ಹೀರೋ ಆಗಿ ಜಿಮ್ ರವಿ – ಅವರೀಗ ಪುರುಷೋತ್ತಮ

ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಎ.ವಿ.ರವಿ ಸಿನಿಮಾ ಮಾಡುತ್ತಿರುವುದು ಎಲ್ಲರಿಗೂ ಗೊತ್ತು. ಹಲವು ಸಿನಿಮಾಗಳಲ್ಲಿ ಪೋಷಕ ನಟರಾಗಿ‌ ಗುರುತಿಸಿಕೊಂಡಿದ್ದ ರವಿ ಅವರನ್ನು ಅಭಿಮಾನದಿಂದ ಜಿಮ್‌ರವಿ ಎಂದೇ ಕರೆಯುವುದುಂಟು. ರವಿ ಕನ್ನಡ ಸೇರಿದಂತೆ ದಕ್ಷಿಣ ಭಾರತದ ‌ಹಲವು ಸಿನಿಮಾಗಳಲ್ಲೂ ನಟಿಸಿದ್ದಾರೆ. ಈವರೆಗೆ 140ಕ್ಕೂ ಹೆಚ್ಚು ಚಿತ್ರಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸಿರುವ ಅವರು, ’ರವಿ ಜಿಮ್’ ತರಬೇತಿ ಶಾಲೆ ಶುರು ಮಾಡಿ ಕಳೆದ ಮೂರು ದಶಕಗಳಿಂದ ಸಾವಿರಾರು ವಿದ್ಯಾರ್ಥಿಗಳು ತರಬೇತಿ ಪಡೆದಿದ್ದಾರೆ.

ಈವರೆಗೆ ಪೋಷಕ ಪಾತ್ರಗಳಲ್ಲಿ ನಟಿಸುತ್ತಿದ್ದ ರವಿ ಈಗ ಪೂರ್ಣ ಪ್ರಮಾಣದ ಹೀರೋ ಆಗಿದ್ದಾರೆ. ಹೌದು ರವಿ ಈಗ, ’ಪುರುಷೋತ್ತಮ’ ಚಿತ್ರಕ್ಕೆ ಮೊದಲ ಬಾರಿ ನಾಯಕನಾಗಿ ಅಭಿನಯಿಸಿದ್ದು, ರವಿಸ್ ಜಿಮ್ ಪ್ರೊಡಕ್ಷನ್ಸ್ ಮೂಲಕ ನಿರ್ಮಾಪಕರಾಗಿ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಪ್ರೇಮಿಗಳ ದಿನದಂದು ಅದ್ದೂರಿಯಾಗಿ ಚಿತ್ರದ ಮಹೂರ್ತ ನಡೆಯಿತು. ಕಲಾಸಾಮ್ರಾಟ್ ಎಸ್.ನಾರಾಯಣ್ ಕ್ಲಾಪ್ ಮಾಡಿ ಶುಭ ಹಾರೈಸಿದರು. ಜೈಜಗದೀಶ್, ವಿಜಯಲಕ್ಷೀಸಿಂಗ್, ತುರುವೆಕೆರೆ ಶಾಸಕ ಮಸಾಲೆಜಯರಾಂ ಮುಂತಾದವರು ಶುಭ ಹಾರೈಸಿದ್ದಾರೆ.
ಚಿತ್ರಕ್ಕೆ ಎಸ್.ವಿ.ಅಮರನಾಥ್ ನಿರ್ದೇಶಕರು. ಸಿನಿಮಾಗೆ ಚಿತ್ರಕಥೆ, ಸಂಭಾಷಣೆ ಜವಬ್ದಾರಿ ಕೂಡ ಅವರದೇ.

ತಮ್ಮ ಸಿನಿಮಾ ಕುರಿತು ಹೇಳಿಕೊಂಡ ನಿರ್ದೇಶ ಎಸ್.ವಿ.ಅಮರನಾಥ್‌, ರವಿ ಅವರನ್ನು ಈವರೆಗೆ ಕ್ರೀಡಾಪಟು, ಕಲಾವಿದರನ್ನಾಗಿ ನೋಡಿದ್ದೀರಾ. ಈಗ ಅವರಲ್ಲಿರುವ ಹೊಸ ಪ್ರತಿಭೆಯನ್ನು ಬೇರೆ ರೀತಿ ಪರದೆ ಮೇಲೆ ತೋರಿಸವ ಪ್ರಯತ್ನ ಇಲ್ಲಿ ಮಾಡಲಾಗುತ್ತಿದೆ. ಹಾಗಂತ ಇಲ್ಲಿ ಕ್ರೀಡೆ, ಆಕ್ಷನ್ ದೃಶ್ಯಗಳು ಇರುವುದಿಲ್ಲ. ಪೂರ್ಣ ಪ್ರಮಾಣದ ಹಾಸ್ಯದ ಎಳೆಯಲ್ಲೇ ಕಥೆ ಸಾಗುತ್ತದೆ. ಮಧ್ಯಮ ವರ್ಗದ ಕುಟುಂಬದವರು ಪ್ರತಿ ನಿತ್ಯ ಏನಾದರೂ ಸಮಸ್ಯೆ ಎದುರಿಸುತ್ತಲೇ ಇರುತ್ತಾರೆ. ಆ ರೀತಿಯ ದೊಡ್ಡ ಚಾಲೆಂಜ್ ಇವರ ಬದುಕಲ್ಲಿ ಬಂದಾಗ, ಅದನ್ನು ಹೇಗೆ ನಿಭಾಯಿಸುತ್ತಾರೆ. ಇಲ್ಲಿ ನಾಯಕ ದೇಹ ಶಕ್ತಿಯನ್ನು ಪ್ರದರ್ಶಿಸದೆ, ಕೇವಲ ಬುದ್ದಿ ಶಕ್ತಿಯಿಂದ ಹೇಗೆಲ್ಲಾ ಅವಘಡಗಳನ್ನು ಸರಿಪಡಿಸಿಕೊಳ್ಳುತ್ತಾನೆ ಎಂಬುದು ಚಿತ್ರದ ಸಾರಾಂಶ.

ಬೆಂಗಳೂರು, ಮೈಸೂರು ಸುತ್ತಮುತ್ತಲ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಯಲಿದೆ. ನಿರ್ಮಾಪಕರು ಕಥೆಗೆ ಏನೆಲ್ಲಾ ಬೇಕೋ ಅದೆಲ್ಲವನ್ನೂ ಇಲ್ಲಿ ವ್ಯವಸ್ಥೆಗೊಳಿಸಿದ್ದಾರೆ. ನಾಯಕಿ ಸೇರಿದಂತೆ ಇತರೆ ಆಯ್ಕೆ ಪ್ರಕ್ರಿಯೆ ಇಷ್ಟರಲ್ಲೇ ಆಗಬೇಕಿದೆ ಎನ್ನುತ್ತಾರೆ ಅವರು.
ಮೊದಲ ಸಲ ತೆರೆ ಮೇಲೆ ಹೀರೋ ಆಗಿ ಕಾಣಿಸಿಕೊಳ್ಳುತ್ತಿರುವ ರವಿ, ಡಾ.ರಾಜ್‌ಕುಮಾರ್ ಅಭಿಮಾನಿಯಾಗಿ, ಅಣ್ಣಾವ್ರು ಹೇಳಿದ ಒಂದು ಮಾತನ್ನು ಇಂದಿಗೂ ಉಳಿಸಿಕೊಂಡಿದ್ದೇನೆ. ನಾಯಕನಿಂದ ಒದೆ ತಿನ್ನಿಸಿಕೊಳ್ಳುತ್ತಿರುವ ದೃಶ್ಯಗಳನ್ನು ನೋಡಿತ್ತಿದ್ದ ಹಿತೈಷಿಗಳು, ನೀವು ಯಾವಾಗ ಹೀರೋ ಆಗೋದು ಅಂತ ಕೇಳುತ್ತಲೇ ಇದ್ದರು.

ಅದಕ್ಕೆ ಈಗ ಕಾಲ ಕೂಡಿಬಂದಿದೆ. ನಿರ್ದೇಶಕರು ಯಾವುದೇ ಪಾತ್ರ ಕೊಟ್ಟರೂ ಶ್ರದ್ಧೆಯಿಂದ ಮಾಡುತ್ತಿದ್ದೆ. ನಾನು ಹಣದ ಹಿಂದೆ ಯಾವತ್ತು ಹೋಗಿರಲಿಲ್ಲ. ಈ ಚಿತ್ರದ ಪಾತ್ರಕ್ಕಾಗಿ ಹದಿನೆಂಟು ಕೆ.ಜಿ ತೂಕ ಇಳಿಸಿಕೊಂಡಿದ್ದೇನೆ” ಎಂದು ಮನವಿ ಮಾಡಿಕೊಂಡರು. ಆನಂದ್‌ ಪ್ರಿಯಾ, ಪ್ರಮೋದ್‌ ಮರವಂತೆ ಸಾಹಿತ್ಯವಿದೆ. ಶ್ರೀಧರ್.ವಿ.ಸಂಭ್ರಮ್ ಸಂಗೀತವಿದೆ. ಅರ್ಜುನ್ ಕಿಟ್ಟು ಸಂಕಲನವಿದೆ. ಬೇಬಿ ಅಂಕಿತಮೂರ್ತಿ ಇತರರು ಇದ್ದರು.

Related Posts

error: Content is protected !!