ರಾಜಕೀಯ ಬಿಜಿನೆಸ್‌ ಆಗಿದ್ದೇ ಇದಕ್ಕೆಲ್ಲ ಕಾರಣ ಅಲ್ವಾ ? ರಿಯಲ್‌ ಸ್ಟಾರ್‌ ಉಪೇಂದ್ರ ಪ್ರಶ್ನೆ

ಕೊರೋನಾ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ತೋರಿರುವ ನಿರ್ಲಕ್ಷ್ಯಕ್ಕೆ ನಟ ಉಪೇಂದ್ರ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಸದ್ಯ ರಾಜ್ಯಾದ್ಯಂತ ಜನ ಸಾಮಾನ್ಯರ ಪರಿಸ್ಥಿತಿ ನೋಡಿದ್ರೆ, ಕರಳು ಹಿಂಡುತ್ತದೆ. ಆಸ್ಪತ್ರೆಗಳಲ್ಲಿ ಸಕಾಲಕ್ಕೆ ಸರಿಯಾದ ಚಿಕಿತ್ಸೆ ಸಿಗದ ಜನರ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇಂತಹ ಭೀಕರ ಪರಿಸ್ಥಿತಿ ಬರಬಹುದು ಅಂತ ಗೊತ್ತಿದ್ದರೂ ಸರ್ಕಾರಗಳು ಬಹುದೊಡ್ಡ ನಿರ್ಲಕ್ಷ್ಯ ತೋರಿದವು. ಅದೇ ಇವತ್ತಿನ ಪರಿಸ್ಥಿತಿಗೆಲ್ಲ ಕಾರಣ ಅಂತ ಉಪೇಂದ್ರ, ಕಿಡಿಕಾರಿದರು. ʼಲಗಾಮ್‌ʼ ಚಿತ್ರದ ಮುಹೂರ್ತದ ವೇಳೆ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

ಚುನಾವಣೆ ಬಂದಾಗ ಯಾಕೆ ಯೋಚಿಸುವುದಿಲ್ಲ..?

ಮಿತಿ ಮೀರಿದ ಕೊರೋನಾ ಪರಿಸ್ಥಿತಿ, ಜನರ ಸಾವು_ನೋವಿನ ಘಟನಗೆಳಿಗೆ ಪ್ರಜಾಕೀಯದ ಪ್ರತಿಕ್ರಿಯೆ ಏನು ಎನ್ನುವ ಮಾಧ್ಯಮದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಶಿಕ್ಷಣ ಖಾಸಗೀಕರಣ ಆದಂತೆಯೇ ಇವತ್ತು ರಾಜಕೀಯ ಅನ್ನೋದು ಬಿಸಿನೆಸ್‌ ಆಗಿರೋದ್ರಿಂದಲೇ ಜನರು ಇವತ್ತು ಅಸ್ಪತ್ರೆಗಳಲ್ಲಿ ಸಕಾಲಕ್ಕೆ ಸೌಲಭ್ಯ ಸಿಗದೆ ಜೀವ ಕಳೆದುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಲ್ಲಿ ಯಾರದು ಸರಿ, ಯಾರದು ತಪ್ಪು ಅಂತ ಹೇಳೋದೆ ಕಷ್ಟ. ಯಾಕಂದ್ರೆ ಜನ ಕೂಡ ಚುನಾವಣೆಗಳು ಬಂದಾಗ ತಮ್ಮ ಜವಾಬ್ದಾರಿಗಳನ್ನು ಮರೆತು ಬಿಡುತ್ತಾರೆ. ಆಗ ಜಾತಿ, ಹಣ, ಪಕ್ಷ ಅಂತೆಲ್ಲ ತಮ್ಮ ಮತಗಳನ್ನು ಇನ್ನಾವುದಕ್ಕೋ ಮೀಡಲಿಡುತ್ತಾರೆ. ಆಮೇಲೆ ಇಂತಹ ಪರಿಸ್ಥಿತಿ ನಿರ್ಮಾಣ ಆದಾಗ ಪ್ರತಿಭಟನೆ, ಧರಣಿ ಅಂತೆಲ್ಲ ಮಾತನಾಡುತ್ತಾರೆ ಅಂತ ಉಪೇಂದ್ರ ಬೇಸರ ಹೊರ ಹಾಕಿದರು.

ಕೊರೋನಾ ಅಂತ ಭಯ ಬೇಡ, ಧೈರ್ಯದಿಂದಿರಿ

ಖಾಸಗಿ ಆಸ್ಪತ್ರೆಗಳ ವೈದ್ಯರ ಪರಿಸ್ಥಿತಿ ಬಗ್ಗೆಯೂ ಮಾತನಾಡುವಂತಿಲ್ಲ. ಅವರು ಕೂಡ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮೆಡಿಕಲ್‌ ಕೊರ್ಸ್‌ ಮುಗಿಸಿ ಬಂದಿರುತ್ತಾರೆ. ಹಾಗೆಯೇ ಕೊಟ್ಯಾಂತರ ರೂ. ಖರ್ಚು ಮಾಡಿ ಆಸ್ಪತ್ರೆ ಕಟ್ಟುಕೊಂಡಿರುತ್ತಾರೆ. ಅವರು ತಮ್ಮ ಖರ್ಚು ವೆಚ್ಚಗಳ ನ್ನು ನೋಡಿಕೊಳ್ಳುವುದಕ್ಕೆ ಜನರಿಂದ ದುಬಾರಿ ಹಣ ಪಡೆಯುತ್ತಾರೆ. ಇದೆಲ್ಲದಕ್ಕೆ ಯಾರನ್ನು ದೂರೋಣ? ಇದಕ್ಕೆ ಇರೋದು ಒಂದೇ ದಾರಿ, ಜನರು ಚುನಾವಣೆ ಬಂದಾಗ ವಿಚಾರವಂತರಾಗಬೇಕು. ಸರಿಯಾದ ವ್ಯಕ್ತಿಗಳನ್ನು ಗೆಲ್ಲಿಸಿಕೊಳ್ಳಬೇಕು ಅಂತ ಉಪೇಂದ್ರ ಕಿವಿ ಮಾತು ಹೇಳಿದರು. ಹಾಗೆಯೇ ಕೊರೋನಾ ಅಂತ ಭಯ ಪಡುವುದು ಬೇಡ. ಧೈರ್ಯದಿಂದ ಇರಿ. ಕೆಲವೊಮ್ಮೆ ನಮ್ಮ ಧೈರ್ಯವೇ ರೋಗಕ್ಕೆ ಮದ್ದು. ಇದನ್ನು ಪಾಲಿಸಿ. ಹಾಗಂತ ಮಾಸ್ಕ್‌ ಹಾಗೂ ಸಾನಿಟೈಸರ್‌ ಬಳಸುವುದನ್ನು ಮರೆಯಬೇಡಿ ಅಂತ ಉಪೇಂದ್ರ ಹೇಳಿದರು.

Related Posts

error: Content is protected !!