ನಟ ಸಂಚಾರಿ ವಿಜಯ್‌ ಅವರಿಗೆ ಧನ್ಯವಾದ ಹೇಳಿದ ದರ್ಶನ್‌

ದರ್ಶನ್‌ ಅಭಿನಯದ ಬಹು ನಿರೀಕ್ಷಿತ ಚಿತ್ರ ರಾಬರ್ಟ್‌ ಅಬ್ಬರ ದಿನೇ ದಿನೆ ಹೆಚ್ಚಾಗುತ್ತಿದೆ. ಕರ್ನಾಟಕದ ಆಚೆ ಕೂಡ ರಾರಾಜಿಸುತ್ತಿದೆ. ಈ ನಡುವೆ ʼರಾಬರ್ಟ್‌ʼ ಚಿತ್ರದ ನೋಡಿ ಮೆಚ್ಚುಗೆಯ ಮಾತುಗಳನ್ನಾಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್‌ ಅವರಿಗೆ ನಟ ದರ್ಶನ್‌ ಧನ್ಯವಾದ ಹೇಳಿದ್ದಾರೆ.

” ನಿಮ್ಮ ಈ ಪ್ರೀತಿ ವಿಶ್ವಾಸಕ್ಕೆ ಹೃದಯ ಪೂರ್ವಕ ಧನ್ಯವಾದಗಳು ಅಂತ ದರ್ಶನ್‌ ಹೇಳಿದ್ದಾರೆ. ಹಾಗಾದ್ರೆ ಬಹು ನಿರೀಕ್ಷಿತ ರಾಬರ್ಟ್‌ ಚಿತ್ರ ನೋಡಿ ನಟ ಸಂಚಾರಿ ವಿಜಯ್‌ ಹೇಳಿದ್ದೇನು?
” ಸಿಂಗಲ್‌ ಸ್ಕ್ರೀನ್ನಲ್ಲಿ ಚಪ್ಪಾಳೆ, ಕೇಕೆ, ಶಿಳ್ಳೆ ಬಿದ್ರೆ ಅದು ಮಾಸ್‌ !! ಅದರ ಜೊತೆಗೆ ಮಲ್ಟಿಪ್ಲೆಕ್ಸ್‌ ನಲ್ಲೂ ಇದೇ ಚಪ್ಪಾಳೆ, ಕೇಕೆ, ಶಿಳ್ಳೆ ಬಿದ್ರೆ ಅದು ಮಾಸ್‌ ಗೆ ಬಾಸ್‌ !! ಅದು ನಿಜವಾದ ಡಿ ಬಾಸ್‌ ಶಕ್ತಿ. ನಾನು ನಿಜಕ್ಕೂ ಎಂಜಾಯ್‌ ಮಾಡಿದೆ. ನೀವು ಕೂಡ ನಿಮ್ಮ ಕುಟುಂಬದ ಜತೆಗೆ ಹೋಗಿ ಸಿನಿಮಾ ನೋಡಿ, ಎಂಜಾಯ್‌ ಮಾಡಿ ʼ ಅಂತ ನಟ ಸಂಚಾರಿ ವಿಜಯ್‌ ʼರಾಬರ್ಟ್‌ʼ ಚಿತ್ರ ನೋಡಿದ ನಂತರ ಸೋಷಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

Related Posts

error: Content is protected !!