ಹೊಸಬರ ಕಾಯಕವೇ ಕೈಲಾಸ – ಉದ್ಯೋಗಂ ಪುರುಷ ಲಕ್ಷಣಂ ರಿಲೀಸ್‌ಗೆ ರೆಡಿ

ಅವಳು ಮತ್ತು ಅವರು- ತ್ರಿಕೋನ ಪ್ರೇಮಕಥೆಯಲ್ಲಿ ಕೆಲಸ ಗಿಲಸ ಇತ್ಯಾದಿ..

ಪುರುಷರು ಮನೆಯಲ್ಲಿರಬಾರದು. ಹಾಗಂತ, ಹೊರಗೆ ಸುತ್ತಾಡಬೇಕು ಅಂತಲ್ಲ. ಸಣ್ಣದಾದರೂ ಪರವಾಗಿಲ್ಲ ಒಂದು ಉದ್ಯೋಗ ಅನ್ನೋದು ಇರಬೇಕು. ಅದಕ್ಕಾಗಿಯೇ ಒಂದು ಗಾದೆ ಇದೆ. “ಉದ್ಯೋಗಂ ಪುರುಷ ಲಕ್ಷಣಂ” ಅಂತ. ಈಗ ಇದೇ ಹೆಸರಿನಲ್ಲೊಂದು ಸಿನಿಮಾ ಕೂಡ ಆಗಿದೆ. ಹೌದು, ಇಲ್ಲೀಗ ಹೇಳ ಹೊರಟಿರುವುದು ಕೂಡ “ಉದ್ಯೋಗಂ ಪುರುಷ ಲಕ್ಷಣಂ” ಬಗ್ಗೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಇಷ್ಟರಲ್ಲೇ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗುತ್ತಿದೆ. ತಮ್ಮ ಚಿತ್ರದ ಬಗ್ಗೆ ಹೇಳಲೆಂದೇ ಚಿತ್ರತಂಡ ಮಾಧ್ಯಮ ಮುಂದೆ ಆಗಮಿಸಿತ್ತು. ಇದು ಬಹುತೇಕ ಹೊಸಬರೇ ಸೇರಿ ಮಾಡಿರುವ ಚಿತ್ರ. ಈ ಚಿತ್ರದ ಮೂಲಕ ಸುಜಿತ್‌ ಕುಮಾರ್‌ ಕೆ.ಎಂ. ಕುಡ್ಲೂರು ನಿರ್ದೇಶಕರಾಗಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯದ ಜವಾಬ್ದಾರಿಯೂ ಅವರದೇ. ತಮ್ಮ ಚೊಚ್ಚಲ ಸಿನಿಮಾ ಕುರಿತು ಸುಜಿತ್‌ ಕುಮಾರ್‌ ಹೇಳಿದ್ದಿಷ್ಟು.

ಸುಜಿತ್‌, ನಿರ್ದೇಶಕ

“ನನಗೆ ನಿರ್ದೇಶನ ಅನ್ನೋದು ತುಂಬ ಆಸಕ್ತಿಯ ವಿಷಯ. ಅದಕ್ಕಾಗಿ ನಾನು ಎಂಟು ವರ್ಷಗಳ ಕಾಲ ಅಲೆದಾಟ ನಡೆಸಿದೆ. ಒಂದು ಐಡೆಂಟಿಟಿ ಸಿಕ್ಕರೆ ಮಾತ್ರ ನಾವು ಏನು ಅಂತ ತೋರಿಸಲು ಸಾಧ್ಯ. ಹೀಗೆ ಒಮ್ಮೆ ನಾಗತಿಹಳ್ಳಿ ಚಂದ್ರಶೇಖರ್‌ ಅವರ ಟೆಂಟ್‌ ಸಿನಿಮಾಗೆ ಹೋದೆ. ಸಿಗಲಿಲ್ಲ. ಒಂದಷ್ಟು ಸಮಯ ಹೋಗಿ ಬಂದು ಮಾಡಿದೆ. ಒಮ್ಮೆ ಸಿಕ್ಕರು. ಆಗ ನನ್ನ ಆಸೆ ಹೊರಹಾಕಿದೆ. ಚಿತ್ರಕಥೆ, ಕಟ್ಟುವ ವಿಭಾಗದಲ್ಲಿ ತರಬೇತಿ ಪಡೆದೆ. ಅವರ ಜೊತೆಗೆ ನಾನು “ಇಷ್ಟಕಾಮ್ಯ” ಸಿನಿಮಾದಲ್ಲೂ ಕೆಲಸ ಮಾಡಿದೆ. ನಂತರ ಹೊಸದೊಂದು ಸಿನಿಮಾ ಮಾಡಬೇಕು ಅಂತ ಹೊರಟೆ. ಪವನ್‌, ವೆಂಕಟೇಶ್‌, ಉಮೇಶ್‌ ನನ್ನ ಪ್ರಯತ್ನಕ್ಕೆ ಸಾಥ್‌ ಕೊಟ್ಟರು. ಈ ಚಿತ್ರ ಶುರುವಾಯ್ತು. ಚಿತ್ರದ ಬಗ್ಗೆ ಹೇಳುವುದಾದರೆ, ಇದೊಂದು ನಾಲ್ವರು ಹುಡುಗರ ಸುತ್ತ ನಡೆಯುವ ಕಥೆ. ರೊಮ್ಯಾನ್ಸ್‌, ಕಾಮಿಡಿ ಹಾಗು ಸಸ್ಪೆನ್ಸ್‌ ಜೊತೆಗೆ ಒಂದಷ್ಟು ವಿಷಯಗಳನ್ನು ಹೊಂದಿದೆ. ಸರಳ ತ್ರಿಕೋನ ಪ್ರೇಮಕಥೆ ಇಲ್ಲಿದ್ದು, ಕಾಯಕವೇ ಕೈಲಾಸ ಎಂಬುದನ್ನು ಹೇಳಲಾಗಿದೆʼ ಎನ್ನುತ್ತಾರೆ ಸುಜಿತ್.‌

ರಾಕೇಶ್‌, ನಿರ್ಮಾಪಕ

ನಾಯಕ ರಾಜ್‌ ಚರಣ್‌ ಅವರು ಇಲ್ಲಿಗೆ ಬರಲು ನಾಗತಿಹಳ್ಳಿ ಚಂದ್ರಶೇಖರ್‌ ಅವರ ಟೆಂಟ್‌ ಸಿನಿಮಾ ಕಾರಣವಂತೆ. ಅವರಿಲ್ಲಿ ಅರುಣ್‌ ಎಂಬ ಪಾತ್ರ ಮಾಡುತ್ತಿದ್ದು, ಅದೊಂದು ರೀತಿ ಲವ್ವರ್‌ ಬಾಯ್‌ ಪಾತ್ರವಂತೆ. ನನಗಿಲ್ಲಿ ಡ್ಯಾನ್ಸ್‌ ಕಷ್ಟವಿತ್ತು. ವಿಜಯ್‌ ಮಾಸ್ಟರ್‌ ಎಲ್ಲವನ್ನೂ ಚೆನ್ನಾಗಿ ಹೇಳಿಕೊಟ್ಟಿದ್ದಕ್ಕೆ ಸುಲಭವಾಯ್ತು. ಒಂದೊಳ್ಳೆಯ ಸಿನಿಮಾದಲ್ಲಿ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ ಅಂದರು ರಾಜ್‌ಚರಣ್.‌

ರಾಜ್‌ ಚರಣ್‌

ನಿರ್ಮಾಪಕ ರಾಕೇಶ್‌ ಚೆಲುವರಾಜ್‌ ಅವರಿಗೆ ಇದು ಮೊದಲ ಅನುಭವ. ಅವರಿಗೆ ನಿರ್ದೇಶಕ ಸುಜಿತ್‌ ಒಳ್ಳೆಯ ಗೆಳೆಯರು. ಅವರು ಒಮ್ಮೆ ಕಥೆ ಬಗ್ಗೆ ಚರ್ಚೆ ನಡೆಸಿದಾಗ, ಸಿನಿಮಾ ಮಾಡುವ ಮನಸ್ಸು ಮಾಡಿದರಂತೆ. ಚಿತ್ರದ ಕಥೆ ಮತ್ತು ಹಾಡು ಎಲ್ಲವೂ ಸೊಗಸಾಗಿದೆ. ಒಳ್ಳೆಯ ತಂಡ ಚೆನ್ನಾಗಿ ಕೆಲಸ ಮಾಡಿದೆ. ಪ್ರೇಕ್ಷಕರಿಗೆ ನಮ್ಮ ಸಿನಿಮಾ ಇಷ್ಟವಾಗುವ ನಂಬಿಕೆ ಇದೆʼ ಎಂಬುದು ರಾಕೇಶ್‌ ಚೆಲುವರಾಜ್‌ ಮಾತು.

ಸತ್ಯ, ಸಂಗೀತ ನಿರ್ದೇಶಕ

ಸಂಗೀತ ನಿರ್ದೇಶಕ ಸತ್ಯ ರಾಧಾಕೃಷ್ಣ ಮತ್ತು ಜತಿನ್‌ ದರ್ಶನ್‌ ಸಂಗೀತ ನೀಡಿದ್ದಾರೆ. ತಮ್ಮ ಸಂಗೀತದ ಬಗ್ಗೆ ಮಾತನಾಡಿದ ಸತ್ಯ ರಾಧಾಕೃಷ್ಣ, “ಇಲ್ಲಿ ಎರಡು ಹಾಡುಗಳಿವೆ. ನಾನು “ವಿರೂಪ” ಚಿತ್ರದಲ್ಲಿ ಕೆಲಸ ಮಾಡುವಾಗ, ನಿರ್ದೇಶಕರ ಪರಿಚಯವಾಯ್ತು. ಅದು ಈ ಸಿನಿಮಾ ಆಗುವರೆಗೆ ಬಂದು ನಿಂತಿದೆ. ಒಂದು ಹಾಡನ್ನು ನಾನು ಹಾಡಿದ್ದೇನೆ. ಇನ್ನೊಂದು ಚೇತನ್‌ ನಾಯಕ್‌ ಹಾಡಿದ್ದಾರೆ ಎಂದು ವಿವರ ಕೊಟ್ಟರು.

ರಿಧಿ ರಾವ್‌

ನಾಯಕಿ ರಿಧಿರಾವ್‌ ಅವರಿಲ್ಲಿ ಪೃಥ್ವಿ ಎಂಬ ಪಾತ್ರ ನಿರ್ವಹಿಸಿದ್ದಾರಂತೆ. ಇಬ್ಬರು ನಾಯಕರ ಜೊತೆ ಸಾಗುವ ಕಥೆಯಲ್ಲಿ ಪ್ರೀತಿಯ ಅಂಶಗಳಿವೆ ಎಂದರೆ, ಮತ್ತೊಬ್ಬ ಹೀರೋ ಸಾವನ್‌ ಸಿಂಗ್‌ ಠಾಕೂರ್‌, ಇಲ್ಲಿ ಚಂದು ಎಂಬ ಮುಗ್ಧ ಹುಡುಗನ ಪಾತ್ರ ಮಾಡಿದ್ದಾಗಿ ಹೇಳಿಕೊಂಡರು. ನೃತ್ಯ ನಿರ್ದೇಶಕ ವಿಜಯ್‌ ಅವರು ಎರಡು ಸಾಂಗ್‌ಗಳಿಗೆ ನೃತ್ಯ ನಿರ್ದೇಶನ ಮಾಡಿದರ ಬಗ್ಗೆ ಹೇಳಿಕೊಂಡರು. ಎಲ್ಲವೂ ಅಂದುಕೊಂಡಂತೆ ನಡೆದರೆ, ಡಿಸೆಂಬರ್‌ನಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ರಾಮಿಶೆಟ್ಟಿ ಪವನ್‌

Related Posts

error: Content is protected !!