ದಾರಿ ಯಾವುದಯ್ಯಾ ವೈಕುಂಠಕೆ ಸಿನಿಮಾ ಕಥೆಗೆ ಸಿಕ್ತು ರಾಜಸ್ತಾನ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್‌ ಪ್ರಶಸ್ತಿ

ರಾಜಸ್ತಾನದ ಜೋಧ್‌ಪುರದಲ್ಲಿ ನಡೆಯುವ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕನ್ನಡದ “ದಾರಿ ಯಾವುದಯ್ಯಾ ವೈಕುಂಠಕೆ” ಚಿತ್ರಕ್ಕೆ ಉತ್ತಮ ಕಥೆ ಪ್ರಶಸ್ತಿ ಲಭಿಸಿದೆ. ಚಿತ್ರ ವೀಕ್ಷಿಸಿದ ಜನರಿಂದಲೂ ಒಳ್ಳೆಯ ಮೆಚ್ಚುಗೆಗೆ ಪಾತ್ರವಾಗಿದೆ. ನಿರ್ದೇಶಕ ಸಿದ್ದು ಪೂರ್ಣಚಂದ್ರ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ಈಗಾಗಲೇ ಈ ಚಿತ್ರ ಹಲವು ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್‌ಗಳಲ್ಲಿ ಪ್ರದರ್ಶನ ಕಂಡು ಸುಮಾರು 30ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಆ [ಪೈಕಿ ನಾಲ್ಕು “ಬೆಸ್ಟ್ ಡೈರೆಕ್ಟರ್” ಅವಾರ್ಡ್ ಬಂದಿದೆ. ಬಿಡುಗಡೆಗೂ ಮುನ್ನ ಎಲ್ಲಾ ಕಡೆ ಪ್ರಶಂಸೆ ದೊರಕಿರುವುದಕ್ಕೆ ಚಿತ್ರತಂಡ ಸಂಭ್ರಮದಲ್ಲಿದೆ. ಶ್ರೀ ಬಸವೇಶ್ವರ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಶರಣಪ್ಪ ಎಂ ಕೊಟಗಿ ಅವರು ನಿರ್ಮಿಸಿರುವ ಚಿತ್ರದಲ್ಲಿ ವರ್ಧನ್ ನಾಯಕರಾಗಿ ನಟಿಸಿದ್ದಾರೆ.

ಅವರೊಂದಿಗೆ “ತಿಥಿ” ಖ್ಯಾತಿಯ ಪೂಜಾ, ಅನೂಷಾ, ಬಲರಾಜವಾಡಿ, ಶೀಬಾ, ಪ್ರಶಾಂತ್ ರಾವ್ ವರ್ಕು, ಅರುಣ್‌ ಮೂರ್ತಿ, ಸಂಗೀತ, ಗೌಡಿ, ಸಿದ್ಧಾರ್ಥ್, ಪ್ರಣಯ್ ಮೂರ್ತಿ, ಸ್ಪಂದನ ಪ್ರಸಾದ್, ದಯಾನಂದ್. ಸುಚಿತ್, ಮೈಸೂರು ಬಸವರಾಜ ಇತರರು ನಟಿಸಿದ್ದಾರೆ. ಲೋಕಿ ಸಂಗೀತವಿದೆ. ನಿತಿನ್ ಛಾಯಾಗ್ರಹಣ ಮಾಡಿದರೆ, ಮುತ್ತುರಾಜ್ ಸಂಕಲನವಿದೆ.

Related Posts

error: Content is protected !!