ಪಲ್ಲಕ್ಕಿಯ ಮದಕರಿಪುರ ರೆಡಿ – ಡಿಸೆಂಬರ್‌ಗೆ ಕಿಚ್ಚ ಮಾತಾಡುವ ಸಿನಿಮಾ

ಕಾದಂಬರಿ ನಾಟಕ ಆಧಾರಿತ ಚಿತ್ರ

 

ಪಲ್ಲಕ್ಕಿ ರಾಧಾಕೃಷ್ಣ ನಿರ್ದೇಶಿಸಿ, ನಿರ್ಮಿಸಿರುವ “ಮದಕರಿಪುರ” ಸಿನಿಮಾ ಬಗ್ಗೆ ಎಲ್ಲರಿಗೂ ಗೊತ್ತಿದೆ. ಈಗ ಈ ಸಿನಿಮಾಗೆ ಸೆನ್ಸಾರ್‌ ಮಂಡಳಿ ವೀಕ್ಷಿಸಿ, “ಯು/ಎ” ಪ್ರಮಾಣ ಪತ್ರ ನೀಡಿದೆ. ತಾತಾ ಪ್ರೊಡಕ್ಷನ್ಸ್‌ನಲ್ಲಿ ಪಲ್ಲಕ್ಕಿ ನಿರ್ಮಿಸಿರುವ ನಾಲ್ಕನೇ ಸಿನಿಮಾ ಇದು. ಅಂದಹಾಗೆ, ಈ ಸಿನಿಮಾದ ಶೀರ್ಷಿಕೆಗೆ “ಕಿಚ್ಚ ಮಾತಾಡ್ತಾನೆ” ಎಂಬ ಅಡಿಬರಹವಿದೆ.

ಸದ್ಯ ಚಿತ್ರ ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಡಿಸೆಂಬರ್‌ನಲ್ಲಿ ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಜೊತೆಗೆ ಹಾಡುಗಳನ್ನೂ ಬರೆದು ನಿರ್ದೇಶಿಸಿರುವ ಪಲ್ಲಕ್ಕಿ, “ಗಿಡ್ಡೋಬಾ ಮಾತಾಡ್ತಾನೆ” ಕಾದಂಬರಿ ನಾಟಕ ಆಧರಿಸಿ ಚಿತ್ರ ಮಾಡಿದ್ದಾರೆ. ಇದು ವಾಲ್ಮೀಕಿ ರಾಮಾಯಣದ ಎಳೆಯೊಂದನ್ನು ಆಧರಿಸಿ, ಕಾಮಿಡಿ, ಮರ್ಡರ್‌ ಮಿಸ್ಟ್ರಿ ಜೊತೆ ಒಂದಷ್ಟು ನೈಜ ಘಟನೆಗಳನ್ನು ಆಧರಿಸಿದ ʼಗಿಡ್ಡೋಬಾ ಮಾತಾಡ್ತಾನೆ” ಕಾದಂಬರಿ ನಾಟಕ ಚಿತ್ರಕ್ಕೆ ರಾಜಾಶಿವಶಂಕರ್‌ ಅವರು ಛಾಯಾಗ್ರಹಣ ಮಾಡಿದರೆ, ಸ್ಯಾಮ್‌ ಸಂಗೀತವಿದೆ. ಗೌತಮ್‌ ಪಲ್ಲಕ್ಕಿ ಸಂಕಲನ ಮಾಡಿದ್ದಾರೆ.

ಡಿಫರೆಂಟ್‌ ಡ್ಯಾನಿ ಸಾಹಸವಿದೆ. ತ್ರಿಭುವನ್‌ ಅವರ ನೃತ್ಯ ನಿರ್ದೇಶನವಿದೆ. ಬಹುತೇಕ ಬೆಂಗಳೂರು, ಹಿರಿಯೂರು, ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ನಂದಿಗ್ರಾಮ, ಕೈವಾರ ಸ್ಟುಡಿಯೋದಲ್ಲಿ ಚಿತ್ರೀಕರಿಸಲಾಗಿದೆ. ಚಿತ್ರದಲ್ಲಿ ಡಾ.ರಾಧಾಕೃಷ್ಣ ಪಲ್ಲಕ್ಕಿ, ಪ್ರಕಾಶ್‌ ಅರಸ್‌, ಎಂ.ಕೆ.ಮಠ, ಶ್ರೀನಿವಾಸ ಗುರೂಜಿ, ನೈರುತ್ಯ, ಸೀನೂ ಮಾರ್ಕಾಳಿ, ವಿನಯ್‌ ಬಲರಾಮ್‌, ಅರ್ಗವಿ ರಾಯ್‌, ರೆಡ್ಡಿ ಹಿರಿಯೂರ್‌, ಸವಿತಾ ಚಿನ್ಮಯಿ, ವೆಂಕಟಾಚಲ ಸೇರಿದಂತೆ ಪಲ್ಲಕ್ಕಿ ಫಿಲಂ ಇನ್ಸ್‌ಟಿಟ್ಯೂಟ್‌ ವಿದ್ಯಾರ್ಥಿಗಳು ನಟಿಸಿದ್ದಾರೆ.

 

Related Posts

error: Content is protected !!