ಮಕ್ಕಳ ತಂಟೆಗೆ ಬರಬೇಡಿ ಅಂತಾರೆ ಕೋಡ್ಲು ರಾಮಕೃಷ್ಣ – ಕೊರೊನಾ ಎಫೆಕ್ಟ್‌ ಬಳಿಕ ಮಕ್ಕಳ ಮನಸ್ಥಿತಿಯ ಚಿತ್ರಣ

ಮಕ್ಕಳ ತಂಟೆಗೆ ಬಂದ್ರೆ ಹುಷಾರ್…!‌
– ಈ ಮಾತನ್ನು ನಾವ್‌ ಹೇಳುತ್ತಿಲ್ಲ. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವಿಭಿನ್ನ ಚಿತ್ರಗಳನ್ನು ನಿರ್ದೇಶಿಸುವ ಮೂಲಕ ಸೈ ಎನಿಸಿಕೊಂಡಿರುವ ಕೋಡ್ಲು ರಾಮಕೃಷ್ಣ ಹೇಳುತ್ತಿದ್ದಾರೆ. ಹೌದು, ಅವರೀಗ ಮಕ್ಕಳ ಚಿತ್ರವೊಂದನ್ನು ನಿರ್ದೇಶನ ಮಾಡಿದ್ದಾರೆ. ಆ ಚಿತ್ರಕ್ಕೆ “ಮಕ್ಕಳ ತಂಟೆಗೆ ಬಂದ್ರೆ ಹುಷಾರ್” ಎಂದು ನಾಮಕರಣ ಮಾಡಲಾಗಿದೆ. ಇದೊಂದು ಸಂದೇಶ ಸಾರುವ ಸಿನಿಮಾ. ಈ ಚಿತ್ರದ ಬಗ್ಗೆ ಹೇಳುವುದಾದರೆ, “ಮಕ್ಕಳ ನಿತ್ಯ ಚಟುವಟಿಕೆ, ಪೋಷಕರ ಜೀವನ ಶೈಲಿ, ಮೊಬೈಲ್ ಗೀಳು, ಶ್ರೀಮಂತ, ಮಧ್ಯಮ ಹಾಗೂ ಬಡವರ ಮನೆ ಮಕ್ಕಳು ಕೊರೊನಾ ಬರುವ ಮೊದಲು ಹಾಗೂ ನಂತರ ಹೇಗಿದ್ದಾರೆ? ಎನ್ನುವುದೇ ಈ ಚಿತ್ರದ ಕಥಾ ಹಂದರ.


ಚಿತ್ರೀಕರಣ ಮುಗಿದು, ಸೆನ್ಸಾರ್ ಕೂಡ ಆಗಿದೆ. ಸೆನ್ಸಾರ್ ಮಂಡಳಿ ಸಿನಿಮಾ ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದೆ. ಸಂಕ್ರಾಂತಿಗೆ ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಭುವನ್ ಫಿಲಂಸ್ ಬ್ಯಾನರ್‌ನಲ್ಲಿ ನಾರಾಯಣ್ ಹಾಗೂ ಕೋಡ್ಲು ರಾಮಕೃಷ್ಣ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ದೀಪು (ರಾಮನಗರ) ಈ ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ.


ಕ್ರಿಶ್ ಜೋಶಿ ಅವರ ಕಥೆಗೆ ಕೋಡ್ಲು ರಾಮಕೃಷ್ಣ ಹಾಗೂ ರಾಮಮೂರ್ತಿ ಚಿತ್ರಕಥೆ ರಚಿಸಿದ್ದಾರೆ. ಕ್ರಿಶ್ ಜೋಶಿ ಅವರ ಜೊತೆಗೂಡಿ ಕೋಡ್ಲು ರಾಮಕೃಷ್ಣ ಸಂಭಾಷಣೆ ಬರೆದಿದ್ದಾರೆ. ಶಮಿತ ಮಲ್ನಾಡ್ ಸಂಗೀತ ನಿರ್ದೇಶನವಿದೆ., ನಾಗೇಂದ್ರ ಛಾಯಾಗ್ರಹಣ ಮಾಡಿದರೆ, ವಸಂತ್ ಕುಮಾರ್ ಸಂಕಲನವಿದೆ.

ಚಿತ್ರದಲ್ಲಿ ಮುಖ್ಯಮಂತ್ರಿ ಚಂದ್ರು, ವಿನಯಾ ಪ್ರಕಾಶ್, ಶಿವಧ್ವಜ್, ಪ್ರಥಮ ಪ್ರಕಾಶ್, ಟೆನ್ನಿಸ್ ಕೃಷ್ಣ, ಸುಧಾ ಬೆಳವಾಡಿ, ಕುಮಾರಿ ಐಶ್ವರ್ಯ, ಶ್ರೀಧರ್ ನಾಯಕ್ ಸ್ನೇಹ ಭಟ್, ಪ್ರಕಾಶ್, ಭವಾನಿ ಪ್ರಕಾಶ್, ಬೇಬಿ ಗಗನ, ಬೇಬಿ ಯಶಿಕಾ, ಬೇಬಿಶ್ರೀ, ಬೇಬಿ ಪ್ರತಿಷ್ಠ ದೇಶಪಾಂಡೆ, ಯುಕ್ತ ಹೆಗಡೆ, ಮಾಸ್ಟರ್ ವಿಷ್ಣು ಸಂಜಯ್, ಮಾಸ್ಟರ್ ತರುಣ್, ಮಾಸ್ಟರ್ ಸರ್ವಜ್ಞ, ಮಾಸ್ಟರ್ ಯುವರಾಜ್ ಮುಂತಾದವರು ಈ ಚಿತ್ರದಲ್ಲಿದ್ದಾರೆ.

Related Posts

error: Content is protected !!