ಹೊಸ ರೂಪದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಬಯೋಗ್ರಫಿ!! ಎರಡನೇ ಮುದ್ರಣ ಪಡೆದ ಲೇಖಕ ಡಾ. ಶರಣು ಹುಲ್ಲೂರು ಪುಸ್ತಕ

ವಿಶ್ವ ಪುಸ್ತಕ ದಿನದಂದು ಕನ್ನಡದ ಹೆಸರಾಂತ ನಟ, ರಾಜಕಾರಣಿ ರೆಬೆಲ್ ಸ್ಟಾರ್ ಅಂಬರೀಶ್ ಅವರ ಬಯೋಗ್ರಫಿ ಹೊಂದಿದ “ಅಂಬರೀಶ್-‌ ವ್ಯಕ್ತಿ-ವ್ಯಕ್ತಿತ್ವ- ವರ್ಣರಂಜಿತ ಬದುಕು” ಪುಸ್ತಕ ಈಗ ಹೊಸ ರೂಪ ಪಡೆದುಕೊಂಡಿದೆ. ಹೌದು, ಇದು ವಿಶೇಷವೇ ಸರಿ. ಕಳೆದ 2018ರಲ್ಲಿ ಬಿಡುಗಡೆಯಾದ ಈ ಪುಸ್ತಕವನ್ನು ನಾಡಿನ ಹೆಸರಾಂತ ಪ್ರಕಾಶನ ಸಂಸ್ಥೆ ಸಾವಣ್ಣ ಪ್ರಕಾಶನ ಈ ಪುಸ್ತಕವನ್ನು ಹೊರತಂದಿತ್ತು. ಬಿಡುಗಡೆಯಾಗಿದ್ದೇ ತಡ, ಈ ಪುಸ್ತಕಕ್ಕೆ ಭಾರೀ ಬೇಡಿಕೆ ಬಂದಿತ್ತು.

ಮುದ್ರಣಗೊಂಡಿದ್ದ ಎಲ್ಲಾ ಪುಸ್ತಕಗಳೂ ಖಾಲಿಯಾಗಿದ್ದವು. ಹಾಗಾಗಿ ಸಾವಣ್ಣ ಪ್ರಕಾಶನ ಈಗ ಎರಡನೇ ಮುದ್ರಣ ಮಾಡಿದೆ. ಪ್ರಕಾಶನ ಸಂಸ್ಥೆಯಿಂದ ಹೊರ ಬಂದಿರುವ ಈ ಎರಡನೇ ಮುದ್ರಣದ ಪುಸ್ತಕ, ಹೊಸ ವಿನ್ಯಾಸ ಮತ್ತು ಹೊಸ ಮುಖಪುಟ ಹೊತ್ತು ಬಂದಿದೆ. ಇತ್ತೀಚೆಗೆ ಲೇಖಕ ಡಾ.ಶರಣು ಹುಲ್ಲೂರು ಮತ್ತು ಪ್ರಕಾಶಕ ಜಮೀಲ್‌ ಸಾವಣ್ಣ ಅವರು ಸರಳವಾಗಿಯೇ ಬಿಡುಗಡೆ ಮಾಡಿದ್ದಾರೆ. ಮಂಡ್ಯದಲ್ಲಿ ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ಈ ಪುಸ್ತಕವನ್ನು ಸಂಸದೆ ಸುಮಲತಾ ಅಂಬರೀಶ್ ಅವರು ಬಿಡುಗಡೆ ಮಾಡಿದ್ದರು.

ಈ ಸಂದರ್ಭದಲ್ಲಿ ರಾಕಿಂಗ್ ಸ್ಟಾರ್ ಯಶ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೂಡ ಜೊತೆಗಿದ್ದು, ಪುಸ್ತಕ ಬಿಡುಗಡೆಗೆ ಕೈ ಜೋಡಿಸಿದ್ದರು. ಈ ಪುಸ್ತಕಕ್ಕೆ ಅಪಾರ ಜನಮನ್ನಣೆ ಕೂಡ ಸಿಕ್ಕಿತು. ಅಲ್ಲದೇ ಕರ್ನಾಟಕ ಸರಕಾರ ನೀಡುವ ಚಲನಚಿತ್ರ ಸಾಹಿತ್ಯ ರಾಜ್ಯ ಪ್ರಶಸ್ತಿ ಕೂಡ 2018ರಲ್ಲಿ ಪುಸ್ತಕಕ್ಕೆ ಲಭಿಸಿದೆ. ಸದ್ಯ “ಅಂಬರೀಶ್-‌ ವ್ಯಕ್ತಿ-ವ್ಯಕ್ತಿತ್ವ- ವರ್ಣರಂಜಿತ ಬದುಕು “ಪುಸ್ತಕ ಎಲ್ಲ ಮಳಿಗೆಗಳಲ್ಲೂ ಸಿಗಲಿದೆ. ಹಾಗೆಯೇ ಸಾವಣ್ಣ ಪ್ರಕಾಶನದಲ್ಲೂ ಲಭ್ಯವಿದೆ.

Related Posts

error: Content is protected !!