ಪ್ರತಿಷ್ಠಿತ ಕಾನ್​​ ಚಿತ್ರೋತ್ಸವಕ್ಕೆ ದೇವರ ಕನಸು! ಸೈಕಲ್ ಹುಡುಗನೊಬ್ಬನ ಗೆಲುವಿನ ಸವಾರಿ ಕಥೆ…

ಮಿಲೇನಿಯಮ್ ಪ್ರೊಡಕ್ಷನ್ಸ್ ಬ್ಯಾನರ್​ನಲ್ಲಿ ನಿರ್ದೇಶಕ ಸುರೇಶ್ ಲಕ್ಕೂರ್ ನಿರ್ದೇಶನದಲ್ಲಿ ತಯಾರಾದ “ದೇವರ ಕನಸು” ಸಿನಿಮಾ ಇದೀಗ ಪ್ರತಿಷ್ಠಿತ ಕಾನ್ ಸಿನಿಮೋತ್ಸವಕ್ಕೆ ಆಯ್ಕೆಯಾಗಿದೆ.
ಸಾಮಾಜಿಕ ಸಂದೇಶ ಸಾರುವ ಈ ಸಿನಿಮಾದಲ್ಲಿ 12 ವರ್ಷದ ಬಾಲಕನ ಸೈಕಲ್ ಪಡೆದುಕೊಳ್ಳುವ ಕನಸಿನ ಸುತ್ತ ನಿರ್ದೇಶಕರು ಕಥೆ ಹೆಣೆದಿದ್ದಾರೆ. ಸ್ವಂತ ಸೈಕಲ್ ಖರೀದಿಸಿ ಊರ ಸೈಕಲ್ ರೇಸ್​ನಲ್ಲಿ ಗೆಲುವು ಸಾಧಿಸುವುದು ಆತನ ಮುಖ್ಯ ಉದ್ದೇಶ. ಅದನ್ನು ಈಡೇರಿಸಿಕೊಳ್ಳಲು ಬಾಲಕ ಏನೆಲ್ಲ ಹರಸಾಹಸ ಮಾಡುತ್ತಾನೆ ಎಂಬುದೇ “ದೇವರ ಕನಸು” ಚಿತ್ರದ ಕಥೆ.


2019ರಲ್ಲಿಯೇ ಶೂಟಿಂಗ್ ಆರಂಭಿಸಿದ್ದ ಈ ಸಿನಿಮಾ, ಒಟ್ಟು 29 ದಿನಗಳಲ್ಲಿ ಸಂಪೂರ್ಣ ಶೂಟಿಂಗ್ ಮುಗಿಸಿಕೊಂಡು, ಇದೀಗ ಅಂತಾರಾಷ್ಟ್ರೀಯ ಸಿನಿಮೋತ್ಸವಗಳಿಗೆ ಕಾಲಿಡುತ್ತಿದೆ. ಮೊದಲ ಹೆಜ್ಜೆಯಾಗಿ ಪ್ರತಿಷ್ಠಿತ ಕಾನ್ ಚಿತ್ರೋತ್ಸವದ ಅವಕಾಶ ಸಿಕ್ಕಿದ್ದು, ಇನ್ನೇನು ಮೇ ಅಂತ್ಯದಲ್ಲಿ ಚಿತ್ರ ಪ್ರದರ್ಶನವಾಗಲಿದೆ. ಇದರ ಜತೆಗೆ ಬೇರೆ ಬೇರೆ ಸಿನಿಮೋತ್ಸವಗಳಿಂದಲೂ ಆಹ್ವಾನ ಬರುತ್ತಿದೆ.
ಇನ್ನು ಈ ಸಿನಿಮಾದ ಮತ್ತೊಂದು ವಿಶೇಷ ಏನೆಂದರೆ, “ದೇವರ ಕನಸು” ಚಿತ್ರಕ್ಕೆ ಪ್ಯಾನ್ ಇಂಡಿಯಾ ತಂತ್ರಜ್ಞರು ಕೆಲಸ ಮಾಡಿದ್ದಾರೆ.

ರತ್ನಜಿತ್ ರಾಯ್ ಛಾಯಾಗ್ರಹಣ, ಅನಿರ್ಬನ್ ಗಂಗೂಲಿ ಸೌಂಡ್ ಡಿಸೈನಿಂಗ್, ಜಿಸ್ನು ಸೇನ್ ಸಮಕಲನ ಮಾಡಿದ್ದಾರೆ. ಇವರೆಲ್ಲ ಮೂಲತಃ ಪಶ್ಚಿಮ ಬಂಗಾಳದವರು. ಅದೇ ರೀತಿ ಚೆನ್ನೈ ಮೂಲದ ನಿತ್ಯಾನಂದ ಸೌಂಡ್, ಸುಂದರ್ ಆರ್ ಅವರು ಸಂಗೀತ ನೀಡಿದ್ದಾರೆ. ಕೇರಳ ಮೂಲದ ಜಿಷಾ ಮ್ಯಾಥ್ಯು ವಸ್ತ್ರ ವಿನ್ಯಾಸ ಮಾಡಿದ್ದು, ಮನೋಜ್ ಅಂಗಮಾಲಿ ಮೇಕಪ್ ಕೆಲಸ ನಿರ್ವಹಿಸಿದ್ದಾರೆ.

ಕರ್ನಾಟಕದ ಲಿಂಗರಾಜ್ ಇತಿಹಾಸ್ ಸಂಭಾಷಣೆ ಮತ್ತು ಸಾಹಿತ್ಯ ಬರೆದರೆ, ಚನ್ನಬಸವ ಪ್ರೊಡಕ್ಷನ್ ಡಿಸೈನರ್ ಆಗಿ ಕೆಲಸ ಮಾಡಿದ್ದಾರೆ. ಈ ಸಿನಿಮಾಕ್ಕೆ ಸುನೀಲ್ ರಾಮ್ ಕಥೆ ಬರೆದಿದ್ದಾರೆ.
ನಿರ್ದೇಶಕ ಸುರೇಶ್ ಲಕ್ಕೂರ್ ನ್ಯೂಯಾರ್ಕ್​ ಸಿನಿಮಾ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದು, “ದೇವರ ಕನಸು” ಅವರ ಮೊದಲ ಚಿತ್ರ.
ಇದು ಚಿಂತಾಮಣಿ ಬಳಿಯ ಹಿರೇಪಳ್ಳಿ. ಕನಂಪಲ್ಲಿ, ಕೈವಾರ ಸುತ್ತಮುತ್ತ ಚಿತ್ರೀಕರಣವಾಗಿದೆ.

ಚಿತ್ರದಲ್ಲಿ ದೀಪಕ್, ಅಮೂಲ್ಯ, ಯುವರಾಜ್ ಕಿಣಿ, ಆರುಷಿ ವೇದಿಕಾ, ಮಣಿ, ರೂಪಾ, ವಿಜಯ್ ರಾಕೇಶ್ ನಟಿಸಿದ್ದಾರೆ. ಸಿ. ಜಯಕುಮಾರ್, ಸಿ ಶೇಖರ್ ನಿರ್ಮಾಪಕರು. ಗಂಗಾಧರ್, ಶಂಕರ್, ಸಿ ಸುಬ್ಬಯ್ಯ ಸಹ ನಿರ್ಮಾಣವಿದೆ.

Related Posts

error: Content is protected !!