ದಯವಿಟ್ಟು ಬೇಸರ ಪಟ್ಟುಕೊಳ್ಳಬೇಡಿ- ಅಭಿಮಾನಿ ದೇವರಿಗೆ ಸೆಂಚುರಿ ಸ್ಟಾರ್‌ ಮನವಿ ಮಾಡಿಕೊಂಡಿದ್ದು ಯಾಕೆ ?

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ತಮ್ಮ ಅಭಿಮಾನಿ ದೇವರುಗಳಿಗೆ ವಿಶೇಷ ಸಂದೇಶ ರವಾನಿಸಿದ್ದಾರೆ. ಸಂಕಷ್ಟದ ಸಮಯದಲ್ಲಿ ಸಂಭ್ರಮಾಚರಣೆ ಬೇಡವೆಂದು ನಿರ್ಧರಿಸಿರುವ ಶಿವಣ್ಣ ತಮ್ಮ ಹುಟ್ಟುಹಬ್ಬಕ್ಕೆ ಬ್ರೇಕ್ ಹಾಕಿದ್ದಾರೆ. ತಮ್ಮ ಬರ್ತ್ಡೇ ಸೆಲಬ್ರೇಷನ್‌ಗಿಂತ ನಿಮ್ಮೆಲ್ಲರ ಆರೋಗ್ಯ ಮುಖ್ಯವೆಂದು ತೀರ್ಮಾನಿಸಿರುವ ಶಿವಣ್ಣ ವಿಡಿಯೋ ಮೂಲಕ ದೊಡ್ಮನೆ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

“ಹುಟ್ಟುಹಬ್ಬಕ್ಕಿಂತ ನಿಮ್ಮೆಲ್ಲರ ಆರೋಗ್ಯ ತುಂಬಾ ಮುಖ್ಯ. ದೇವರ ದಯೆಯಿಂದ ಕೊರೊನಾ ಕಮ್ಮಿ ಆಗಿದೆ. ಹಾಗಂತ ಎಚ್ಚರಿಕೆಯಿಂದ ಇರುವ ಸಮಯ ಮುಗಿದಿಲ್ಲ. ಮುಂದೆ ಇನ್ನೂ ಎಚ್ಚರಿಕೆಯಿಂದ ಇರಬೇಕು. ಜುಲೈ 12 ನನ್ನ ಹುಟ್ಟಿದ ದಿನ ಎಲ್ಲರಿಗೂ ಗೊತ್ತಿದೆ. ಕೆಲವು ಕಾರಣಗಳಿಂದ ನಾನು ಬೆಂಗಳೂರಿನಲ್ಲಿ ಇರಲ್ಲ. ದಯವಿಟ್ಟು ಬೇಸರ ಮಾಡಿಕೊಳ್ಳಬೇಡಿ. ನಿಮಗೆ ಎಷ್ಟು ಬೇಸರ ಆಗುತ್ತಿದೆಯೋ ನನಗೂ ಅಷ್ಟೇ ಆಗುತ್ತಿದೆ. ನಿಮ್ಮ ವಿಶ್‌ಗಳನ್ನ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿ. ನಿಮ್ಮ ಪ್ರೀತಿ, ವಿಶ್ವಾಸ ಪ್ರೋತ್ಸಾಹ ಯಾವಾಗಲೂ ಇರಬೇಕು. ದಯವಿಟ್ಟು ಕೊರೊನಾ ನಿಯಮ ಫಾಲೋ ಮಾಡಿ ಮಾಸ್ಕ್ ಹಾಕಿಕೊಳ್ಳಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಲ್ಲರೂ ವ್ಯಾಕ್ಸಿನೇಷನ್ ಹಾಕಿಸಿಕೊಳ್ಳಿ ದಯವಿಟ್ಟು ಯಾರು ಬೇಜಾರ್ ಮಾಡಿಕೊಳ್ಳಬೇಡಿ. ಆದಷ್ಟು ಬೇಗ ಕೊರೊನಾ ದೂರವಾಗಿ ಎಲ್ಲರೂ ಒಟ್ಟಾಗಿ ಸೇರುವ ದಿನ ಬರಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳೋಣ. ಮನೆಯಲ್ಲೇ ಇರಿ ಎಲ್ಲರೂ ಸೇಫ್ ಆಗಿರಿ ಎಲ್ಲರನ್ನೂ ಸೇಫಾಗಿಡಿ ಹೀಗಂತ ಶಿವಣ್ಣ ಅಭಿಮಾನಿ ದೇವರುಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಆರಾಧ್ಯದೈವನ ಮನವಿಯಂತೆ ನಡೆದುಕೊಳ್ಳೋಕೆ ದೊಡ್ಮನೆ ಭಕ್ತರು ನಿರ್ಧರಿಸಿದ್ದಾರೆ. ಕಾಮನ್ ಡಿಪಿ ಜೊತೆಗೆ ಶಿವಣ್ಣನ ಅಪ್‌ಕಮ್ಮಿಂಗ್ ಸಿನಿಮಾಗಳ ಪೋಸ್ಟರ್ ಹಾಗೂ ಟೀಸರ್‌ಗಳನ್ನ ಸೋಷಿಯಲ್ ಲೋಕದಲ್ಲಿ ಹಂಚಿಕೊಳ್ಳುವ ಮೂಲಕ ಬ್ರ್ಯಾಂಡ್ ಮಾಡಲಿಕ್ಕೆ ಅಭಿಮಾನಿಗಳು ಸಜ್ಜಾಗಿದ್ದಾರೆ. ಅಭಿನಯ ಚಕ್ರವರ್ತಿಯ ಹುಟ್ಟುಹಬ್ಬದಂದು ಪೋಸ್ಟರ್‌ ಹಾಗೂ ಟೀಸರ್ ಜೊತೆ ಹೊಸ ಸಿನಿಮಾಗಳು ಅನೌನ್ಸ್ ಆಗುವ ನಿರೀಕ್ಷೆಯಿದೆ. ಭಜರಂಗಿ 2 ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು123 ನೇ ಸಿನಿಮಾದಲ್ಲಿ ಶಿವಣ್ಣ ಬ್ಯುಸಿಯಾಗಿದ್ದಾರೆ. ಅಂದ್ಹಾಗೇ ಈ ಚಿತ್ರಕ್ಕೆ ವಿಜಯ್ ಮಿಲ್ಟನ್ ನಿರ್ದೇಶನವಿದ್ದು,ಶಿವಪ್ಪ ಅಂತ ಟೈಟಲ್ ಫಿಕ್ಸ್ ಮಾಡಲಾಗಿತ್ತು, ಆದರೆ, ಶಿವಪ್ಪ ಟೈಟಲ್ ಮ್ಯಾಚ್ ಆಗ್ತಿಲ್ಲ ಎನ್ನುವ ಕಾರಣಕ್ಕೆ ಚೇಂಜ್ ಮಾಡ್ತಿದ್ದಾರೆ. ಬರ್ತ್ಡೇ ದಿನ ಹೊಸ ಟೈಟಲ್ ಅನಾವರಣಗೊಳ್ಳಲಿದೆ

Related Posts

error: Content is protected !!