ಸಿನಿ ಮಂದಿ ನೆರವಿಗೆ ರೆಡಿಯಾದ ನಟ ನೀನಾಸಂ ಸತೀಶ್ : ದಿನಸಿ ಕಿಟ್ ವಿತರಣೆಗೆ ಸಂಚಾರಿ ವಿಜಯ್ ಮತ್ತು ಗೆಳೆಯರು ಸಾಥ್

ಕೊರೊನಾ ಸಮಸ್ಯೆಗೆ ಇಡೀ ಜಗತ್ತು ತತ್ತರಿಸಿದ್ದು ಗೊತ್ತೇ ಇದೆ. ಲೆಕ್ಕವಿಲ್ಲದಷ್ಟು ಮಂದಿ ಜೀವ ಬಿಟ್ಟಿದ್ದಾರೆ. ಹಲವರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಕೆಲಸವಿಲ್ಲದೆ ಜನ ಕಂಗಾಲಾಗಿದ್ದಾರೆ. ಇದಕ್ಕೆ ಸಿನಿಮಾರಂಗದ ಮಂದಿಯೂ ಹೊರತಲ್ಲ. ಬದುಕು ನಡೆಸಲು ಕಷ್ಟ ಪಡುತ್ತಿರುವ, ಸಂಕಷ್ಟಕ್ಕೆ ಸಿಲುಕಿರುವ ಸಿನಿ ಮಂದಿಯ ನೋವಿಗೆ ಈಗಾಗಲೇ ಕನ್ನಡದ ಅನೇಕ ಸ್ಟಾರ್ ನಟರು ಸ್ಪಂದಿಸಿದ್ದಾರೆ. ಈಗ ನಟ ನೀನಾಸಂ ಸತೀಶ್ ಮತ್ತು ಸಂಚಾರಿ ವಿಜಯ್ ಮತ್ತು ಗೆಳೆಯರು ಕೂಡ ಸಿನಿಮಾ ಕಾರ್ಮಿಕರ ನೋವಿಗೆ ಸ್ಪಂದಿಸಲು ಮುಂದಾಗಿದ್ದಾರೆ.

ನಟ ಸಂಚಾರಿ ವಿಜಯ್, ಪತ್ರಕರ್ತ ಶರಣ್ ಹುಲ್ಲೂರು, ನಟಿಯರಾದ ಶರ್ಮಿಳಾ‌ ಮಾಂಡ್ರೆ ಹಾಗೂ ಕಾರುಣ್ಯ ರಾಮ್ ಅವರನ್ನೊಳಗೊಂಡ ಒಂದು ತಂಡದ ಮೂಲಕ ಅಗತ್ಯ ಇರುವ ಸಿನಿಮಾ ಕಾರ್ಮಿಕರಿಗೆ ಫುಡ್ ಕಿಟ್ ನೀಡಲು ಸನೀನಾಸಂ ಸತೀಶ್ ಸಿದ್ಧತೆ ನಡೆಸಿದ್ದಾರೆ.

ಇದೆಲ್ಲ ಆ ತಂಡದ ತಯಾರಿ.‌ ನಟ ಸತೀಸ್ ನೀನಾಸಂ ಕಚೇರಿಯಲ್ಲಿ ಎಲ್ಲಾ ಸಿದ್ದತೆ ನಡೆಯುತ್ತಿದೆ. ಅಕ್ಕಿ, ಬೆಳೆ, ಸಕ್ಕರೆ, ತರಕಾರಿ ಸೇರಿದಂತೆ ಅಗತ್ಯವಾಗಿ ಬೇಕಾದ ಆಹಾರ ಪದಾರ್ಥಗಳನ್ನು ತಂಡ ರೆಡಿ ಮಾಡುತ್ತಿದೆ. ಸದ್ಯಕ್ಕೆ ಇದರ ವಿತರಣೆಯೆಲ್ಲ ಹೇಗೆ, ಎಂತೂ ಗೊತ್ತಿಲ್ಲ. ಆದರೆ, ಇದೆಲ್ಲ ಹೇಗೆ ಶುರುವಾಯ್ತು‌..? ಆ ಬಗ್ಗೆ ನಟ ಸತೀಸ್ ನೀನಾಸಂ ಹೇಳುವುದು ಹೀಗೆ‌‌…

ಸತೀಶ್ ಮಾತು.
‘ಈಗಾಗಲೇ ಸಿನಿಮಾ ರಂಗದಲ್ಲಿ‌ ನಟರಾದ ಸುದೀಪ್, ಉಪೇಂದ್ರ, ರಾಕಿಂಗ್ ಸ್ಟಾರ್ ಯಶ್‌, ನಟಿಯರಾದ ರಾಗಿಣಿ, ಸಂಜನಾ ಸೇರಿದಂತೆ ಹಲವರು ಸಿನಿಮಾ ಕಾರ್ಮಿಕರ ನೆರವಿಗೆ ನಿಂತಿದ್ದಾರೆ. ಈ ಪೈಕಿ ಯಶ್ ಆಂಗ್ರಪಂಕ್ತಿಯಲ್ಲಿ ನಿಂತಿದ್ದಾರೆ.

ಹಾಗೆಯೇ ನಟ ಸಂಚಾರಿ ವಿಜಯ್ ಕೂಡ ಮೊದಲಿನಿಂದಲೂ ತಮ್ಮ ಕೈಲಾದ ಸಹಾಯ‌ ಮಾಡುತ್ತಾ ಬರುತ್ತಿದ್ದಾರೆ.

ಇವರ ಜೊತೆ ನಾನು ಸಮಾನ‌ ಮನಸ್ಕ ತಂಡದೊಂದಿಗೆ ಫುಡ್ ಕಿಟ್ ವಿತರಣೆಗೆ ರೆಡಿಯಾಗುತ್ತಿದ್ದೇನೆ’ ಎಂದಿದ್ದಾರೆ.

Related Posts

error: Content is protected !!