ವರ್ಧನ್ ತೀರ್ಥಹಳ್ಳಿ
ಕನ್ನಡ ಸಿನಿಮಾಗಳು ಈಗ ಎಲ್ಲೆಡೆ ಸದ್ದು ಮಾಡುತ್ತಿರುವುದು ಗೊತ್ತೇ ಇದೆ. ಆ ಸಾಲಿಗೆ ಈಗ “ದಾರಿ ಯಾವುದಯ್ಯ ವೈಕುಂಠಕೆ” ಸಿನಿಮಾವೂ ಸೇರಿದೆ. ಹೌದು, ಕೊಲ್ಕತ್ತಾದಲ್ಲಿ ನಡೆಯುವ ಕಲ್ಟ್ ಕ್ರಿಟಿಕ್ ಮೂವಿ ಅವಾರ್ಡ್ನಲ್ಲಿ ಒಂದಲ್ಲ, ಎರಡಲ್ಲ ಮೂರು ಪ್ರಶಸ್ತಿಗಳು ಲಭಿಸಿವೆ. ಚಿತ್ರವನ್ನು ಶರಣಪ್ಪ ಎಂ ಕೊಟಗಿ ನಿರ್ಮಾಣ ಮಾಡಿದ್ದಾರೆ.
ಬಲ ರಾಜವಾಡಿ
ಪೂರ್ಣ ಚಂದ್ರ ಅವರಿಗೆ ಉತ್ತಮ ನಿರ್ದೇಶಕ ಪ್ರಶಸ್ತಿ ದಕ್ಕಿದೆ. ನಟ ಬಲ ರಾಜವಾಡಿ ಅವರಿಗೆ ಉತ್ತಮ ಪೋಷಕ ನಟ ಪ್ರಶಸ್ತಿ ಹಾಗೂ ಚಿತ್ರಕ್ಕೆ ಬೆಸ್ಟ್ ಔಟ್ ಸ್ಟಾಂಡಿಂಗ್ ಅಚೀವ್ ಮೆಂಟ್ ಅವಾರ್ಡ್ ಬಂದಿದೆ. ಸಹಜವಾಗಿಯೇ ಈ ಪ್ರಶಸ್ತಿ ಲಭಿಸಿದ್ದು, ಚಿತ್ರತಂಡಕ್ಕೆ ಖುಷಿ ನೀಡಿದೆ. ಚಿತ್ರ ಈಗಾಗಲೇ ಬಿಡುಗಡೆಗೂ ಸಜ್ಜಾಗಿದೆ. ಚಿತ್ರಕ್ಕೆ ಮೂರು ವಿಭಾಗಗಳಲ್ಲಿ ಪ್ರಶಸ್ತಿ ಬಂದಿರುವುದಕ್ಕೆ ಚಿತ್ರತಂಡ ಸಂಭ್ರಮಪಟ್ಟಿದೆ.
ಈಗಾಗಲೇ ಒಂದಷ್ಟು ಚಿತ್ರೋತ್ಸವಗಳಲ್ಲಿ ಈ ಚಿತ್ರ ಆಯ್ಕೆಯಾಗಿದ್ದು, ಪ್ರದರ್ಶನ ಕಾಣಲಿದೆ. ಚಿತ್ರದಲ್ಲಿ ವರ್ಧನ್ ನಾಯಕರಾಗಿ ಅಭಿನಯಿಸಿದ್ದಾರೆ. ಪೂಜ (ತಿಥಿ ಖ್ಯಾತಿ), ಬಲ ರಾಜವಾಡಿ, ಶೀಬಾ, ಪ್ರಶಾಂತ್ ರಾವ್ ವರ್ಕು, ಅನುಷಾ, ಸ್ಪಂದನ ಪ್ರಸಾದ್, ಅರುಣ್ ಮೂರ್ತಿ ಮುಂತಾದವರು ಚಿತ್ರದಲ್ಲಿದ್ದಾರೆ.