ಅಭಿಮಾನಿಗಳಿಗಾಗಿ ಅಭಿಮಾನದ ಕ್ಯಾಲೆಂಡರ್ ಲೋಕಾರ್ಪಣೆ
ಡಾ.ವಿಷ್ಣುವರ್ಧನ್ ಅವರ ಕುರಿತ ಅನೇಕ ಪುಸ್ತಕಗಳು ಹೊರಬಂದಿವೆ. ಅಷ್ಟೇ ಯಾಕೆ, ಸರ್ಕಾರ ಅವರ ಭಾವಚಿತ್ರವಿರುದ ಅಂಚೆ ಚೀಟಿಯನ್ನೂ ಹೊರತಂದಿದೆ. ಅವರ ಅಭಿಮಾನಿಗಳಂತೂ ವಿವಿಧ ರೀತಿಯಲ್ಲಿ ವಿಷ್ಣುವರ್ಧನ್ ಅವರನ್ನು ಆರಾಧಿಸುತ್ತಲೇ ಬಂದಿದ್ದಾರೆ. ಈಗ ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ ಅವರು ಡಾ.ವಿಷ್ಣುವರ್ಧನ್ ಅವರ ವಿಭಿನ್ನವಾದ ಕ್ಯಾಲೆಂಡರ್ವೊಂದನ್ನು ಹೊರತಂದಿದ್ದಾರೆ. ಆ ಕ್ಯಾಲೆಂಡರ್ ತುಂಬಾನೇ ವಿಶೇಷವಾಗಿದೆ ಎಂಬುದೇ ಈ ಹೊತ್ತಿನ ಸುದ್ದಿ.
ಅಷ್ಟಕ್ಕೂ ಆ ಕ್ಯಾಲೆಂಡರ್ನ ವಿಶೇಷತೆ ಏನು? ಈ ಪ್ರಶ್ನೆಗೆ ಇಲ್ಲಿದೆ ಉತ್ತರ. ಸಾಮಾನ್ಯವಾಗಿ ವರ್ಣಮಾಲೆ ಕಲಿಯದ ಕನ್ನಡಿಗರಿಲ್ಲ. ಬಾಲ್ಯದಿಂದಲೂ ಅ-ಅರಸ, ಆ-ಆಕಾಶ ಹೀಗೆ ಒಂದೊಂದು ಅಕ್ಷರದ ಮೂಲಕ ಕನ್ನಡವನ್ನು ಪ್ರೀತಿಯಿಂದ ಕಲಿತಿರುವುದುಂಟು. ಅದನ್ನು ಸದಾ ಕಂಠಪಾಠ ಮಾಡುತ್ತಲೇ ಇಂದಿಗೂ ಕನ್ನಡ ಮೇಲಿನ ಪ್ರೀತಿ ಇಟ್ಟುಕೊಂಡಿದ್ದಾರೆ. ಈಗ ಡಾ.ವಿಷ್ಣು ಅಭಿಮಾನಿಗಳಿಗಾಗಿ ಅದೇ ವರ್ಣಮಾಲೆಯನ್ನು ಬಳಸಕೊಂಡೇ ಸ್ವಲ್ಪ ವಿಭಿನ್ನವಾಗಿ ವಿನೂತನ ರೀತಿಯಲ್ಲಿ ಕ್ಯಾಲೆಂಡರ್ ಮಾಡಲಾಗಿದೆ.
ಅ-ಅಸಾಧ್ಯ ಅಳಿಯ, ಆ-ಆಪ್ತಮಿತ್ರ, ಇ-ಇಂದಿನ ರಾಮಾಯಣ, ಈ-ಈ ಜೀವ ನಿನಗಾಗಿ, ಊ-ಊರಿಗೆ ಉಪಕಾರಿ, ಎ-ಎಲ್ಲರಂತಲ್ಲ ನನ್ನ ಗಂಡ, ಏ-ಏಕದಂತ… ಹೀಗೆ ವರ್ಣಮಾಲೆಯ ಮೊದಲ ಅಕ್ಷರದಲ್ಲಿ ಮೂಡಿಬಂದಿರುವ ಸಿನಿಮಾಗಳನ್ನೂ ಹೆಸರಿಸಿ, ರಿಚ್ ಆಗಿರುವ ಆಕರ್ಷಣೆ ಎನಿಸುವ ಕ್ಯಾಲೆಂಡರ್ ಮಾಡಲಾಗಿದೆ.
ಅ-ಅಸಾಧ್ಯ ಅಳಿಯ, ಆ-ಆಪ್ತಮಿತ್ರ, ಇ-ಇಂದಿನ ರಾಮಾಯಣ, ಈ-ಈ ಜೀವ ನಿನಗಾಗಿ, ಊ_ಊರಿಗೆ ಉಪಕಾರಿ, ಎ-ಎಲ್ಲರಂತಲ್ಲ ನನ್ನ ಗಂಡ, ಏ-ಏಕದಂತ… ಹೀಗೆ ವರ್ಣಮಾಲೆಯ ಮೊದಲ ಅಕ್ಷರದಲ್ಲಿ ಮೂಡಿಬಂದಿರುವ ಸಿನಿಮಾಗಳನ್ನೂ ಹೆಸರಿಸಿ, ರಿಚ್ ಆಗಿರುವ ಆಕರ್ಷಣೆ ಎನಿಸುವ ಕ್ಯಾಲೆಂಡರ್ ಮಾಡಲಾಗಿದೆ. ಅ ಅಕ್ಷರದಿಂದ ಳ ಅಕ್ಷರದವರೆಗೆ ಇರುವಂತಹ ಎಲ್ಲಾ ಡಾ.ವಿಷ್ಣುವರ್ಧನ್ ಅವರ ಚಿತ್ರಗಳ ಹೆಸರುಗಳನ್ನು ಕನ್ನಡ ವರ್ಣಮಾಲೆಯೊಂದಿಗೆ ಜೋಡಿಸಿ ಮುದ್ರಿಸಿರುವ ವಿಶಿಷ್ಠ ಪ್ರಯತ್ನ ಇದಾಗಿದೆ. ಕೇವಲ ವರ್ಣಮಾಲೆ ಮಾತ್ರವಲ್ಲದೆ ಕನ್ನಡಿಗರ ಹೆಗ್ಗುರುತಾದ ಹಂಪೆಯ ಕಲ್ಲಿನ ರಥವನ್ನು ಈ ಕ್ಯಾಲೆಂಡರ್ ವಿನ್ಯಾಸಕ್ಕೆ ಬಳಸಲಾಗಿದೆ.
![](https://cinilahari.in/wp-content/uploads/2020/12/pp-300x300.jpg)
ಪ್ರತಿ ತಿಂಗಳ ಪುಟದಲ್ಲೂ ಡಾ.ವಿಷ್ಣುವರ್ಧನ್ ಅವರ ಅಪರೂಪದ ಭಾವಚಿತ್ರಗಳಿರುವುದು ಈ ಕ್ಯಾಲೆಂಡರ್ನ ವಿಶೇಷತೆ. ಪ್ರತಿ ತಿಂಗಳಿಗೂ ವಿಶೇಷ ಬಣ್ಣಗಳ ಸಂಯೋಜನೆ ಕೂಡ ಆಕರ್ಷಕವಾಗಿದೆ. ಕ್ಯಾಲೆಂಡರ್ನಲ್ಲಿ ರಜಾದಿನಗಳು, ಅಮಾವಾಸೆ, ಹುಣ್ಣಿಮೆ, ಹಬ್ಬಗಳು, ಗಣ್ಯರ ಜನ್ಮದಿನ ಒಳಗೊಂಡಿರುವ ಈ ಕ್ಯಾಲೆಂಡರ್ ವೃತಿಪರ ಕ್ಯಾಲೆಂಡರ್ಗಳಂತೆಯೇ ಮೂಡಿಬಂದಿದೆ.
ಈ ಕೋಟಿಗೊಬ್ಬ ಕ್ಯಾಲೆಂಡರ್ ಸರಣಿ ಶುರುವಾಗಿ 2021ಕ್ಕೆ ಹತ್ತು ವರ್ಷಗಳಾಗಿವೆ. ದಿ.ಅನಂತಕುಮಾರ್ ಮತ್ತು ಡಾ.ಭಾರತಿ ವಿಷ್ಣುವರ್ಧನ್ ಅವರು ಈ ಕ್ಯಾಲೆಂಡರ್ ಸರಣಿಯ ಮೊದಲನೇ ಸಂಚಿಕೆಯನ್ನು ಬಿಡುಗಡೆಗೊಳಿಸಿದ್ದರು. ಅಂದಿನಿಂದ ಇಂದಿನವರೆಗೆ ಹತ್ತು ವರ್ಷಗಳ ಕಾಲ ಡಾ.ವಿಷ್ಣುವರ್ಧನ್ ಅವರ ಅಭಿಮಾನಿಗಳ ಮನೆಮಾತಾಗಿರುವ ಈ 2021ರ ಕೋಟಿಗೊಬ್ಬ ಕ್ಯಾಲೆಂಡರ್ ಈಗಾಗಲೇ ಡಾ.ವಿಷ್ಣುವರ್ಧನ್ ಅವರ ಪುಣ್ಯಭೂಮಿಯಲ್ಲಿ ಲೋಕಾರ್ಪಣೆಗೊಂಡಿದೆ ಎಂದು ಡಾ.ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಹೇಳಿದ್ದಾರೆ.