ಗೆದ್ದವರ ಹೊಸ ಭರವಸೆಯ ಚಿತ್ರ ! ಕಮರೊಟ್ಟು ಕಡೆಯಿಂದ ಹೊಸ ಚೆಕ್ ಪೋಸ್ಟ್ ಕಡೆಗೆ

ಕಮರೊಟ್ಟು ಜೋಡಿಯ ಹೊಸ ಚಿತ್ರಕ್ಕೆ ಪೂಜೆ

ಕನ್ನಡ ಚಿತ್ರರಂಗ ಈಗ ಗರಿಗೆದರಿದೆ. ಕೊರೊನೊ ಭಯ ದೂರವಾಗುತ್ತಿದ್ದಂತೆಯೇ ಅತ್ತ ಸಿನಿಮಾ ಮಂದಿಯ ಮೊಗದಲ್ಲಿ ಮಂದಹಾಸ ಮೂಡಿದೆ. ದಿನ ಕಳೆದಂತೆ ಹೊಸಬರ ಚಿತ್ರಗಳು ಸೆಟ್ಟೇರುತ್ತಿವೆ. ಒಂದಷ್ಟು ಚಿತ್ರಗಳು ಬಿಡುಗಡೆಯಾಗುತ್ತಿವೆ. ಅದೇ ಉತ್ಸಾಹದಲ್ಲೇ ಸಿನಿ ಮಂದಿ ಅಖಾಡಕ್ಕಿಳಿದಿದ್ದಾರೆ.

ಈಗ ಅಂಥದ್ದೇ ಹೊಸ ಹುಮ್ಮಸ್ಸು, ಹುರುಪಿನೊಂದಿಗೆ ಚಿತ್ರತಂಡವೊಂದು ಸ್ಕ್ರಿಪ್ಟ್ ಪೂಜೆ ನೆರವೇರಿಸಿದೆ.
ಹೌದು, ಈ ಹಿಂದೆ “ಕಮರೊಟ್ಟು ಚೆಕ್ ಪೋಸ್ಟ್” ಎಂಬ ಯಶಸ್ಸಿನ ಸಿನಿಮಾ ಕೊಟ್ಟಿದ್ದ ನಿರ್ದೇಶಕ ಪರಮೇಶ್ ಈಗ ಹೊಸ ಚಿತ್ರ ನಿರ್ದೇಶನಕ್ಕೆ ಅಣಿಯಾಗಿದ್ದಾರೆ.


ವಿಶೇಷವೆಂದರೆ, “ಕಮರೊಟ್ಟು ಚೆಕ್ ಪೋಸ್ಟ್” ಯಶಸ್ಸಿನ ಚಿತ್ರದಲ್ಲಿ ಹೀರೋ ಆಗಿ ಕಾಣಿಸಿಕೊಂಡಿದ್ದ ಉತ್ಪಲ್ ಈ ಚಿತ್ರದಲ್ಲಿ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮತ್ತದೇ ಯಶಸ್ಸಿನ ಜೋಡಿ ಹೊಸ ಮೋಡಿ ಮಾಡಲು ಹೊರಟಿದೆ.


ಅಂದಹಾಗೆ, ಅವರ ಕನಸಿನ ಚಿತ್ರಕ್ಕಿನ್ನೂ ನಾಮಕರಣ ಮಾಡಿಲ್ಲ. “ಕಮರೊಟ್ಟು ಚೆಕ್ ಪೋಸ್ಟ್” ಕೊಟ್ಟ ಗೆಲುವು ಪುನಃ ಈ ಚಿತ್ರ ಮಾಡೋಕೆ ಕಾರಣವಾಗಿದೆ.
ಈ ಬಾರಿ‌ ನಿರ್ದೇಶಕ ಪರಮೇಶ್, ಒಂದೊಳ್ಳೆಯ ಕಥೆ ಹೆಣೆದು ಚಿತ್ರಕ್ಕೆ ಅಣಿಯಾಗಿದ್ದಾರೆ. ಸದ್ಯಕ್ಕೆ ತೀರ್ಥಹಳ್ಳಿಯಲ್ಲಿ ಚಿತ್ರದ ಸ್ಕ್ರಿಪ್ಟ್ ಪೂಜೆ ನೆರವೇರಿದೆ.

ಈ ಚಿತ್ರದ ತೆರೆಯ ಮೇಲೆ ಯಾರೆಲ್ಲ ಇದ್ದಾರೆ, ತೆರೆಯ ಹಿಂದೆ ಯಾರೆಲ್ಲ ಇರಲಿದ್ದಾರೆ ಎಂಬುದಕ್ಕೆ ಇನ್ನೂ ಮಾಹಿತಿ ಇಲ್ಲ. ಒಳ್ಳೆಯ ದಿನ‌ ಸ್ಕ್ರಿಪ್ಟ್ ಪೂಜೆ ಮಾಡಿರುವ ಪರಮೇಶ್ ಮತ್ತು ಉತ್ಪಲ್ ಕನ್ನಡಕ್ಕೆ ಮತ್ತೊಂದು ಹೊಸ ಬಗೆಯ ಸಿನಿಮಾ ಕಟ್ಟಿಕೊಡಲು ಉತ್ಸುಕರಾಗಿದ್ದಾರೆ.


ಅದೇನೆ ಇರಲಿ, ಒಂದು ಚಿತ್ರ ಆಗುತ್ತಿದ್ದಂತೆಯೇ, ನಿರ್ದೇಶಕ ಮತ್ತು ಹೀರೋ ಮಧ್ಯೆ ಮಾತುಕತೆಯೆ ನಿಂತು ಹೋಗುವ ಈ ಕಾಲದಲ್ಲಿ, ಪುನಃ ಒಟ್ಟಾಗಿ ಒಂದು ಹೊಸ ಸಿನಿಮಾ ಮಾಡಲು ಅಣಿಯಾಗುವುದು ನಿಜಕ್ಕೂ ಅವರಿಬ್ಬರ ನಡುವಿನ ಬಾಂಡಿಂಗ್ ಮುಖ್ಯ. ಇಲ್ಲಿ ಇಬ್ಬರು ಪರಸ್ಪರ ಇಟ್ಟುಕೊಂಡಿರುವ ನಂಬಿಕೆ ಇದಕ್ಕೆ‌ ಬಲವಾದ ಕಾರಣ.


ಇದು ಕೂಡ ಮತ್ತೊಂದು ದೊಡ್ಡ ಗೆಲುವು ಕೊಡುವ ಸಿನಿಮಾ ಆಗಿ ಹೊರಬರಲಿ ಅನ್ನೋದೇ “ಸಿನಿಲಹರಿ” ಹಾರೈಕೆ.

Related Posts

error: Content is protected !!