ಡಿಯರ್ ಸತ್ಯಗೆ ಅಪ್ಪು ಅಪ್ಪಿಗೆ!

ಫೆಬ್ರವರಿಗೆ ರಿಲೀಸ್ ಗೆ ರೆಡಿಯಾದ ಸಸ್ಪೆನ್ಸ್, ಥ್ರಿಲ್ಲರ್ ಚಿತ್ರ

ಬಿಗ್ ಬಾಸ್ ಜತೆಗೆ ಕಿರುತೆರೆ ಹಲವು ರಿಯಾಲಿಟಿ ಶೋಗಳಲ್ಲಿ ಒಂದಷ್ಟು ಹೆಸರು ಮಾಡಿಕೊಂಡು ಬೆಳ್ಳಿತೆರೆಗೆ ಬಂದವರು ಯುವ ನಟ ಸಂತೋಷ್ ಆರ್ಯನ್.‌ಇದೀಗ ಅವರು ನಾಯಕರಾಗಿ ಕಾಣಿಸಿಕೊಂಡಿರುವ ‘ಡಿಯರ್ ಸತ್ಯ’ ಚಿತ್ರ ರಿಲೀಸ್ ಗೆ ರೆಡಿಯಾಗಿದೆ. ಎಲ್ಲವೂ ಅಂದುಕೊಂಡಂತಾದರೆ ಈ ಚಿತ್ರ ಹೊಸ ವರ್ಷದ ಆರಂಭದಲ್ಲೆ ತೆರೆಗೆ ಬರುವುದು ಗ್ಯಾರಂಟಿ ಆಗಿದೆ. ಸದ್ಯಕ್ಕೆ ಅದೇ ಸಿದ್ಧತೆಯಲ್ಲಿ ಬ್ಯುಸಿಯಾಗಿರುವ ಚಿತ್ರ ತಂಡ, ಕೊರೋನಾ‌ಭೀತಿಯ ನಡುವೆಯೂ ಅದ್ದೂರಿಯಾಗಿ ಆಡಿಯೋ ಲಾಂಚ್ ಮಾಡುವ ಮೂಲಕ ರಿಲೀಸ್ ಪ್ರಚಾರ ಆರಂಭಿಸಿತು.

ಬೆಂಗಳೂರಿನ ರಾಜಾಜಿನಗರ ಒರಾಯನ್ ಮಾಲ್ ನ‌ ಪಿವಿಆರ್ ಚಿತ್ರ ಮಂದಿರದಲ್ಲಿ ಚಿತ್ರ ತಂಡವು ಆಡಿಯೋ ಲಾಂಚ್ ಕಾರ್ಯಕ್ರಮ‌ಆಯೋಜಿಸಿತ್ತು. ಲಾಕಡೌನ್ ನಂತರ ನಡೆದ ಮೊದಲ ಆಡಿಯೋ‌ಲಾಂಚ್ ಕಾರ್ಯಕ್ರಮ ಕೂಡ ಇದಾಗಿತ್ತು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ನಟ ವಿಜಯ್ ರಾಘವೇಂದ್ರ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಬಂದಿದ್ದರು. ಚಿತ್ರ ತಂಡವು ಆಡಿಯೋ ಲಾಂಚ್ ಜತೆಗೆ ಚಿತ್ರ ಟೀಸರ್ ಹಾಗೂ ಪಿಆರ್ ಇ ಮ್ಯೂಜಿಕ್ ಸಂಸ್ಥೆಯ ಉದ್ಘಾಟನೆ ಕಾರ್ಯಕ್ರಮ ಕೂಡ ಆಯೋಜಿಸಿತ್ತು‌. ಕೇಕ್ ಕತ್ತರಿಸುವ ಮೂಲಕ ಈ ಮೂರಕ್ಕೂ ನಟ ಪುನೀತ್ ರಾಜ್ ಕುಮಾರ್ ಚಾಲನೆ ನೀಡಿದರು.

‘ ಲಾಕ್ ಡೌನ್ ನಂತರ ಅಧಿಕೃತ ಕಾರ್ಯಕ್ರಮಕ್ಕೆ ಅಂತ ಒರಾಯನ್ ಮಾಲ್ ಗೆ ಬಂದಿದ್ದು ಇದೇ ಮೊದಲು. ಇದಕ್ಕೆ ಕಾರಣ ಗೆಳೆಯ ನಿರ್ಮಾಪಕ ಯತೀಶ್ ಕುಮಾರ್. ಅವರದೇ ಸಿನಿಮಾ ಇದು‌. ಒಂದೊಳ್ಳೆಯ ಸಿನಿಮಾ ಮಾಡಿರುವ ಖುಷಿ ಅವರಲ್ಲಿದೆ. ಅವರು‌ ಬಂದು ಕರೆದಾಗ ಬೇಡ ಎನ್ನಲಾಗಲಿಲ್ಲ. ಚಿತ್ರದ ಹಾಡುಗಳು ಚೆನ್ನಾಗಿವೆ. ನಾಯಕ‌ ನಟ ಸಂತೋಷ್ ಕೂಡ ನಂಗೆ ಗೊತ್ತು. ಅವರಿಗೂ ಒಳ್ಳೆಯದಾಗಲಿ. ಕೊರೋನಾ‌ಇಲ್ಲ ಅಂತ ಯಾರು‌ಕೂಡ ನಿರ್ಲಕ್ಷ್ಯ ಮಾಡಬೇಡಿ. ಎಚ್ಚರಿಕೆ ಇರಲಿ. ಹಾಗೆಯೇ ಒಳ್ಳೆಯ ದಿನಗಳು ಆದಷ್ಟು ಬೇಗ ಬರಲಿ’ ಅಂತ ಪುನೀತ್ ರಾಜ್ ಕುಮಾರ್ ಚಿತ್ರ ತಂಡಕ್ಕೆ ಶುಭ ಹಾರೈಸಿದರು. ನಟ ವಿಜಯ್ ರಾಘವೇಂದ್ರ ಕೂಡ ಚಿತ್ರ ತಂಡಕ್ಕೆ‌ಶುಭ ಹರಿಸಿದರು.

ಪರ್ಪಲ್ ರಾಕ್ ಎಂಟರ್ ಟೈನರ್ಸ್ ಮತ್ತು ವಿಂಟರ್ ಬ್ರಿಡ್ಜ್ ಸ್ಟುಡಿಯೋಸ್ ಸಹಯೋಗದಲ್ಲಿ ನಿರ್ಮಾಣವಾದ ಚಿತ್ರವಿದು.’ಭಿನ್ನ’ ಚಿತ್ರದ ಗೆಲುವಿನ ನಂತರ ಯತೀಶ್ ವೆಂಕಟೇಶ್, ಬಿ.ಎಸ್. ಶ್ರೀನಿವಾಸ್, ಗಣೇಶ್ ಪಾಪಣ್ಣ ಮತ್ತು ಅಜಯ್ ಅಪ್ಪರೂಪ್ ಈ ಚಿತ್ರದ ನಿರ್ಮಾಣಕ್ಕೆ ಬಂಡವಾಳ ಹೂಡಿದ್ದು, ಕತೆಗೆ ಪೂರಕವಾಗಿಯೇ ಚಿತ್ರವನ್ನು ಅದ್ದೂರಿಯಾಗಿ ತೆರೆಗೆ ತಂದಿದ್ದಾರೆ‌.
‘ನೂರು ಜನ್ಮಕೂ’ ಚಿತ್ರದ ಮೂಲಕ ಹೀರೋ ಆಗಿ ಲಾಂಚ್ ಆಗಿದ್ದ ಸಂತೋಷ್ ಆರ್ಯನ್, ಈ ಚಿತ್ರದ ಮೂಲಕ ಹೀರೋ ಆಗಿ ಮತ್ತೊಮ್ಮೆ‌ಬೆಳ್ಳಿತೆರೆಯಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಶಿವಣ್ಣ ಚಿತ್ರದ ಟೀಸರ್ ಲಾಂಚ್ ಮಾಡಿದ್ದರು, ಈಗ ಅಪ್ಪು ಸರ್ ಆಡಿಯೋ‌ ಲಾಂಚ್ ಮಾಡಿದ್ದಾರೆ. ಇದು ನನ್ನ ಸೌಭಾಗ್ಯ ಅಂತ ಸಂತೋಷ್ ಹೇಳಿದರು‌.

ನಟಿ ಅರ್ಚನಾ ಕೊಟ್ಟಿಗೆ ಈ ಚಿತ್ರದ ನಾಯಕಿ. ಅವರಿಗಿದು ಮೊದಲ ಕಮರ್ಷಿಯಲ್ ಸಿನಿಮಾ. ದೊಡ್ಡ ಚಿತ್ರದಲ್ಲಿ ಅಭಿನಯಿಸಿದ ಖುಷಿ ಅವರಿಗಿದೆ. ಹಾಗಂತ ಖುಷಿ ಹಂಚಿಕೊಂಡರು.ಇನ್ನು ಆಡಿಯೋ ಬಿಡುಗಡೆ ಸಮಾರಂಭವಾಗಿದ್ದರಿಂದ ಕಾರ್ಯಕ್ರಮದ ಹೀರೋ ಶ್ರೀಧರ್ ವಿ ಸಂಭ್ರಮ್​, ಹಾಡುಗಳ ಬಗ್ಗೆ ಮಾಹಿತಿ ನೀಡಿದರು. ‘ಕರೊನಾ ಸಮಯದಲ್ಲಿ ಚಿತ್ರದ ಆಡಿಯೋ ಬಿಡುಗಡೆ ಆಗುತ್ತಿರುವುದೇ ಖುಷಿಯ ವಿಚಾರ. 2021ಕ್ಕೆ ಒಳ್ಳೇ ದಿನಗಳು ಕಾಯುತ್ತಿವೆ. ಈ ಚಿತ್ರದಲ್ಲಿ ಐದು ಹಾಡುಗಳಿವೆ. ಮುಂದಿನ ನಿಲ್ದಾಣ ಚಿತ್ರದ ಇನ್ನೂನು ಬೇಕಾಗಿದೆ ಹಾಡಿಗೆ ಸಾಹಿತ್ಯ ಬರೆದಿದ್ದ ಪ್ರಮೋದ್ ಮರವಂತೆ ಈ ಚಿತ್ರದಲ್ಲಿನ ಹಾಡಿಗೂ ಸಾಹಿತ್ಯ ಬರೆದಿದ್ದಾರೆ.

ಶಿವಗಣೇಶ್

ಅದೇ ರೀತಿ ಶ್ವೇತಾ, ಅನುರಾಧಾ ಭಟ್, ಅನಿರುದ್ಧ ಶಾಸ್ತ್ರಿ, ಹೇಮಂತ್, ವಿಹಾನ್ ಹಾಡುಗಳಿಗೆ ಧ್ವನಿ ನೀಡಿ ನನ್ನ ಬಳಗದಲ್ಲಿದ್ದಾರೆ’ ಎಂದು ತಂಡವನ್ನು ಪರಿಚಯಿಸಿದರು ಶ್ರೀಧರ್ ವಿ ಸಂಭ್ರಮ್. ಸಂತೋಷ್ ಆರ್ಯನ್,. ಅರ್ಚನಾ ಕೊಟ್ಟಿಗೆ, ಅರುಣಾ ಬಾಲರಾಜ್, ಅಶ್ವಿನ್ ರಾವ್​ ಪಲ್ಲಕ್ಕಿ. ಅರವಿಂದ್ ರಾವ್, ಅಪ್ಪಣ್ಣ, ಗುರುರಾಜ್, ಆದರ್ಶ್​ ಚಂದ್ರಶೇಖರ್ ಇತರರು ಪಾತ್ರವರ್ಗದಲ್ಲಿದ್ದಾರೆ. ತಾಂತ್ರಿಕ ವರ್ಗದ ಬಗ್ಗೆ ಹೇಳುವುದಾದರೆ, ವಿನೋಧ ಭಾರತಿ ಛಾಯಾಗ್ರಹಣ, ಮೋಹನ್ ಮಾಸ್ಟರ್​ ಕೋರಿಯಾಗ್ರಾಫಿ, ಸುರೇಶ್​ ಆರ್ಮುಗಮ್ ಸಂಕಲನ, ಶ್ರೀಧರ್ ವಿ ಸಂಭ್ರಮ ಸಂಗೀತ, ಭಾರ್ಗವಿ ವಿಖ್ಯಾತಿ ಕಾಸ್ಟೂಮ್​ ವಿನ್ಯಾಸ ಮಾಡಿದ್ದಾರೆ.ಇನ್ನು ಚಿತ್ರದ ಕತೆಗೆ ಬಂದರೆ, ಬೆಂಗಳೂರೆಂಬ ಮಹಾನಗರದಲ್ಲಿ ಪ್ರೀತಿಯನ್ನು ಉಳಿಸಿಕೊಳ್ಳಲು ಹೆಣಗಾಡುವ, ತನ್ನ ಕನಸುಗಳನ್ನು ಈಡೇರಿಸಿಕೊಳ್ಳಲು ಯತ್ನಿಸುವ ಹುಡುಗನ ಕಥೆ ‘ಡಿಯರ್ ಸತ್ಯʼದಲ್ಲಿ ಜೀವ ಪಡೆದಿದೆ. ‘ಡಿಯರ್ ಸತ್ಯ’

Related Posts

error: Content is protected !!