ಮರ್ಧನಿ ಎಂಬ ಥ್ರಿಲ್ಲರ್ – ಹೊಸ ಹುಡುಗನ ರಗಡ್ ಲುಕ್

ಪ್ರತಿಭಾವಂತರ ಸಸ್ಪೆನ್ಸ್ ಸ್ಟೋರಿ!

ಕನ್ನಡದಲ್ಲಿ ದಿನ‌ ಕಳೆದಂತೆ ಹೊಸಬರ ಚಿತ್ರಗಳು ಸೆಟ್ಟೇರುತ್ತಲೇ ಇವೆ. ಈಗಾಗಲೇ ಕೆಲವು ಚಿತ್ರಗಳು ಸದ್ದಿಲ್ಲದೆ ಸೆಟ್ಟೇರಿವೆ. ಆ ಸಾಲಿಗೆ “ಮರ್ಧನಿ” ಚಿತ್ರವೂ ಸೇರಿದೆ.ಅಂದಹಾಗೆ, ಕಿಚ್ಷ‌ ಸುದೀಪ್‌ ಅವರ ಸಹಕಾರದೊಂದಿಗೆ ಅಂಕಿತ ಫಿಲಂಸ್ ಬ್ಯಾನರಲ್ಲಿ ಭಾರತಿ ಜಗ್ಗಿ ನಿರ್ಮಿಸುತ್ತಿರುವ “ಮರ್ಧನಿ” ಚಿತ್ರಕ್ಕೆ ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.

ಬೆಂಗಳೂರು, ಮೈಸೂರು, ಚಿಕ್ಕಮಗಳೂರಿನಲ್ಲಿ ಹತ್ತು ದಿನಗಳ ಚಿತ್ರೀಕರಣ ಮಾಡಲಾಗಿದೆ.
ಇನ್ನೂ ಇಪ್ಪತ್ತೈದು ದಿನಗಳ ಚಿತ್ರೀಕರಣ ಬಾಕಿಯಿದ್ದು, ಮಾರ್ಚ್ ನಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ತಯಾರು ನಡೆಸಿದೆ.


ಈ ಹಿಂದೆ “ದೇವರಂಥ ಮನುಷ್ಯ” ಸಿನಿಮಾ ನಿರ್ದೇಶಿಸಿದ್ದ, ಕಿರಣ್‌ ಕುಮಾರ್ ವಿ‌. ಈ ಚಿತ್ರವನ್ನು ನಿರ್ದೇಶಿದ್ದಾರೆ.
ಇನ್ನು , ಈ ಚಿತ್ರಕ್ಕೆ ಅಕ್ಷಯ್ ಹೀರೋ. ಇವರು ಹೋಟೆಲ್ ಮ್ಯಾನೆಜ್‌ಮೆಂಟ್‌ ನಲ್ಲಿ ಗೋಲ್ಡ್ ಮೆಡಲ್, ಕರಾಟೆಯಲ್ಲಿ‌ ಬ್ಲ್ಯಾಕ್ ‌ಬೆಲ್ಟ್ ಹಾಗೂ ಗೋಲ್ಡ್ ಮೆಡಲ್ ಪಡೆದಿದ್ದಾರೆ. ರಾಜಕುಮಾರ್ ಸಂತೋಷಿ ಅವರ ಬಳಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿರುವ ಅಕ್ಷಯ್ , ಈ ಚಿತ್ರದ ಮೂಲಕ ‌ನಾಯಕನಟರಾಗಿ‌ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಅಕ್ಷಯ್ ಅವರೇ ಇದಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ.

ಹಿತನ್ ಗೌಡ, ಮನೋಹರ್, ಭಾಗ್ಯಲಕ್ಷ್ಮೀ ಗೌಡ, ಮೈಸೂರು ಮಾಲತಿ, ಮಧು, ಸಂತೋಷ್ ಶೆಟ್ಟಿ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.
ಚಿತ್ರದಲ್ಲಿ ಮೂರು ಹಾಡುಗಳಿದ್ದು, ಹಿತನ್ ಹಾಸನ್ ಸಂಗೀತ ನೀಡಲಿದ್ದಾರೆ.

ಶಿವಸಾಗರ್ ಛಾಯಾಗ್ರಹಣ ಮಾಡಿದರೆ, ಎಂ.ಎನ್.ವಿಶ್ವ ಸಂಕಲನವಿದೆ. ಪ್ರೇಂ ನೃತ್ಯ ನಿರ್ದೇಶನ ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಗಜೇಂದ್ರ ಸಂಭಾಷಣೆ ಬರೆದಿದ್ದಾರೆ.
ಚಿತ್ರದಲ್ಲಿ ನಾಯಿಯೊಂದು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವುದು ವಿಶೇಷ.

Related Posts

error: Content is protected !!