ಪ್ರಶಾಂತ್‌ ನೀಲ್‌ ಕಥೆಯಲ್ಲಿ ಶ್ರೀಮುರಳಿ ಬಘೀರ

ರೋರಿಂಗ್‌ ಸ್ಟಾರ್‌ ಹುಟ್ಟುಹಬ್ಬಕ್ಕೆ ಹೊಂಬಾಳೆ ಕೊಡುಗೆ

ಇತ್ತೀಚೆಗಷ್ಟೇ ಹೊಂಬಾಳೆ ಫಿಲ್ಮ್ಸ್‌ ಡಿಸೆಂಬರ್‌ ೧೭ರಂದು ಹೊಸ ಸಿನಿಮಾ ಅನೌನ್ಸ್‌ ಮಾಡುವುದಾಗಿ ತಮ್ಮ ಟ್ವೀಟ್‌ ಮೂಲಕ ಹೇಳಿಕೊಂಡಿತ್ತು. ಹೊಸ ಚಿತ್ರದ ಘೋಷಣೆ ಮಾಡುವ ಸುದ್ದಿ ಸಾಕಷ್ಟು ಕುತೂಹಲವೂ ಮೂಡಿಸಿತ್ತು. ಅವರ ಹೊಸ ಸಿನಿಮಾ ಅನೌನ್ಸ್‌ ಕುರಿತಂತೆ “ಸಿನಿಲಹರಿ” ಈ ಹಿಂದೆಯೇ ಒಂದು ಸುದ್ದಿಯನ್ನು ಪೋಸ್ಟ್‌ ಮಾಡಿತ್ತು. ಡಿಸೆಂಬರ್‌ 17ರಂದು ಅನೌನ್ಸ್‌ ಮಾಡಲು ಕಾರಣ, ಅಂದು ರೋರಿಂಗ್‌ ಸ್ಟಾರ್‌ ಶ್ರೀಮುರಳಿ ಅವರ ಹುಟ್ಟುಹಬ್ಬ. ಹಾಗಾಗಿ, ಅವರ ಹೊಸ ಚಿತ್ರವನ್ನು ಅನೌನ್ಸ್‌ ಮಾಡಬಹುದು ಎಂದು ಹೇಳಿತ್ತು. ಈಗ ಆ ಸುದ್ದಿ ನಿಜವಾಗಿದೆ. ಹೌದು, ಶ್ರೀಮುರಳಿ ಅವರಿಗೆ ಹೊಂಬಾಳೆ ಫಿಲ್ಮ್ಸ್‌ “ಬಘೀರ” ಎಂಬ ಸಿನಿಮಾವನ್ನು ಅನೌನ್ಸ್‌ ಮಾಡಿದೆ.

ಹೌದು, ಇತ್ತೀಚೆಗಷ್ಟೇ ಹೊಂಬಾಳೆ ಫಿಲ್ಮ್ಸ್‌ ತೆಲುಗು ಸ್ಟಾರ್‌ ನಟ ಪ್ರಭಾಸ್‌ ಅಭಿನಯದ “ಸಲಾರ್‌” ಸಿನಿಮಾ ನಿರ್ಮಿಸುವ ಕುರಿತು ಅನೌನ್ಸ್‌ ಮಾಡಿತ್ತು. ಆ ಚಿತ್ರಕ್ಕೆ ಪ್ರಶಾಂತ್‌ ನೀಲ್‌ ನಿರ್ದೇಶಕ ಎಂಬುದನ್ನೂ ಹೇಳಿತ್ತು. ಅದರ ಬೆನ್ನೆಲ್ಲೇ ಹೊಂಬಾಳೆ ಫಿಲ್ಮ್ಸ್‌ ಮತ್ತೊಂದು ಬಿಗ್‌ ಬಜೆಟ್‌ ಸಿನಿಮಾ ಅನೌನ್ಸ್‌ ಮಾಡುವುದಾಗಿ ಹೇಳಿಕೊಂಡ ವಿಷಯ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಆ ಕುತೂಹಲಕ್ಕೆ ಈಗ ತೆರೆಬಿದ್ದಿದೆ. ಹೊಂಬಾಳೆ ಫಿಲ್ಮ್ಸ್‌ ಶ್ರೀಮುರಳಿ ಅವರಿಗೆ “ಬಘೀರ” ಘೋಷಣೆ ಮಾಡಿದೆ.

ಈ ಚಿತ್ರವನ್ನು ಡಾ.ಸೂರಿ ನಿರ್ದೇಶನ ಮಾಡುತ್ತಿದ್ದಾರೆ. ಪ್ರಶಾಂತ್‌ ನೀಲ್‌ ಅವರ ಕಥೆ ಇದಾಗಿದ್ದು, ವಿಜಯ್‌ ಕಿರಗಂದೂರು ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಎರಡು ದಿನಗಳ ಹಿಂದಷ್ಟೇ, “ಸಿನಿಲಹರಿ” ಕೂಡ ಶ್ರೀಮುರಳಿ ಅವರ ಹುಟ್ಟುಹಬ್ಬಕ್ಕೆ ತ್ರಿಬಲ್‌ ಧಮಾಕ ಶೀರ್ಷಿಕೆಯಡಿ ಸುದ್ದಿಯೊಂದನ್ನು ಪೋಸ್ಟ್‌ ಮಾಡಿತ್ತು. ಆ ಸುದ್ದಿಯನ್ನು ಸೂಕ್ಷ್ಮವಾಗಿ ಗಮನಿಸಿದಾಗ, ಈಗ ಹೊಂಬಾಳೆ ಫಿಲ್ಮ್ಸ್‌ ಹೊಸ ಚಿತ್ರ ಅನೌನ್ಸ್‌ ‌ ಮಾಡಿದೆ. ಅಲ್ಲದೆ, “ಜಂಗಲ್‌ ಬುಕ್”‌ನ ವಿಶೇಷ ಪಾತ್ರವಾಗಿದ್ದ ಬಘೀರ ಪಾತ್ರದ ಹೆಸರೇ ಈಗ ಶ್ರೀಮುರಳಿ ಅವರ ಚಿತ್ರಕ್ಕೂ ಇಡಲಾಗಿದೆ. ಇದೊಂದು ಭಾರೀ ನಿರೀಕ್ಷೆ ಹುಟ್ಟಿಸಿರುವ ಶೀರ್ಷಿಕೆಯಾಗಿದೆ. ಈಗ ಪೋಸ್ಟರ್‌ ಕೂಡ ಬಿಡುಗಡೆ ಮಾಡಿದ್ದು, ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ.

Related Posts

error: Content is protected !!