ಹಣ ಮಾಡೋದಿಕ್ಕೆ ನಾನ್ ಈ ಸಿನ್ಮಾ‌‌ ಮಾಡಿಲ್ಲ- ಡಾ. ಜಾಕ್ಲಿನ್ ಫ್ರಾನ್ಸಿಸ್

ಚಿತ್ರ ತಂಡದ‌ ಭವಿಷ್ಯಕ್ಕೆ‌ ಸಿನಿಮಾ‌‌ ನಿರ್ಮಾಣ ಮಾಡಿದೆ ಅಂದ‌‌‌ ನಾನೊಂಥರ ನಿರ್ಮಾಪಕಿ 

ಹಣ ಮಾಡ್ಬೇಕು‌ ಅನ್ನೋದಲ್ಲ,‌ ನನ್ನಿಂದ ಒಂದಷ್ಟು ಜನರಿಗೆ ಉಪಯೋಗ ಆಗುತ್ತೆ ಅನ್ನೋದೇ ‘ ನಾನೊಂಥರ’ ‌ಹೆಸರಿನ ಚಿತ್ರ ನಿರ್ಮಾಣ ಮಾಡಿದ್ದಕ್ಕೆ ಇರೋ ಮುಖ್ಯ ಕಾರಣ…

ವೃತ್ತಿಯಲ್ಲಿ ನೀವು ವೈದ್ಯರು.‌ ಅಲ್ಲಿಯೇ ಸಾಕಷ್ಟು ಕೆಲಸ, ಕೈ ತುಂಬಾ ಸಂಪಾದನೆ‌ಯಿದೆ.‌ ಅಷ್ಟಾಗಿಯೂ ಈ ಸಿನಿ‌ ದುನಿಯಾಕ್ಕೆ ನಿರ್ಮಾಪಕರಾಗಿ ಯಾಕೆ ಬಂದ್ರಿ ಎನ್ನುವ ಪ್ರಶ್ನೆಗೆ ಡಾ.‌ಜಾಕ್ಲಿನ್ ಫ್ರಾನ್ಸಿಸ್ ಕೊಟ್ಟ ಉತ್ತರ ಹೀಗಿತ್ತು.

ಅಂದ ಹಾಗೆ, ‘ನಾನೊಂಥರ’ ಅನ್ನೋದು ಹೊಸಬರ ಚಿತ್ರ. ನಿರ್ದೇಶಕರು, ನಿರ್ಮಾಪಕರು, ಕಲಾವಿದರು ಸೇರಿದಂತೆ ಎಲ್ಲರೂ ಹೊಸಬರು. ಸಿನಿಮಾ ಮೇಲಿನ ಆಸಕ್ತಿಯಿಂದ ಹೊಸಬರೇ ಸೇರಿಕೊಂಡು ಮಾಡಿರುವ ಚಿತ್ರ. ಡಿಸೆಂಬರ್ 18 ಕ್ಕೆ  ತೆರೆಗೆ ಬರುತ್ತಿದೆ.

ಎಲ್ಲವೂ ಅಂದುಕೊಂಡಂತಾಗಿದ್ದರೆ ಈ ಚಿತ್ರವು ಕಳೆದ ಮಾರ್ಚ್ ತಿಂಗಳಲ್ಲೆ ತೆರೆಗೆ ಬರಬೇಕಿತ್ತು. ಇನ್ನೇನು ಚಿತ್ರ ತಂಡವು ತಾವು  ರಿಲೀಸ್ ಗೆ  ರೆಡಿ ಎಂದು ಅನೌನ್ಸ್ ಮಾಡುವ ಹೊತ್ತಿಗೆ ಕೊರೋನಾ ಬಂತು. ಚಿತ್ರರಂಗ ಬಂದ್ ಆಯ್ತು. ಪರಿಣಾಮ ಈಗ ‘ನಾನೊಂಥರ ‘ ಚಿತ್ರಕ್ಕೂ ಬಿಡುಗಡೆ ಭಾಗ್ಯ ಸಿಕ್ಕಿದೆ. ಕೊರೋನಾ ಭೀತಿಯ ನಡುವೆಯೇ ‘ ಆಕ್ಟ್ 1978’ ಚಿತ್ರ ಬಿಡುಗಡೆ ಆಗಿ ದೊಡ್ಡ ಸಕ್ಸಸ್ ಕಂಡ ಬೆನ್ನಲೇ ‘ ‘ನಾನೊಂಥರ ‘ ಚಿತ್ರವು ತೆರೆಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ನಿರ್ಮಾಪಕಿ ಡಾ.ಜಾಕ್ಲಿನ್‌ ಫ್ರಾನ್ಸಿಸ್ ಚಿತ್ರದ ವಿಶೇಷತೆ ಜತೆಗೆ ತಮ್ಮ ಹಿನ್ನೆಲೆ ಕುರಿತು’ ಸಿನಿಲಹರಿ ‘ಜತೆಗೆ ಮಾತನಾಡಿದರು.

ಜೈ ಸನ್, ಡಾ. ಜಾಕ್ಲಿನ್ ಫ್ರಾನ್ಸಿಸ್

ಬಾಲ್ಯದಿಂದಲೂ‌ ಇತ್ತು ಸಿನಿಮಾ ನಂಟು…

ನಾನೀಗ ವೃತ್ತಿಯಲ್ಲಿ ವೈದ್ಯೆ. ಆದರೆ ಸಿನಿಮಾ‌ ಅನ್ನೊದು ನನಗೆ ಬಾಲ್ಯದಿಂದಲೂ ಇರುವ ನಂಟು. 8 ನೇ ತರಗತಿಯಲ್ಲಿ ದ್ದಾಗಲೇ ನಾನು ರಾಜ್ ಕುಮಾರ್ ಅಭಿನಯದ’ ಧ್ರುವತಾರೆ ‘ಚಿತ್ರದಲ್ಲಿ ಬಾಲ ನಟಿಯಾಗಿ ಅಭಿನಯಿಸಿದ್ದೆ. ಅದು ಅಮ್ಮನ ಕಾರಣಕ್ಕೆ. ಯಾಕಂದ್ರೆ, ನನ್ನಮ್ಮನಿಗೆ ನಾನು ನಟಿಯಾಗಬೇಕೆನ್ನುವ ಹುಚ್ಚು. ಅದಕ್ಕೆ‌ಕಾರಣ ಬಟ್ಟೆ ಮೇಲೆ ನನಗಿದ್ದ ಮೋಹ. ತುಂಬಾ ಬಟ್ಟೆ ತೊಡುತ್ತಿದೆ. ಚಂದದ ಬಟ್ಟೆ ಕಂಡ್ರೆ ಅವುಗಳನ್ನು ಕೊಂಡು ತಂದುತೊಡುವುದು, ಶಾಲೆಗಳಲ್ಲಿನ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು‌ ನೋಡಿ, ನೀನು ನಟಿ ಆಗ್ಬೇಕು ಎನ್ನುತ್ತಿದ್ದರು. ಆಗಲೇ ಧ್ರುವತಾರೆ ಸಿನಿಮಾಕ್ಕೆ‌ ಬಾಲನಟಿಯಾಗಲು ಆಡಿಷನ್ಸ್ ಗೆ ಹೋದೆ. ಅದೃಷ್ಟವಶಾತ್ ಅಲ್ಲಿ ಆಯ್ಕೆಯಾದೆ . ರಾಜಕುಮಾರ್ ಸೇರಿದಂತೆದೊಡ್ಡ ಕಲಾವಿದರ ಜತೆಗೆ ಅಭಿನಯಿಸುವ ಅವಕಾಶ ಸಿಕ್ಕಿತು.‌ಅ ಹೊತ್ತಿಗೆ ನನ್ನ ಅಮ್ಮನ‌ ಆಸೆ ಕೂಡ ಈಡೇರಿತು.ಮುಂದೆ ಓದು ನನ್ನ ಟಾರ್ಗೆಟ್ ಆಯಿತು. ಅಂದುಕೊಂಡಂತೆ ಮೆಡಿಕಲ್ ಓದಿ‌ ಡಾಕ್ಟರ್ ಆದೆ.

ಚಿತ್ರದ ನಾಯಕ ತಾರಕ್, ನಾಯಕಿ ರಕ್ಷಿಕಾ

ಕತೆಗಿಂತ ಅವರ ಭವಿಷ್ಯ‌ ಮುಖ್ಯ ಎನಿಸಿತು…

‘ನಾನೊಂಥರ ‘ ಒಂದೊಳ್ಳೆಯ ಕಥಾ ಹಂದರದ ಚಿತ್ರ.‌ಒಂದಿನ‌ ನಿರ್ದೇಶಕ ರಮೇಶ್ ಹಾಗೂ ನಾಯಕ‌ ನಟ‌ ತಾರಕ್ ಮಿಟ್ ಮಾಡಿ ಕತೆ ಹೇಳಿದ್ರು. ಕತೆ ಹಾರ್ಟ್ ಗೆ ಟಚ್ ಆಗುವ ಹಾಗಿತ್ತು. ನಿರ್ಮಾಣಕ್ಕೆ ಬಂಡವಾಳ ಹಾಕಿದರೆ ನಷ್ಟ ಇಲ್ಲ ಅಂತೆನಿಸಿತು. ಪ್ರೇಕ್ಷಕರಿಗೂ ಒಂದೊಳ್ಳೆಯ ಸಿನಿಮಾ‌‌ಕೊಟ್ಟ ತೃಪ್ತಿ ಸಿಗಬಹುದು ಅಂತೆನಿಸಿತು.‌ಅದಕ್ಕಿಂತ ಮುಖ್ಯವಾಗಿ ನನಗೆ ಏನೇನೋ ಕನಸು ಹೊತ್ತು ಬಂದ ನಿರ್ದೇಶಕ ರಮೇಶ್ ಹಾಗೂ‌ ನಾಯಕ‌ನಟ ತಾರಕ್ ಅವರ ಭವಿಷ್ಯವೂ ಮುಖ್ಯ ಎನಿಸಿತು. ಅವರ ಕನಸಿಗೆ ಬೆಂಬಲವಾಗಿ ನಿಂತರೆ ಮುಂದೆ ಅವರು ಉನ್ನತ ಹಂತಕ್ಕೆ ಹೋಗಬಹುದು ಅಂತೆನಿಸಿತು. ಹಾಗಾಗಿ ಹಿಂದು ‌ಮುಂದು‌ನೋಡದೆ ಈ‌ಸಿನಿಮಾ‌ಕ್ಕೆ‌ ಬಂಡವಾಳ ಹಾಕುತ್ತೇನೆ ಅಂತ ಮಾತು‌ಕೊಟ್ಟೆ.‌ಅಲ್ಲಿಂದ ವೈದ್ಯಕೀಯ ಕ್ಷೇತ್ರದಲ್ಲಿದ್ದ ನಾನು ಸಿನಿಮಾ‌ ನಿರ್ಮಾಪಕಿ‌ ಎನ್ನುವ ಜವಾಬ್ದಾರಿ ಹೊತ್ತಿಕೊಂಡೆ.

ತಾರಕ್

ಎಲ್ಲರಿಗೂ ಇಷ್ಟವಾಗುವ ಸಿನಿಮಾ…

‘ನಾನೊಂಥರ’  ಎಲ್ಲರಿಗೂ ಇಷ್ಟವಾಗುವ ಸಿನಿಮಾ. ನಮ್ಮ‌ಸಿನಿ‌ಮಾ‌ ಎನ್ನುವ ಪ್ರೀತಿ, ಕಾಳಜಿ ಅಥವಾ ವ್ಯಾಮೋಹಕ್ಕೆ ನಾನೀ ಮಾತು ಹೇಳುತ್ತಿಲ್ಲ, ಇದರ ಕತೆಯೇ ಹಾಗಿದೆ. ಒಬ್ಬ ಕುಡುಕ ಗಂಡ, ಜವಾಬ್ದಾರಿಯುತ ಹೆಂಡತಿ‌ ಸುತ್ತಲ ಕತೆ ಪ್ರತಿಯೊಬ್ಬ ರ ಫ್ಯಾಮಿಲಿಗೂ ಕನೆಕ್ಟ್‌ಆಗುತ್ತೆ.‌ಅಲ್ಲಿ ಅದಷ್ಟೇ ಇಲ್ಲ. ಮಗನಿಗಾಗಿ‌ ಪರಿತಪಿಸುವ ತಂದೆ, ಕಟ್ಟಿಕೊಂಡವನನ್ನು‌ ಸರಿ ದಾರಿಗೆ ತರಲು ಪರದಾಡುವ ಹುಡುಗಿ, ಅಣ್ಣನಿಗಾಗಿ ಎಲ್ಲವನ್ನು ತ್ಯಾಗ ಮಾಡಿ ನಿಲ್ಲುವ ಸಹೋದರ.. ಹೀಗೆ ಪ್ರತಿ ಪಾತ್ರಗಳು ಅಲ್ಲಿ ಹೈಲೈಟ್ಸ್. ಇಂತಹದೊಂದು ಸಿನಿಮಾ ಮಾಡಿ, ಚಿತ್ರ ಮಂದಿರಕ್ಕೆ ತರುತ್ತಿರುವ ನಮಗೆ ಇಲ್ಲಿ ಎಲ್ಲವೂ ಹೊಸದು.‌ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ? ಚಿತ್ರ ತಂಡದ ಮುಂದಿನ‌ ಭವಿಷ್ಯವೇನು? ಒಂಥರ ಆತ‌ಂಕ, ಇನ್ನೊಂದೆಡೆ‌ ಚಿತ್ರ ಚೆನ್ನಾಗಿದೆ ಎನ್ನುವ ನಂಬಿಕೆ.

ಮಗ ಜೈಸನ್ ಮುಂದೆ ಹೀರೋ...

ಅದು ರಕ್ತಗತ ನಂಟೋ ಏನೋ ಗೊತ್ತಿಲ್ಲ. ನಾನು ಬಾಲ್ಯದಲ್ಲಿದ್ದಾಗ ನಾನು‌ನಟಿ ಆಗ್ಬೇಕು ಅನ್ನೊದು‌ನನ್ನಮ್ಮನ‌ಆಸೆ‌ ಆಗಿತ್ತು. ಅದೇ ಕಾರಣಕ್ಕೆ ನಾನು ಆಡಿಷನ್ಸ್ ಗೆ ಹೋಗಿ ಬಾಲ‌ ನಟಿ‌ಆಗಿ ಅಭಿನಯಿಸಿದೆ.‌ಈಗ ನನ್ನ‌ಮಗ ಕೂಡ ನಟ‌ನಾಗಿ‌ ನಿಮ್ಮ‌ಮುಂದೆ‌ ಬರುತ್ತಿದ್ದಾನೆ. ಹಾಗಂತ ಆತ ನಟ ಆಗ್ಬೇಕು‌ ಅನ್ನೋದು ನನ್ನಾಸೆ ಅಲ್ಲ. ಒತ್ತಡವೂ ಇಲ್ಲ. ಅದು ಆತನ ಆಸೆ.‌ ಒಬ್ಬ ತಾಯಿಯಾಗಿ ನಾನೀಗ ಆತನ‌ ಆಸೆ ಈಡೇರಿಸುತ್ತಿದ್ದೇನೆ. ಈ‌ ಚಿತ್ರದಲ್ಲಿ‌ಆತ ನಾಯಕನ ಸಹೋದರ. ಆತನ‌ವಯಸ್ಸಿಗೆ ಅದೊಂದು‌ಒಳ್ಳೆಯ ಪಾತ್ರ.‌ತುಂಬಾ ಚೆನ್ನಾಗಿ ಅಭಿನಯಿಸಿದ್ದಾನೆ. ಎಲ್ಲರಿಗೂ ಇಷ್ಟವಾಗಿದೆ.‌ಒಳ್ಳೆಯ ಕಲಾವಿದ ಆಗ್ತಾನೆ‌ ಅಂತ ಚಿತ್ರ‌ತಂಡ ಬೆನ್ನು ತಟ್ಟಿದೆ. ಮುಂದೆ ಆತನನ್ನು ಹೀರೋ‌ಆಗಿ‌ಪರಿಚಯಿಸಬೇಕೆನ್ನುವ ಹಂಬಲ ನಮಗೂ‌ ಇದೆ. ಎಲ್ಲದಕ್ಕೂ ಪ್ರೇಕ್ಷಕರ ಅಶೀರ್ವಾದ ಬೇಕು.

ಬಹು ದಿನಗಳ ನಂತರ ನಾನೂ‌ ಬಣ್ಣ ಹಚ್ಚಿದೆ…

ನಾನೊಂಥರ ಸಿನಿಮಾ ನನ್ನ ಮಟ್ಟಿಗೆ ಅತೀ‌ಮುಖ್ಯ.‌ ಯಾಕಂದ್ರೆ ಬಹು ದಿನಗಳ‌ನಂತರ ನಾನಗೂ ಸಿನಿಮಾ‌ ಜಗತ್ತಿಗೂ ಇದ್ದ  ನಂಟು ನೆನಪಿಸಿತು.‌ಹಾಗೆಯೇ ಪುತ್ರ ಕೂಡ ನಟನಾಗಿ ಪರಿಚಯವಾಗುತ್ತಿದ್ದಾನೆ.‌ಅದರ ಜತೆಗೆಯೇ ಹಲವು ವರ್ಷಗಳ ನಂತರ ನಾನೂ ಕೂಡ ಇಲ್ಲಿ ಬಣ್ಣ ಹೆಚ್ಚಿದೆ. ಅದೊಂದು ‌ಚಿಕ್ಕ ಪಾತ್ರ. ಚರ್ಚ್ ನ ಮದರ್ ಆಗಿ ಕಾಣಿಸಿಕೊಂಡಿದ್ದೇನೆ. ನಿರ್ದೇಶಕರು ಒಳ್ಳೆಯ ಪಾತ್ರ ಕೊಟ್ಟಿದ್ದಾರೆ. ನನಗೆ ಖುಷಿ ನೀಡುವ ಹಾಗೆ ಅಭಿನಯಿಸಿದ್ದೇನೆ ಎನ್ನುವ ನಂಬಿಕೆ ಇದೆ. ಉಳಿದಿದ್ದು ಪ್ರೇಕ್ಷಕರಿಗೆ ಬಿಟ್ಟಿದ್ದು.

ಪ್ರೇಕ್ಷಕರ ಆಶೀರ್ವಾದ ವೇ ನಮಗೆ ಮುಖ್ಯ…

ಹಣ ಮಾಡ್ಬೇಕು ಅಂತ ನಾನು ಈ ಸಿನಿಮಾಮಾಡಿಲ್ಲ. ತಂಡ ಭವಿಷ್ಯ ಚೆನ್ನಾಗಿರಲಿ ಅಂತ ಹಣ ಹಾಕಿದ್ದೇನೆ.‌ಇದು ಕೈ ಗೂಡಬೇಕಾದರೆ ಜನರ‌ ಆಶೀರ್ವಾದ ಬೇಕು.‌ಹಾಗಂತ ಸಿನಿಮಾ‌ಕೆಟ್ಟದ್ದಾಗಿದ್ದರೂ ಬಂದು ‌‌ಸಿನಿಮಾ‌ ನೋಡಿ‌‌ ಅಂತ ಹೇಳಲಾರೆ.‌ಸಿನಿಮಾ‌ ಚೆನ್ನಾಗಿದೆ.‌ಎಲ್ಲರಿಗೂ ಇಷ್ಟವಾಗುತ್ತೆ ಎನ್ನುವ ವಿಶ್ವಾಸವೇ ಅದಕ್ಕೆ ಕಾರಣ.

Related Posts

error: Content is protected !!