ಚಡ್ಡಿದೋಸ್ತರ ಹಾಡು ಪಾಡು – ಕಡ್ಡಿ ಅಲ್ಲಾಡಿಸೋ ಮಂದಿಯ ಆಡಿಯೋ ಕಾರ್ಯಕ್ರಮ

ಕೌಂಡಿನ್ಯರ ಕಾದಂಬರಿಗೆ ಸಿನಿಮಾ ಸ್ಪರ್ಶ

ನಿರ್ದೇಶಕ “ಆಸ್ಕರ್‌” ಕೃಷ್ಣ ಈಗ ಹೊಸದೊಂದು ಚಿತ್ರ ಮಾಡಿದ್ದು ಗೊತ್ತೇ ಇದೆ. ಅದೀಗ ರಿಲೀಸ್‌ ಹಂತಕ್ಕ ಬಂದಿದೆ. ಹೌದು, ಈ ಹಿಂದೆ “ಆಸ್ಕರ್”, “ಮಿಸ್ ಮಲ್ಲಿಗೆ”, “ಮೊನಿಕಾ ಈಸ್ ಮಿಸ್ಸಿಂಗ್” ಮತ್ತು “ಮನಸಿನ ಮರೆಯಲಿ” ಸಿನಿಮಾ ನಿರ್ದೇಶಿಸಿದ್ದ ಕೃಷ್ಣ, ಈಗ “ಚಡ್ಡಿದೋಸ್ತ್‌ ಕಡ್ಡಿ ಅಲ್ಲಾಡ್‌ಸ್ಬುಟ್ಟ” ಚಿತ್ರ ಮಾಡಿದ್ದಾರೆ. ಅದರ ಹಾಡುಗಳು ಇತ್ತೀಚೆಗೆ ಬಿಡುಗಡೆಗೊಂಡವು. ಅಂದಹಾಗೆ, ಈ ಚಿತ್ರವನ್ನು ರೆಡ್ ಅಂಡ್ ವೈಟ್ ಖ್ಯಾತಿಯ ಸೆವೆನ್‍ರಾಜ್ ನಿರ್ಮಾಣ ಮಾಡಿದ್ದಾರೆ. ನಟಿ ಪ್ರೇಮಾ ಅಂದು ಆಡಿಯೋ ಬಿಡುಗಡೆಗೆ ಸಾಕ್ಷಿಯಾದರು.

ಅವರೊಂದಿಗೆ ಎಸ್.ಎ. ಚಿನ್ನೇಗೌಡ, ಬಾಮ ಹರೀಶ್, ಬಾಮ. ಗಿರೀಶ್, ರವಿಚೇತನ್, ಶಿಲ್ಪ ಶ್ರೀನಿವಾಸ್ ಸೇರಿದಂತೆ ಚಿತ್ರರಂಗದ ಹಲವಾರು ಪ್ರಮುಖರು ಭಾಗವಹಿಸಿ ಚಿತ್ರತಂಡಕ್ಕೆ ಶುಭಕೋರಿದರು.
ತಮ್ಮ ಸಿನಿಮಾ ಕುರಿತು ಮಾತಿಗಿಳಿದ ನಿರ್ದೇಶಕ ಕೃಷ್ಣ, “ನನ್ನ ನಿರ್ದೇಶನದ ಐದನೇ ಚಿತ್ರವಿದು. “ಆಸ್ಕರ್”, “ಮಿಸ್ ಮಲ್ಲಿಗೆ”, “ಮೊನಿಕಾ ಈಸ್ ಮಿಸ್ಸಿಂಗ್” ಹಾಗೂ “ಮನಸಿನ ಮರೆಯಲಿ” ನಂತರ ಈ ಚಿತ್ರ ಮಾಡಿದ್ದೇನೆ. ಅಲ್ಲದೆ ಮೊದಲ ಸಲ ಪ್ರಮುಖ ಪಾತ್ರವೊಂದನ್ನು ಕೂಡ ಮಾಡಿದ್ದೇನೆ ಸೂಪರ್ ನ್ಯಾಚುರಲ್, ರೊಮ್ಯಾಂಟಿಕ್ ಥ್ರಿಲ್ಲರ್ ಹೀಗೆ ಎಲ್ಲಾ ಜಾನರ್ ಚಿತ್ರಗಳನ್ನು ಮಾಡಿದ ನಂತರ ಈ ಚಿತ್ರದ ಮೂಲಕ ಕ್ರೈಂ ಥ್ರಿಲ್ಲರ್ ಕಥೆಯೊಂದನ್ನು ಹೇಳ ಹೊರಟಿದ್ದೇನೆ. ಈ ಟೈಟಲ್ ಕೊಟ್ಟವರು ಚಿತ್ರದ ಮತ್ತೊಬ್ಬ ನಾಯಕ ಲೋಕೇಂದ್ರ ಸೂರ್ಯ. ಇಬ್ಬರು ಸ್ನೇಹಿತರ ಬಾಂಡಿಂಗ್, ಫ್ರೆಂಡ್‍ಷಿಪ್ ಮಧ್ಯೆ ನಡೆಯುವ ಹುಡುಗಾಟ, ತುಂಟಾಟ ಎಲ್ಲಾ ಇದೆ. ಇದರಲ್ಲಿ ಪೋಲೀಸ್, ವ್ಯಕ್ತಿಯ ಸೋಷಿಯಲ್ ಲೈಫ್ ಹೇಗೆಲ್ಲಾ ಇರುತ್ತೆ ಎಂಬುದನ್ನು ಹೇಳಲಾಗಿದೆ.

ಎಷ್ಟೋ ಸಲ ನಾವು ಕ್ರೈಂ ಮಾಡಿದ್ದರೂ ಅದರಿಂದ ಏನೂ ಆಗುವುದಿಲ್ಲ, ಕೆಲವೊಮ್ಮೆ ನಾವು ಏನೂ ಮಾಡದಿದ್ದರೂ ಅದು ನಮ್ಮನ್ನು ಸುತ್ತಿಕೊಂಡಿರುತ್ತೆ, ಇಲ್ಲೂ ಅಂಥದ್ದೇ ಕಥೆ ಇದೆ. ಲೋಕೇಂದ್ರ ಸೂರ್ಯ ಅವರ “ಅಟ್ಟಯ್ಯ ವರ್ಸಸ್‌ ಹಂದಿ ಕಾಯೋಳು” ಚಿತ್ರವನ್ನು ಚಿತ್ರೋತ್ಸವದಲ್ಲಿ ನೋಡಿ ಇಷ್ಟಪಟ್ಟೆ. ನಂತರ ಅವರನ್ನು ಭೇಟಿ ಮಾಡಿ ಮಾತಾಡಿದೆ. ಮೊದಲು ಬರೀ ಪಾತ್ರ ಮಾಡಲು ಬಂದವರು ನಂತರ ಎಲ್ಲದರಲ್ಲೂ ಇನ್‍ವಾಲ್ವ್ ಆಗಿಬಟ್ಟರು. ಅವರೇ ಚಿತ್ರಕಥೆ ಡೈಲಾಗ್ ಬರೆದರು. ಆಗಿನ್ನೂ ಪ್ರೊಡ್ಯೂಸರ್ ಇರಲಿಲ್ಲ, ಮೊದಲು ಇಬ್ಬರೇ ಸೇರಿ ಮಾಡೋಣ ಅಂದುಕೊಂಡಿದ್ದೆವು. ಆ ಸಮಯದಲ್ಲಿ ಸೆವೆನ್‍ರಾಜ್ ಸಿಕ್ಕರು, ನಾವೆಲ್ಲ ಇಲ್ಲಿ ಸೇರಿದ್ದೇವೆ ಎಂದರೆ ಅದಕ್ಕೆ ಕಾರಣ ಸೆವೆನ್‍ರಾಜ್. ನಾಯಕಿ ಪಾತ್ರಕ್ಕೆ ಹಲವರನ್ನು ಸಂಪರ್ಕಿಸಿದೆವು, ಯಾರೂ ಸರಿಯಾಗಲಿಲ್ಲ, ಸಿನಿಮಾ ಬಗ್ಗೆ ಅತೀವ ಪ್ರೀತಿ ಇಟ್ಟುಕೊಂಡಿರುವ ಬಹುಭಾಷಾ ನಟಿ ಗೌರಿ ನಾಯರ್ ನಮ್ಮ ನಾಯಕಿಯಾಗಿದ್ದು, ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಈ ಸಿನಿಮಾ ಬಳಿಕ ಅವರೀಗ ಬೇರೆ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಶ್ರದ್ದೆಯಿದ್ದರೆ ಮಾತ್ರ ಸಿನಿಮಾ ಮಾಡಬೇಕು ಎನ್ನುವದು ನನ್ನ ಪಾಲಿಸಿ, ನನ್ನ ಪಾತ್ರಕ್ಕೆ ಹೆಚ್ಚು ಮೇಕಪ್ ಬೇಕಿರಲಿಲ್ಲ, ಜೈಲಿಂದ ಹೊರಬಂದ ವ್ಯಕ್ತಿ ಹೇಗಿರ್ತಾನೋ ಆ ಥರದ ಪಾತ್ರ ನನ್ನದು ಎಂದರು ಅವರು.
ಬಹುತೇಕ ಕುಣಿಗಲ್, ತುಮಕೂರು, ಬೆಂಗಳೂರು ಸುತ್ತಮುತ್ತ ಚಿತ್ರದ ಶೂಟಿಂಗ್ ನಡೆಸಲಾಗಿದೆ. ಜನವರಿ ಅಂತ್ಯದಲ್ಲಿ ಅಥವಾ ಫೆಬ್ರವರಿಯಲ್ಲಿ ರಿಲೀಸ್ ಮಾಡುವ ಯೋಚನೆ ಅವರದು. ನಟ ಲೋಕೇಂದ್ರ ಸೂರ್ಯ, ಚಿತ್ರದಲ್ಲಿ ಗಡಾರಿ ಎನ್ನುವ ಪಾತ್ರ ಮಾಡಿದರೆ, ಆಸ್ಕರ್ ಕೃಷ್ಣ ಫ್ಯಾಷನ್ ರಾಜನಾಗಿ ಕಾಣಿಸಿಕೊಂಡಿದ್ದಾರೆ ಎಂದು ವಿವರಿಸಿದರು. ನಿರ್ಮಾಪಕ ಸೆವೆನ್ ರಾಜ್, “ಏಳು ನನ್ನ ಜೀವನದಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸಿದೆ, ನಾನು ಹುಟ್ಟಿದ್ದು ಏಳನೇ ತಾರೀಖು, ನನ್ನ ತಂದೆಗೆ ನಾನು ಏಳನೇ ಪುತ್ರ. ನನ್ನ ಹೆಸರು ಕೂಡ ಸೆವೆನ್‌ ರಾಜ್, ನಾನು ಚಿತ್ರರಂಗಕ್ಕೆ ಬರಬೇಕೆಂದು ಬಹಳ ಹಿಂದೆಯೇ ಪ್ರಯತ್ನಿಸಿದ್ದೆ, ಆಗಿರಲಿಲ್ಲ, ಈ ಚಿತ್ರದಲ್ಲಿ ಖಳನಾಯಕನಾಗಿ ಕಾಣಿಸಿಕೊಂಡಿದ್ದೇನೆ ಎಂದರು. ಕೌಂಡಿನ್ಯ ಅವರ ಕಾದಂಬರಿ ಆಧರಿಸಿ ಮಾಡಲಾಗಿರುವ ಈ ಚಿತ್ರದಲ್ಲಿ 2 ಹಾಡುಗಳಿದ್ದು, ಅನಂತ್ ಆರ್ಯನ್ ಅವರ ಸಂಗೀತವಿದೆ. ಗಗನ್ ಕುಮಾರ್ ಅವರ ಛಾಯಾಗ್ರಹಣ, ಮರಿಸ್ವಾಮಿ ಸಂಕಲನ, ಅಕುಲ್ ಅವರ ನೃತ್ಯನಿರ್ದೇಶನ ಹಾಗೂ ವೈಲೆಂಟ್‌ ಸಾಹಸ ನಿರ್ದೇಶನವಿದೆ.

Related Posts

error: Content is protected !!