ತಾಯ್ತ ಕಟ್ತಾರಂತೆ ಲಯಕೋಕಿಲ ! ಅವರೀಗ ಡೈರಕ್ಟರ್!!‌

ತಮ್ಮ ನಟನೆಯಿಂದ ಮನೆಮಾತಾಗಿರುವ ಲಯಕೋಕಿಲ, ಸಂಗೀತ ನಿರ್ದೇಶಕರಾಗಿ ಸರಾದವರು. ಅಷ್ಟೇ ಅಲ್ಲ, ನಟರಾಗಿಯೂ ಗೊತ್ತು. ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ ಲಯಕೋಕಿಲ. ಹೌದು, ಲಯಕೋಕಿಲ ಈಗ ಡೈರೆಕ್ಟರ್.‌
ತಮ್ಮ ಮೊದಲ‌ ಚಿತ್ರಕ್ಕೆ “ತಾಯ್ತ” ಎಂದು ಹೆಸರಿಟ್ಟಿದ್ದಾರೆ.
ಈ ಚಿತ್ರದ ಮುಹೂರ್ತ ಸಮಾರಂಭ ರಾಮನಗರದ ದರ್ಗಾವೊಂದರಲ್ಲಿ ಸರಳವಾಗಿ ಆರಂಭವಾಗಿದೆ.
ನಿರ್ಮಾಪಕರ ತಾಯಿ ಮೊದಲ ದೃಶ್ಯಕ್ಕೆ ಕ್ಯಾಮೆರಾ ಚಾಲನೆ ಮಾಡಿ ಶುಭಹಾರೈಸಿದ್ದಾರೆ. ಲಯಕೋಕಿಲ ಅವರೆ ಕ್ಲಾಪ್ ಮಾಡುವ ಮೂಲಕ ತಮ್ಮ ನಿರ್ದೇಶನಕ್ಕೆ ಚಾಲನೆ ನೀಡಿದ್ದಾರೆ.
ಮೊದಲ ದಿನದ ಚಿತ್ರೀಕರಣವನ್ನು ರಾಮನಗರದ ಸುತ್ತಮುತ್ತ ನಡೆಸಲಾಗಿದೆ.

ಆಗಸ್ಟ್ 5 ರಿಂದ ಚಿಕ್ಕಮಗಳೂರು, ಹೊರನಾಡು ಮುಂತಾದ ಕಡೆ ನಿರಂತರ ಚಿತ್ರೀಕರಣ ನಡೆಯಲಿದೆ. ಈ ಚಿತ್ರವನ್ನು ಡಾ.ಶಾಹಿದ್ ಅವರು ನಿರ್ಮಿಸುತ್ತಿದ್ದಾರೆ. ಕಥೆ ಕೂಡ ಶಾಹಿದ್ ಅವರೇ ಬರೆದಿದ್ದಾರೆ.
ಲಯಕೋಕಿಲ ಅವರ ಸಂಗೀತ ಇರುವ ಈ ಚಿತ್ರದ ಹಾಡುಗಳನ್ನು ರಾಮನಾರಾಯಣ್ ಬರೆದಿದ್ದಾರೆ.
ಆನಂದ್ ಛಾಯಾಗ್ರಹಣವಿದೆ. ಮೋಹನ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಇನ್ನು, ರಿಹಾನ್ ಎಂಬ‌ ಹೊಸ ಪ್ರತಿಭೆ ಈ ಚಿತ್ರದ ಮೂಲಕ ಹೀರೋ ಆಗಿ ಎಂಟ್ರಿಯಾಗುತ್ತಿದ್ದಾರೆ.

ರಿಹಾನ್ ಅವರಿಗೆ ಹರ್ಷಿಕಾ ಪೂಣಚ್ಛ ನಾಯಕಿಯಾಗಿದ್ದಾರೆ.
ನಾಯಕನ ತಾಯಿ ಪಾತ್ರದಲ್ಲಿ ಸುಮಾಶಾಸ್ತ್ರಿ ಕಾಣಿಸಿಕೊಳ್ಳುತ್ತಿದ್ದಾರೆ.
ಲಯಕೋಕಿಲ, ಡಾ. ಶಾಹಿದ್, ಶೋಭ್ ರಾಜ್, ಕಲೀಲ್, ಮಿಮಿಕ್ರಿ ಮಂಜು, ಕಾರ್ತಿಕ್ ಶರ್ಮ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. “ತಾಯ್ತ” ಮಾಮೂಲಿ ಕಥೆಯಲ್ಲ.. ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ ಎಂಬುದು ಲಯಕೋಕಿಲ ಅವರ ಮಾತು.

Related Posts

error: Content is protected !!