ಕನಸು ನನಸಾದಾಗ… ಆ ಒಂದು ಕನಸು ಟೈಟಲ್‌ ಹೊರಬಂತು

ಕಿರುತೆರೆ ಮಂದಿಯ ಹೊಸ ಸಿನಿಮಾ

ಕನ್ನಡ ಚಿತ್ರರಂಗದಲ್ಲಿ ದಿನ ಕಳೆದಂತೆ ಹೊಸಬರ ಸಂಖ್ಯೆ ಹೆಚ್ಚುತ್ತಲೇ ಇದೆ. ಆ ಸಾಲಿಗೆ “ಆ ಒಂದು ಕನಸು” ಚಿತ್ರವೂ ಒಂದು ರಂಗು ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ದಿಲೀಪ್‌ ಬಿ.ಎಂ. ಅವರು ನಿರ್ಮಾಣ ಮಾಡುತ್ತಿರುವ ಹೊಸ ಚಿತ್ರ “ಆ ಒಂದು ಕನಸು”. ಈ ಚಿತ್ರದ ಶೀರ್ಷಿಕೆಯನ್ನು ಹಿರಿಯ ನಟ ಎಸ್.‌ ಉಮೇಶ್‌ ಅವರು ಬಿಡುಗಡೆ ಮಾಡಿರುವುದು ವಿಶೇಷ. ಇವರೊಂದಿಗೆ ಹಿರಿಯ ಕಲಾವಿದರಾದ ಹೊನ್ನವಳ್ಳಿ ಕೃಷ್ಣ ಹಾಗು ಹಿರಿಯ ಕಂಠದಾನ ಕಲಾವಿದೆ ಆಶಾ ಅವರೂ ಸೇರಿಕೊಂಡು ಬಿಡುಗಡೆಗೆ ಸಾಥ್‌ ನೀಡಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ವಿಷ್ಣು ನಾಚನೇಕರ್‌ ನಿರ್ದೇಶನ ಮಾಡುತ್ತಿರುವುದು ವಿಶೇಷ. ಡಿಸೆಂಬರ್‌ ೩ರಿಂದ ಚಿತ್ರದ ಚಿತ್ರೀಕರಣ ಶುರುವಾಗಲಿದೆ.


ವಿಷ್ಣು ನಾಚನೇಕರ್‌ ಕನ್ನಡದ ಕೆಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ದುಡಿದಿದ್ದಾರೆ. ಕಿರುತೆರೆಯ ಹಲವು ಧಾರಾವಾಹಿಗಳ ಸಂಚಿಕೆ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ. “ಶನಿ” ಧಾರಾವಾಹಿಯ ನಿರ್ದೇಶಕರಾಗಿ ಕಾರ್ಯನಿರ್ವಹಿಸಿರುವ ವಿಷ್ಣು ನಾಚನೇಕರ್ ಅವರು, “ಆ ಒಂದು ಕನಸು” ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ.  ಉದಯಂ ಕಥೆ ಬರೆದರೆ, ಮಳವಳ್ಳಿ ಸಾಯಿಕೃಷ್ಣ ಅವರು ಚಿತ್ರಕಥೆ ಸಂಭಾಷಣೆ ಬರೆದಿದ್ದಾರೆ. ವೀನಸ್ ಮೂರ್ತಿ ಅವರ‌ ಛಾಯಾಗ್ರಹಣವಿದೆ. ಅಭಿಷೇಕ್ ಜೆ. ರಾಯ್ ಸಂಗೀತವಿದೆ. ಅಲ್ಟಿಮೆಟ್ ಶಿವು ಸಾಹಸ ನಿರ್ದೇಶನ ಮಾಡಿದರೆ, ಹೈಟ್ ಮಂಜು, ಸ್ಟಾರ್ ಗಿರಿ ನೃತ್ಯ ನಿರ್ದೇಶನವಿದೆ. ಚಿತ್ರದಲ್ಲಿ ಮೂರು ಹಾಡುಗಳಿವೆ. ನಾಲ್ಕು ಫೈಟ್ಸ್‌ ಇದೆ. ಬೆಂಗಳೂರು, ಸಾಗರ, ಶಿವಮೊಗ್ಗದಲ್ಲಿ ಚಿತ್ರೀಕರಣ ನಡೆಯಲಿದೆ.

 

ಅಂದಹಾಗೆ, ಈ ಚಿತ್ರಕ್ಕೆ ವಿಶ್ವಾಸ್‌ ಹೀರೋ. ಅವರಿಗೆ ಇದು ಎರಡನೆ ಸಿನಿಮಾ. ಇವರು ಈಗಾಗಲೇ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ಬಲ ರಾಜವಾಡಿ, ಅಮಿತ್, ಗಿರೀಶ್ ಶಿವಣ್ಣ, ರಮೇಶ್ ಭಟ್.
ಗಿರೀಜಾ ಲೋಕೇಶ್, ಕುರಿ ಬಾಂಡ್ ರಂಗ, ಹರ್ಷವರ್ಧನ್, ಶ್ವೇತಾರಾವ್, ಜಯಶ್ರೀ, ನಾರಾಯಣ ಸ್ವಾಮಿ ಇತರರು ನಟಿಸುತ್ತಿದ್ದಾರೆ.

Related Posts

error: Content is protected !!