ಕೊರೊನಾ ಅಲೆ ಜೋರು; ಮತ್ತೆ ಫೀಲ್ಡಿಗಿಳಿದ ರಾಗಿಣಿ – ಸ್ಮಶಾನ ಸಿಬ್ಬಂದಿಗೆ ಫುಡ್‌ ಕಿಟ್‌ ವಿತರಣೆ

ನಟಿ ರಾಗಿಣಿ ಮತ್ತೆ ಫೀಲ್ಡಿಗೆ ಇಳಿದಿದ್ದಾರೆ. ಕೊರೊನಾ ಎರಡನೇ ಅಲೆಯ ಸಂಕಷ್ಟದ ಕಾಲದಲ್ಲಿ ಜೀವದ ಹಂಗು ತೊರೆದು ಅಸಹಾಯಕರ ನೆರವಿಗೆ ಧಾವಿಸಿದ್ದಾರೆ. ಕಳೆದ ವರ್ಷ ಕೂಡ ಇದೇ ರೀತಿ ಅಸಹಾಯಕ ಜನರ ನೆರವಿಗೆ ನಿಂತಿದ್ದರು. ಬೆಂಗಳೂರಿನ ಗಲ್ಲಿ ಗಲ್ಲಿಗಳಿಗೆ ಅಲೆದು ಸಾಕಷ್ಟು ಜನರಿಗೆ ಆಹಾರ ಸಾಮಾಗ್ರಿ ನೀಡಿದ್ದರು. ಈಗಲೂ ಅಂತಹದೇ ಕೆಲಸಕ್ಕೆ ನಿಂತಿದ್ದಾರೆ. ಜಿನೆಕ್ಸ್ಟ್‌ ಚಾರಿಟೆಬಲ್‌ ಟ್ರಸ್ಟ್‌ ನೇತೃತ್ವದಲ್ಲಿ ಕಾಕ್ಸ್‌ ಟೌನ್‌ ಹತ್ತಿರ ಕಲ್ಪಹಳ್ಳಿ ಹಾಗೂ ಭಾರತಿ ನಗರ ಸ್ಮಶಾನ ಸಿಬ್ಬಂದಿಗೆ ಆಹಾರ ಸಾಮಾಗ್ರಿ ವಿತರಣೆ ಮಾಡಿದರು.

ಸಾವಿನ ಸಂಖ್ಯೆಗಳು ಹೆಚ್ಚುತ್ತಿವೆ. ಇಲ್ಲಿ ಕೆಲಸ ಮಾಡುವಂತಹ ಜನರು ಒತ್ತಡಕ್ಕೆ ಸಿಲುಕಿದ್ದಾರೆ. ಅವರಿಗೂ ಜೀವ ಭಯ ಇದೆ, ಅದನ್ನು ದೂರ ಮಾಡಿಕೊಂಡು ಅವರು ಸತ್ತವರ ಅಂತ್ಯ ಸಂಸ್ಕಾರ ಮಾಡಬೇಕಿದೆ. ಅವರಿಗೆ ನಾವೀಗ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ.


” ಈ ಸಮಯದಲ್ಲಿ ನಾವು ಕಷ್ಟದಲ್ಲಿರುವವರಿಗೆ ನೆರವಿಗೆ ನಿಲ್ಲಬೇಕಿದೆ. ಅದೇ ಕಾರಣಕ್ಕೆ ನಾವೀಗ ಈ ಕೆಲಸ ಶುರು ಮಾಡಿದ್ದೇವೆ. ವಿಶೇಷವಾಗಿ ಬೆಂಗಳೂರು ನಗರದಲ್ಲಿನ ಸ್ಮಶಾನ ಸಿಬ್ಬಂದಿ ತೀವ್ರ ಸಂಕಷ್ಟದಲ್ಲಿದ್ದಾರೆ. ಯಾಕಂದ್ರೆ ಕೋವಿಡ್‌ ಎರಡನೇ ಅಲೆ ಭಯಾನಕ ಪರಿಸ್ಥಿತಿ ನಿರ್ಮಾಣ ಮಾಡಿದೆ. ಸಾವಿನ ಸಂಖ್ಯೆಗಳು ಹೆಚ್ಚುತ್ತಿವೆ. ಇಲ್ಲಿ ಕೆಲಸ ಮಾಡುವಂತಹ ಜನರು ಒತ್ತಡಕ್ಕೆ ಸಿಲುಕಿದ್ದಾರೆ. ಅವರಿಗೂ ಜೀವ ಭಯ ಇದೆ, ಅದನ್ನು ದೂರ ಮಾಡಿಕೊಂಡು ಅವರು ಸತ್ತವರ ಅಂತ್ಯ ಸಂಸ್ಕಾರ ಮಾಡಬೇಕಿದೆ. ಅವರಿಗೆ ನಾವೀಗ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ. ಸಾಮಾಜಿಕ ಸೇವಾ ಕಾರ್ಯಕರ್ತ ರವಿ ಅವರ ಮೂಲಕ ಇಲ್ಲಿ ಈ ಕೆಲಸ ಆಗಿದೆʼ ಎನ್ನುತ್ತಾರೆ ನಟಿ ರಾಗಿಣಿ.


ಕಳೆದ ವರ್ಷ ಕೊರೊನಾ ಶುರುವಾದ ಸಂದರ್ಭದಲ್ಲಿ ಬೆಂಗಳೂರು ನಗರದ ಸ್ಲಂ ಪ್ರದೇಶದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದಾಗ ವಿವಿಧ ಸಂಘ ಸಂಸ್ಥೆಗಳ ಮೂಲಕ ನಟಿ ರಾಗಿಣಿ, ಆಹಾರ ಸಾಮಾಗ್ರಿ ವಿತರಣೆಯಲ್ಲಿ ತೊಡಗಿಸಿಕೊಂಡು ಸಾಕಷ್ಟು ಸುದ್ದಿಯಲ್ಲಿದ್ದರು. ಇನ್ನೇನು ಕೊರೋನಾ ಸ್ವಲ್ಪ ಕಡಿಮೆ ಆಯ್ತು ಎನ್ನುವ ಹೊತ್ತಿಗೆ ಸಾಕಷ್ಟು ಸದ್ದು ಮಾಡಿದ ಡ್ರಗ್ಸ್‌ ಕೇಸ್‌ ಪ್ರಕರಣದಲ್ಲಿ ರಾಗಿಣಿ ಹೆಸರು ಕೂಡ ತಳಕು ಹಾಕಿಕೊಂಡು, ಜೈಲು ಪಾಲಾಗಿದ್ದರು.

ಜಾಮೀನು ಪಡೆದು ಅಲ್ಲಿಂದ ಹೊರ ಬಂದ ನಂತರ ಯಾವುದಕ್ಕೂ ತಲೆ ಕಡೆಸಿಕೊಳ್ಳದೆ ಮತ್ತೆ ಸಿನಿಮಾ ಚಟುವಟಿಕೆಗಳ ಜತೆಗೆ ಸಾಮಾಜಿಕ ಕೆಲಸಗಳಲ್ಲೂ ತೊಡಗಿಸಿಕೊಂಡರು. ಈಗ ಮತ್ತೆ ಕೊರೊನಾಗ ಸಂಕಷ್ಟದಲ್ಲಿದ್ದವರ ನೆರವಿಗೆ ಧಾವಿಸಿದ್ದಾರೆ ರಾಗಿಣಿ

Related Posts

error: Content is protected !!