ಮತ್ತೆ ಕೃಷ್ಣನ್‌ ಜಪ..! ಅಜೇಯ್‌ರಾವ್‌ಗೆ ಸ್ಟೋರಿ ಬರೆದ ಶಶಾಂಕ್‌

ಗುರುದೇಶಪಾಂಡೆ ನಿರ್ಮಾಣದಲ್ಲಿ ಶಂಕರ್‌ ನಿರ್ದೇಶನ

ಅಜೇಯ್‌ರಾವ್

ನಟ ಅಜೇಯ್‌ರಾವ್ ಅಂದಾಕ್ಷಣ, ನೆನಪಾಗೋದೇ “ಕೃಷ್ಣ”. ಹೌದು, “ಕೃಷ್ಣನ್‌ ಲವ್‌ ಸ್ಟೋರಿ” ದೊಡ್ಡ ಹಿಟ್‌ ಕೊಟ್ಟ ಚಿತ್ರ. ಶಶಾಂಕ್‌ ಹಾಗೂ ಅಜೇಯ್‌ರಾವ್‌ ಕಾಂಬಿನೇಷನ್‌ನಲ್ಲಿ “ಕೃಷ್ಣನ್‌ ಲವ್‌ ಸ್ಟೋರಿ”, “ಕೃಷ್ಣ ಲೀಲಾ” ಚಿತ್ರಗಳು ಬಂದಿವೆ. ಈ ಮೂರು ಸಿನಿಮಾಗಳು ಯಶಸ್ವಿಯಾಗಿವೆ. ಇದೇ ಸೀರಿಸ್‌ನಲ್ಲೇ ಚಿತ್ರ ಬಂದಿದ್ದೂ ಉಂಟು. ಈಗ ಮತ್ತೊಮ್ಮೆ “ಕೃಷ್ಣನ್”‌ ಜೋಡಿ ಒಂದಾಗುತ್ತಿದೆ ಎಂಬುದೇ ಈ ಹೊತ್ತಿನ ವಿಶೇಷ.

ಶಶಾಂಕ್‌

ಹೌದು, ಈಗ ನಿರ್ದೇಶಕ ಶಶಾಂಕ್‌ ಅವರು ನಟ ಅಜೇಯ್‌ರಾವ್‌ ಅವರಿಗಾಗಿಯೇ ಹೊಸ ಕಥೆಯೊಂದನ್ನು ರೆಡಿ ಮಾಡಿದ್ದಾರೆ. ಈ ಚಿತ್ರದಲ್ಲಿ ಅಜೇಯ್‌ ರಾವ್‌ ಮತ್ತೆ ಕೃಷ್ಣನಾಗಿ ಕಾಣಿಸಿಕೊಳ್ಳಲಿದ್ದಾರೆಯೇ? ಹೀಗೊಂದು ಪ್ರಶ್ನೆ ಮತ್ತು ಕುತೂಹಲವಿದೆ. ಆ ಚಿತ್ರಕ್ಕೆ ಇನ್ನೂ ನಾಮಕರಣ ಮಾಡಿಲ್ಲ. ಇದೂ ಕೂಡ “ಕೃಷ್ಣ”ನ್‌ ಸರಣಿ ಇರಬಹುದೇನೋ ಎಂಬ ಸಣ್ಣ ನಿರೀಕ್ಷೆಯೂ ಇದೆ. ಅದೇನೆ ಇದ್ದರೂ ಚಿತ್ರದ ಶೀರ್ಷಿಕೆ ಅನಾವರಣಗೊಂಡಾಗ ಮಾತ್ರವಷ್ಟೇ, ಎಲ್ಲವೂ ಹೊರಬೀಳಲಿದೆ.

ಗುರುದೇಶಪಾಂಡೆ

ಜ.೨೪ರಂದು ಚಿತ್ರಕ್ಕೆ ಮುಹೂರ್ತ ನೆರವೇರಲಿದೆ. ಶಶಾಂಕ್‌ ಹಾಗೂ ಅಜೇಯ್‌ರಾವ್‌ ಜೋಡಿಯ ಮೋಡಿ ಒಂದಷ್ಟು ನಿರೀಕ್ಷೆ ಹೆಚ್ಚಿಸಿದೆ. ಈ ಚಿತ್ರಕ್ಕೆ ಜನಪ್ರಿಯ ನಾಯಕಿಯೊಬ್ಬರು ಬರುತ್ತಿದ್ದು, ಚಿತ್ರತಂಡ ಆ ನಾಯಕಿಯ ಹೆಸರನ್ನು ಗೌಪ್ಯವಾಗಿಸಿದೆ. ಮುಹೂರ್ತ ದಿನ ಆ ನಟಿ ಯಾರೆಂಬುದನ್ನು ಚಿತ್ರತಂಡ ಬಹಿರಂಗಪಡಿಸಲಿದೆ. ಈ ಚಿತ್ರಕ್ಕೆ ಶಂಕರ್‌ ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರ ಮೊದಲ ಚಿತ್ರ. ಇನ್ನು, ಶಂಕರ್‌, “ಜಂಟಲ್‌ ಮೆನ್‌”, “ಪಡ್ಡೆಹುಲಿ” “ರುದ್ರ ತಾಂಡವ” ಸೇರಿದಂತೆ ಗುರುದೇಶಪಾಂಡೆ ಅವರ ಹಲವು ಚಿತ್ರಗಳಿಗೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಶಂಕರ್‌

ಇನ್ನು, ಜಿ ಸಿನಿಮಾಸ್‌ ಬ್ಯಾನರ್‌ನಲ್ಲಿ ಚಿತ್ರ ತಯಾರಾಗುತ್ತಿದ್ದು, ಗುರು ದೇಶಪಾಂಡೆ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈಗಾಗಲೇ ಈ ಬ್ಯಾನರ್‌ನಲ್ಲಿ “ಜಂಟಲ್‌ಮನ್‌” ಸಿನಿಮಾ ಕೊಟ್ಟಿರುವ ನಿರ್ಮಾಪಕರು, “ಪೆಂಟಗಾನ್‌” ಸಿನಿಮಾವನ್ನೂ ನಿರ್ಮಿಸುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರು, ನಿರ್ಮಾಪಕರು ಈ ಹಿಂದೆ ಅಜೇಯ್‌ರಾವ್‌ ಜೊತೆ “ರೈನ್‌ಬೋ” ಸಿನಿಮಾ ಮಾಡಬೇಕಿತ್ತು. ಆ ಚಿತ್ರವನ್ನು ಮುಂದಕ್ಕೆ ಹಾಕಿ, ಈ ಸಿನಿಮಾವನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ.
ಹೊಸ ಸಿನಿಮಾದ ಕಥೆಯೇ ಒಂದು ರೀತಿ ವಿಭಿನ್ನವಾಗಿದೆ. ಈಗಿನ ಟ್ರೆಂಡ್‌ಗೆ ತಕ್ಕ ಕಥೆ ಮಾಡಲಾಗಿದೆ. ಆ ಕಾರಣಕ್ಕೆ ಗುರುದೇಶಪಾಂಡೆ ತಮ್ಮ “ರೈನ್‌ಬೋ” ಚಿತ್ರವನ್ನು ಮುಂದಕ್ಕೆ ಹಾಕಿ ಹೊಸ ಚಿತ್ರಕ್ಕೆ ಕೈ ಹಾಕಿದ್ದಾಗಿ ಹೇಳುತ್ತಾರೆ ಅವರು. ಈ ಸಿನಿಮಾದ ಮತ್ತೊಂದು ವಿಶೇಷ ಅಂದರೆ, ಶಶಾಂಕ್‌ ಅವರ ಕಥೆ. ಜೊತೆಗೆ ಆಜೇಯ್‌ರಾವ್‌ ಎಂಬ ಸಕ್ಸಸ್‌ ನಟ. ಇನ್ನು, ಶಂಕರ್‌ ಈ ಚಿತ್ರದ ಮೂಲಕ ನಿರ್ದೇಶಕರಾಗಿಯೂ ಗುರುತಿಸಿಕೊಳ್ಳುತ್ತಿದ್ದಾರೆ.

Related Posts

error: Content is protected !!