ಮಾನವರು ಒಂದಾದರೆ ಈ ಮಹಾಮಾರಿಯದು ಯಾವ ಲೆಕ್ಕ ? ಅಸಹಾಯಕ ಜೀವ ಸಲಹಲು ಪೀಪಲ್ ಫಾರ್ ಪೀಪಲ್ ಸಜ್ಜು!

ಪೀಪಲ್ ಫಾರ್ ಪೀಪಲ್ ತಂಡ ಮತ್ತೆ ತನ್ನ ಕೆಲಸ ಶುರುವಿಟ್ಟುಕೊಂಡಿದೆ. ಕಳೆದ ವರ್ಷ ಸಾಕಷ್ಟು ಸದ್ದು ಮಾಡಿತ್ತು. ಅದರಲ್ಲೂ ಕೊಡಗು ಭಾಗದ ಜನ ಮಳೆಗೆ ತತ್ತರಿಸಿದ್ದಾಗ, ಉತ್ತರ ಕರ್ನಾಟಕ ಭಾಗದ ಮಂದಿ ನೆರೆಗೆ ರೋಸಿ ಹೋಗಿದ್ದಾಗ, ಕೋವಿಡ್ ಸಮಸ್ಯೆಗೆ ನಲುಗಿ ಕಂಗಾಲಾದಂತಹ ಜನರ ಪರವಾಗಿ ನಿಂತು, ಒಂದಷ್ಟು ನೊಂದ‌ ಜೀವಗಳಿಗೆ ಸಹಾಯ ಹಸ್ತ ಚಾಚಿತ್ತು. ಈಗ ಕೊರೊನಾ ಎರಡನೇ ಅಲೆಗೆ ಬೆಚ್ಚಿ ಬಿದ್ದಿರುವ ಶ್ರಮಿಕರ ಹಸಿವು ಅರಿತು ತನ್ನ ಕೈಲಾದ ಸೇವೆ ಮಾಡಲು ನಿಂತಿದೆ.


ಪೀಪಲ್‌ ಫಾರ್ ಪೀಪಲ್ ತಂಡದ ಚಕ್ರವರ್ತಿ ಚಂದ್ರಚೂಡ್ , ತಮ್ಮ ತಂಡ ಕಟ್ಟಿಕೊಂಡು ಈಗಾಗಲೇ ರಸ್ತೆಗಿಳಿದಿದ್ದಾರೆ. ಆ ಕುರಿತು ಒಂದು ಬರಹವನ್ನು ಹಂಚಿಕೊಂಡಿದ್ದಾರೆ. ಅದು ಅವರದೇ ಮಾತಲ್ಲಿ ಕೇಳಿ.

ಓವರ್ ಟು ಚಕ್ರವರ್ತಿ….

‘ಸಿದ್ಧಗಂಗಾ ಶ್ರೀಗಳು ಮತ್ತು ದಾದಾ ವಿಷ್ಣು ಅವರ ಆಶೀರ್ವಾದ ಬೇಡುವ ಮೂಲಕ ‘ಪೀಪಲ್ ಫಾರ್ ಪೀಪಲ್’ ತಂಡ ಮತ್ತಷ್ಟು ಚುರುಕುಗೊಂಡಿದೆ.
ಆಸ್ಪತ್ರೆಯಲ್ಲಿ ಬೆಡ್, ಆಮ್ಲಜನಕ, ರೇಷನ್, ಆಹಾರ ಎಂಥಹದೇ ಕ್ಲಿಷ್ಟಕರ ಸಮಸ್ಯೆ ಇರಲಿ, ಕರೆಮಾಡಿ ಪೀ’ಪಲ್ ಫಾರ್ ಪೀಪಲ್’ ತಂಡದ ಭೀಮರು ಬರುತ್ತಾರೆ.

ಸರಕಾರವೇ ಲಾಬಿ ಮಾಡುತ್ತಿದೆಯಾ? ಕೊನೆಗೂ ಕೈ ಚೆಲ್ಲಿ ಜೀವ ಹೋಗುವ ಸ್ಥಿತಿಯಾ? ಆಸ್ಪತ್ರೆಗಳ ಹಣದಾಹವಾ? ಕರೆ ಮಾಡಿ ಸ್ವತಹ ನಾನೇ ಬರುತ್ತೇನೆ.
ಮಾನವರು ಒಂದಾದರೆ ಈ ಮಹಾಮಾರಿಯದು ಯಾವ ಲೆಕ್ಕ ?
ಇಲ್ಲಿಯ ತನಕ ಆಸ್ಪತ್ರೆ ಸೇವೆಯಲ್ಲಿದ್ದವರು ನಾವು ಈಗ ಬಡವರಿದ್ದಲ್ಲಿಗೇ ನಡೆಯುತ್ತಿದ್ದೇವೆ.
ಜಗತ್ತಿನ ಕಟ್ಟ ಕಡೆಯ ಮನುಷ್ಯ ಇರುವ ತನಕ ಯಾವ ಮತ್ತೊಬ್ಬ ಮನುಷ್ಯನೂ ಅಸಹಾಯಕನಲ್ಲ…
ನಮ್ಮ ಜೊತೆ ಕಲಾವಿದೆ ಪ್ರಿಯಾಂಕ ತಿಮ್ಮೇಶ್ ಕೋಣನಕುಂಟೆ, ಚುಂಚನ್ ಘಟ್ಟ, ಗಣಪತಿ ಪುರದ ಬಡ ಜೀವಗಳ ಹಸಿವಿಗೆ 100 ಕೆಜಿ ಅಕ್ಕಿ ಕೊಡುವ ಮೂಲಕ ಸಾಂಕೇತಿಕವಾಗಿ ನಮ್ಮ ಕೈ ಜೋಡಿಸಿದ್ದಾರೆ.


ಈ ಚಿತ್ರಗಳು, ವಿಡಿಯೋ, ಹೆಸರುಗಳನ್ನು ಪ್ರಸ್ತಾಪಿಸುವುದು ಪ್ರಚಾರಕ್ಕಲ್ಲ, ಕೊಡಗು, ಸುನಾಮಿ, ಉತ್ತರ ಕರ್ನಾಟಕದ ನೆರೆ ಕೊವಿಡ್ ಮುಂತಾದ ಪ್ರಕೃತಿ ವಿಕೋಪಗಳಲ್ಲಿ ಅಸಹಾಯಕರ ಜೊತೆ ನಿಂತು ಬಡಿದಾಡಿದವರು ನಾವು. ಜೀವ ಪರ ಸರಪಳಿ ಹಿರಿದಾಗಲಿ. ಅಸಹಾಯಕ ಜೀವಗಳನ್ನು ಪ್ರೇಮದಿಂದ ಸಲಹೋಣ ಎಂಬ ಆಶಯದೊಂದಿಗೆ ಕಳುಹಿಸುತ್ತಿದ್ದೇವೆ.

ಎಲ್ಲರ ಪರವಾಗಿ
ಡಿ. ಜೆ. ಚಕ್ರವರ್ತಿ ಚಂದ್ರಚೂಡ್

Related Posts

error: Content is protected !!