ಭಾರತ ರೈತರ ಪರ ಮಾತಾಡಿದ ಹಾಲಿವುಡ್ ನಟಿಗೆ ರೇಪ್‌-ಕೊಲೆ ಬೆದರಿಕೆ!

ಹಾಲಿವುಡ್‌ ನಟಿ, ಸಾಮಾಜಿಕ ಹೋರಾಟಗಾರ್ತಿ ಜಮೀಲಾ ಬಿಚ್ಚಿಟ್ಟ ಸತ್ಯ 

ಭಾರತದಲ್ಲಿ ನಡೆಯುತ್ತಿರುವ ರೈತರ ಹೋರಾಟದ ವಿಚಾರವಾಗಿ ಬಹಳಷ್ಟು ನಟಿಮಣಿಯರು ಸ್ಟೇಟ್ ಮೆಂಟ್ ಗಳನ್ನು ನೀಡಿದ್ದು ಗೊತ್ತೇಇದೆ. ಆ ಕುರಿತಂತೆ ಸಾಕಷ್ಟು ಸ್ಟಾರ್‌ಗಳು ಸಹ ಟ್ವೀಟ್‌ ಮಾಡಿದ್ದಾರೆ. ಇತ್ತೀಚೆಗೆ ಕನ್ನಡದ ನಟಿ ಪ್ರಣೀತಾ ಟ್ವೀಟ್‌ ಮಾಡಿದ್ದರು. ಈಗ ಹಾಲಿವುಡ್‌ ನಟಿ ಮತ್ತು ಸಾಮಾಜಿಕ ಹೋರಾಟಗಾರ್ತಿ ಎಂದೇ ಗುರುತಿಸಿಕೊಂಡಿರುವ ಜಮೀಲಾ ಹಾಗೊಂದು ಟ್ವೀಟ್‌ ಮಾಡಿದ್ದಾರೆ. ಅಷ್ಟೇ ಅಲ್ಲ, ಟ್ವೀಟ್‌ ಮಾಡಿದ ನಂತರ ಕರಾಳ ಸತ್ಯವೊಂದನ್ನೂ ಬಿಚ್ಚಿಟ್ಟಿದ್ದಾರೆ.

ಹೌದು, ಭಾರತದ ರೈತರ ಬಗ್ಗೆ ಮಾತನಾಡಿದ ನಟಿ ಜಮೀಲಾ ಅವರಿಗೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳು ಬಂದಿವೆಯಂತೆ. ಈ ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಜಮೀಲಾ, ” ನಾನೂ ಮನುಷ್ಯಳು” ಎಂದು ಟ್ವೀಟರ್ ನಲ್ಲಿ ಹಾಕಿಕೊಂಡಿದ್ದಾರೆ.

Related Posts

error: Content is protected !!