ನನಗೆ ಕೊರೋನಾ ಪಾಸಿಟಿವ್‌ ಬಂದಿದೆ,ಮುಂದೆ ನಂಗೇನಾದ್ರೂ ಆಗಿದ್ದಾದ್ದಲ್ಲಿ,ಅದಕ್ಕೆ ನೇರ ಕಾರಣವೇ ರಾಜ್ಯ ಸರ್ಕಾರ : ನಿರ್ದೇಶಕ ಗುರು ಪ್ರಸಾದ್‌ ಆಕ್ರೋಶ

ʼಮಠʼ ಚಿತ್ರದ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್‌ ಅವರಿಗೆ ಕೊರೋನಾ ಪಾಸಿಟಿವ್‌ ಬಂದಿದೆ. ತಮಗೆ ಕೊರೋನಾ ಪಾಸಿಟಿವ್ ಧೃಡಪಟ್ಟಿರುವ ಕುರಿತು ಮಾತನಾಡಿರುವ ವಿಡಿಯೋವೊಂದನ್ನು ಗುರುಪ್ರಸಾದ್‌ ಸೋಷಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.” ನನಗೆ ಕರೋನಾ ಪಾಸಿಟಿವ್‌ ಬಂದಿದೆ. ಬಂದಿದೆ ಅನ್ನೊದಕ್ಕಿಂತ ರಾಜ್ಯ ಸರ್ಕಾರ ಮನೆ ಮನೆಗೆ ಕೊರೋನಾ ತಂದು ಮುಟ್ಟಿಸಿದೆ. ಇದಕ್ಕೆ ಮುಖ್ಯ ಕಾರಣ ಸಿಎಂ ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ್.‌ ಇದು ಇವರೆಲ್ಲರ ಕೊಡುಗೆ. ಮುಂದೆ ನಾನು ಏನಾಗುತ್ತೇನೋ ಗೊತ್ತಿಲ್ಲ. ಹಾಗೇನಾದ್ರು ನಂಗೆ ಆದ್ರೆ ಅದಕ್ಕೆ ರಾಜ್ಯ ಸರ್ಕಾರವೇ ಕಾರಣ ಅಂತ ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿರುವ ಗುರು ಪ್ರಸಾದ್‌, ತೀವ್ರ ನೋವು ತೊಡಿಕೊಂಡಿದ್ದಾರೆ. ಅದರ ಸಂಪೂರ್ಣ ವಿಡಿಯೋ ಇಲ್ಲಿದೆ. ( ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ )

https://www.facebook.com/watch/?v=1206848433063292

Related Posts

error: Content is protected !!