ಅಯೋಧ್ಯೆ ರಾಮನಿಗೆ ಒಂದು ಲಕ್ಷ ದೇಣಿಗೆ -ರಾಮಮಂದಿರ ನಿರ್ಮಾಣಕ್ಕೆ ನಟಿ ಪ್ರಣೀತಾ ಕಿರು ಕಾಣಿಕೆ

ದೇಶದಲ್ಲಿ ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣದ ವಿಷಯ ಈಗ ಕೇಂದ್ರಬಿಂದುವಾಗಿದೆ. ಈಗಾಗಲೇ ಅಯೋಧ್ಯೆಯ ಶ್ರೀರಾಮಮಂದಿರದ ನಿರ್ಮಾಣ ಕಾರ್ಯಕ್ಕೆ ನಿಧಿ ಸಮರ್ಪಣಾ ಅಭಿಯಾನವೊಂದು ಶುರುವಾಗಿದೆ. ಈ ನಿಟ್ಟಿನಲ್ಲಿ ಇದೀಗ ಕನ್ನಡದ ನಟಿ ಪ್ರಣೀತಾ ಅವರು ಒಂದು ಲಕ್ಷ ರುಪಾಯಿ ದೇಣಿಗೆ ನೀಡುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದ್ದಾರೆ.

ಈ ಕುರಿತು ಅವರು ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ವಿಡಿಯೋವೊಂದನ್ನು ಹಾಕಿದ್ದು, ಆ ಮೂಲಕ ತಮ್ಮ ಅಭಿಮಾನಿಗಳಿಗೆ ಹಾಗೂ ಭಕ್ತರಿಗೆ ಮನವಿ ಮಾಡಿದ್ದಾರೆ. “ನಿಮಗೆಲ್ಲರಿಗೂ ಗೊತ್ತಿರುವವಂತೆ. ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾರ್ಯ ಶುರುವಾಗಿದೆ. ದೇಶದೆಲ್ಲೆಡೆ ನಿಧಿ ಸಮರ್ಪಣಾ ಕಾರ್ಯ ನಡೆದಿದೆ. ಈ ಕಾರ್ಯಕ್ಕೆ ನಾನು ನನ್ನ ಸಣ್ಣ ಸೇವೆ ಸಲ್ಲಿಸಿದ್ದೇನೆ. ನೀವು ಕೈ ಜೋಡಿಸಿ” ಎಂದು ಮನವಿ ಮಾಡಿದ್ದಾರೆ.
ಪ್ರಣೀತಾ ಸದ್ಯಕ್ಕೆ ತೆಲುಗು ಸಿನಿಮಾದಲ್ಲಿ ಬಿಝಿಯಾಗಿದ್ದಾರೆ. ಕನ್ನಡದಲ್ಲಿ ಅನೇಕ ಸಿನಿಮಾಗಳನ್ನು ಕೊಟ್ಟಿರುವ ಪ್ರಣೀತಾ, ಆಗಾಗ ಸಮಾಜ ಸೇವೆಯ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತಿರುತ್ತಾರೆ. ಈಗ ಶ್ರೀರಾಮಮಂದಿರ ನಿರ್ಮಾಣ ಕಾರ್ಯಕ್ಕೂ ದೇಣಿಗೆ ನೀಡಿದ್ದಾರೆ.

Related Posts

error: Content is protected !!