ಚಿತ್ರನಟಿ ಜಯಂತಿ ನಿಧನಕ್ಕೆ ಸುನೀಲ್ ಪುರಾಣಿಕ್ ಕಂಬನಿ

ಅಭಿನಯ ಶಾರದೆ, ಖ್ಯಾತ ಅಭಿನೇತ್ರಿ ಜಯಂತಿ ಅವರ ನಿಧನಕ್ಕೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಕಂಬನಿ ಮಿಡಿದಿದ್ದಾರೆ. ಭಾರತೀಯ ಚಿತ್ರರಂಗದ ಮೇರು ನಟಿ ಜಯಂತಿ ಅವರು ಈ ಶತಮಾನ ಕಂಡ ಅತ್ಯಂತ ಜನಪ್ರಿಯ ಮತ್ತು ಮೋಹಕ ನಟಿ ಎಂದು ಹೆಸರು ಪಡೆದವರು.

ಮೂಲತಃ ಬಳ್ಳಾರಿಯವರಾದ ಅವರು 1963 ರಲ್ಲಿ ಜೇನುಗೂಡು ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುವ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದರು.ಕಪ್ಪು ಬಿಳಿಪು ಚಿತ್ರದ ಕಾಲದಿಂದ ಇತ್ತೀಚಿನವರೆಗೂ ಅವರ ಚಿತ್ರರಂಗದ ಸಾಧನೆ ಅಪಾರ.ಡಾ.ರಾಜಕುಮಾರ್ ಅವರೊಂದಿಗೆ 30ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕಿಯಾಗಿ ಅಭಿನಯಿಸಿದ ಹೆಗ್ಗಳಿಕೆ ಜಯಂತಿ ಅವರದು.ಎಡಕಲ್ಲು ಗುಡ್ಡದ ಮೇಲೆ ಚಿತ್ರದ ಅವರ ಅಭಿನಯ ಸಾರ್ವಕಾಲಿಕ ಶ್ರೇಷ್ಠ ಅಭಿನಯ ಎಂದು ಪರಿಗಣಿಸಲ್ಪಟ್ಟಿದ್ದು,

ಜಯಂತಿ ಅವರ ನಿಧನದಿಂದ ಕನ್ನಡ ಚಿತ್ರರಂಗ ಒಬ್ಬ ಅದ್ಭುತ ಕಲಾವಿದೆಯನ್ನು ಕಳೆದು ಕೊಂಡಂತಾಗಿದೆ.ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗು ಜಯಂತಿಯವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಅಪಾರ ಅಭಿಮಾನಿಗಳು, ಕುಟುಂಬದವರಿಗೆ ಭಗವಂತ ಕರುಣಿಸಲಿ ಎಂದು ಪುರಾಣಿಕ್ ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

Related Posts

error: Content is protected !!