ನಾದಬ್ರಹ್ಮ ನಿಗೆ ಹುಟ್ಟು‌ ಹಬ್ಬದ‌ ಸಂಭ್ರಮ‌ ; ಬರ್ತ್ ಡೇ ಗೆ ಅವರೇ ಕೊಟ್ಟ ಶಾರದಾ ಪುಸ್ತಕಾಲಯ ಗಿಫ್ಟ್!

ನಾದ ಬ್ರಹ್ಮ ಡಾ.‌ಹಂಸಲೇಖ ಅವರಿಗೆ ಇಂದು ಹುಟ್ಟು‌ಹಬ್ಬ. ಹಾಗಂತ ಅವರು ಎಂದಿಗೂ ಗ್ರಾಂಡ್ ಆಗಿ ಹುಟ್ಟು ಹಬ್ಬ ಆಚರಿಸಿಕೊಂಡವರಲ್ಲ. ಬಲವಂತವಾಗಿ ಅಭಿಮಾನಿಗಳು ಹುಟ್ಟು ಹಬ್ಬ ಆಚರಿಸಬೇಕು ಅಂದಾಗಲೂ ಅದರಲ್ಲೊಂದು ವಿಶೇಷತೆ ಇರಲಿ ಅಂತ‌ ಬಯಸುವ ವ್ಯಕ್ತಿತ್ವ ಹಂಸಲೇಖ ಅವರದ್ದು. ಅದರಲ್ಲೂ ಈಗ ಕೊರೊನಾ ಸಂಕಷ್ಟದ ಕಾಲ. ಇಂತಹ ಸಂದರ್ಭದಲ್ಲಿ ಹಂಸಲೇಖ ಅವರು ಗ್ರಾಂಡ್ ಆಗಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಾರಾ?

ಇಲ್ಲ, ಗ್ರಾಂಡ ಸೆಲೆಬ್ರೇಷನ್ ಬದಲಿಗೆ ಈ ವರ್ಷದ ಹುಟ್ಟು ಹಬ್ಬಕ್ಕೆ ಅವರು ಅಭಿಮಾನಿಗಳಿಗೆ, ಕನ್ನಡ ನಾಡಿನ ಸಾಹಿತ್ಯ ಅಭಿಮಾನಿಗಳಿಗೆ ವಿಶೇಷವಾದ ಒಂದು ಕೊಡುಗೆ ನೀಡಿದ್ದಾರೆ. ‌ಅದುವೇ ಶಾರದಾ ಪುಸ್ತಕಾಲಯ. ಹೌದು, ನಾಡಿನ ಪುಸ್ತಕ ಮಳಿಗೆಗಳ ಸಾಲಿಗೆ ಈಗ ಹಂಸಲೇಖ ಅವರ ಶಾರದಾ ಪುಸ್ತಕಾಲಯವೂ ಒಂದು. ಸಂಗೀತ, ಸಾಹಿತ್ಯ ಅಂತಲೇ ಇಲ್ಲಿ ತನಕ ಹಾಸಿ, ಹೊದ್ದು ಉಸಿರಾಡುತ್ತಾ ಬಂದ ಹಂಸಲೇಖ ಅವರು ಈಗ ಪುಸ್ತಕಾಲಯ ಶುರು ಮಾಡಿದ್ದೆ ಒಂದು ವಿಶೇಷ.
ಬುಧವಾರ ಅವರ ಹುಟ್ಟು ಹಬ್ಬದ ದಿನವೇ ಬೆಂಗಳೂರಿನ. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಅಬಕಾರಿ ಸಚಿವ ಗೋಪಾಲಯ್ಯ ದೀಪಾ ಬೆಳಗಿ, ಟೇಪ್ ಕತ್ತರಿಸುವ ಮೂಲಕ ಶಾರದಾ ಪುಸ್ತಕಾಲಯ ಉದ್ಘಾಟಿಸಿದರು.

ಹಂಸಲೇಖ ಅವರು ಎಲ್ಲಾ ಬಿಟ್ಟು‌ ಈಗ ಯಾಕೆ ಪುಸ್ತಕಾಲಯ ಮಾಡಿದರು? ಅದರಲ್ಲೇನು ವಿಶೇಷತೆ ಇಲ್ಲ.‌ ಸಂಗೀತ, ಸಾಹಿತ್ಯ ಕ್ಷೇತ್ರದಲ್ಲೇ ಅವರು ದೈತ್ಯ‌ ಪ್ರತಿಭೆ ಎನಿಸಿಕೊಂಡವರು. ಹಾಗಾಗಿ ಪುಸ್ತಕಾಲಯ ಅಂತ ಶುರು‌ ಮಾಡಿರುವುದಕ್ಕೆ ಆಂತಹದೇನು ವಿಶೇಷತೆ ಇಲ್ಲ.

ಅದರೆ, ಪುಸ್ತಕಾಲಯದ ನಂಟು‌ ಈಗೇಕೆ? ಅಲ್ಲಿ ಏನೆಲ್ಲ ಸಿಗುತ್ತೆ? ಆ ಬಗ್ಗೆ ಬುಧವಾರ( ಜೂನ್ 23) ಸಂಜೆ ಫೇಸ್ ಬುಕ್ ಲೈವ್ ನಲ್ಲಿ ಎಲ್ಲವನ್ನು ಹೇಳುತ್ತಾರಂತೆ.‌ ಸಂಜೆ 5 ಗಂಟೆಗೆ, ಫೇಸ್ ಬುಕ್‌ಲೈವ್ ನಲ್ಲಿ‌ ಹಂಸಲೇಖ ಬರಲಿದ್ದಾರೆ. ಅಲ್ಲೊಂದಷ್ಟು ಮಾತುಕತೆ ಅ
ನಡೆಯಲಿದೆ.

Related Posts

error: Content is protected !!