗು ಯಶಾ ಶಿವಕುಮಾರ್ ನಾಯಕಿಯರು.

ಇದು ಹರಿಪ್ರಸಾದ್ ಜಯಣ್ಣ ಅವರ ಚೊಚ್ಚಲ ನಿರ್ದೇಶನದ ಸಿನಿಮಾ. ಚಿತ್ರದ ಮೊದಲ ಹಂತದ ಚಿತ್ರೀಕರಣ ಶುರುವಾಗಿದ್ದು, ಚಿತ್ರದ ಎರಡನೇ ಹಂತದ ಚಿತ್ರೀಕರಣವನ್ನು ಮಲೆನಾಡಿನ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ಚಿತ್ರೀಕರಿಸಲು ಚಿತ್ರತಂಡ ತಯಾರಿ ನಡೆಸಿದೆ. ಅರ್ಜುನ್ ಜನ್ಯ ಸಂಗೀತವಿದೆ. ಮಧು ತುಂಬಕೆರೆ ಸಂಕಲನ ಮಾಡಿದರೆ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣವಿದೆ.

Related Posts

error: Content is protected !!