ಅಂತೂ ಫಸ್ಟ್ ಶೆಡ್ಯೂಲ್ ಮುಗಿಸಿದ ಭಗವಾನ್ ಶ್ರೀ ಕೃಷ್ಣ ಪರಮಾತ್ಮ!

ಇತ್ತೀಚೆಗೆ ಶ್ರೀ ಕೃಷ್ಣ ಜೋರು ಸದ್ದು ಮಾಡಿದ್ದು ಗೊತ್ತೇ ಇದೆ. ಈಗ ಆ ಕೃಷ್ಣ ಪರಮಾತ್ಮಮತ್ತೆ ಸುದ್ದಿಯಲ್ಲಿದ್ದಾನೆ.
ಹೌದು, ಕೃಷ್ಣ ಜನ್ಮಾಷ್ಟಮಿ ಬೆನ್ನಲ್ಲೇ “ಭಗವಾನ್ ಶ್ರೀ ಕೃಷ್ಣ ಪರಮಾತ್ಮ” ಕೂಡ ಸದ್ದು ಮಾಡುತ್ತಿದ್ದಾನೆ. ಈ ಸಿನಿಮಾ ಈಗ ಮೊದಲ ಹಂತದ
ಚಿತ್ರೀಕರಣ ಸದ್ದಿಲ್ಲದೆ ಮುಗಿಸಿದೆ ಅನ್ನೋದೇ ಈ ಹೊತ್ತಿನ ಸುದ್ದಿ.

ಬಹುತೇಕ ಈ ಚಿತ್ರ ಬೆಂಗಳೂರಿನಲ್ಲೇ ಚಿತ್ರೀಕರಣವಾಗಿದೆ.
ಶೀರ್ಷಿಕೆ ಕೇಳಿದ ತಕ್ಷಣ ಇದೊಂದು ಪೌರಾಣಿಕ ಸಿನಿಮಾ ಅಂದುಕೊಳ್ಳುವುದು‌ ಸಹಜ. ಆದರೆ, ಇದೊಂದು ಪಕ್ಕಾ ಮಾಸ್ ಸಿನಿಮಾ ಅನ್ನುತ್ತಾರೆ ನಿರ್ದೇಶಕ ಅನೂಪ್ ಆಂಟೋನಿ.

ಈ ಶೀರ್ಷಿಕೆ ಯಾಕೆ ಇಡಲಾಗಿದೆ ಎಂಬುದಕ್ಕೆ ಸಿನಿಮಾ ನೋಡಿದ ಬಳಿಕ ಉತ್ತರ ಸಿಗಲಿದೆ ಎಂಬುದು ನಿರ್ದೇಶಕರ ಮಾತು.
ಭರತ್ ಸಿನಿ ಕ್ರಿಯೇಷನ್ಸ್ ಬ್ತಾನರ್ ನಲ್ಲಿ ಭರತ್ ವಿಷ್ಣುಕಾಂತ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ನಿರ್ಸೆಡಶಕ ಅನೂಪ್ ಆಂಟೋನಿ ಈ ಹಿಂದೆ ‘ಕಥಾ ವಿಚಿತ್ರ’ ಹಾಗೂ ‘ಮೆಹಬೂಬ’ ಚಿತ್ರಗಳನ್ನು ನಿರ್ದೇಶಿಸಿದ್ದರು. ಅವರಿಗೆ ಇದು ಮೂರನೇ ಚಿತ್ರ. ಕಥೆ, ಚಿತ್ರಕಥೆ ಕೂಡ ನಿರ್ದೇಶಕರದೆ.
ಬಹದ್ದೂರ್ ಚೇತನ್ ಮಾತುಗಳನ್ನು ಪೋಣಿಸಿದ್ದಾರೆ.

ಐದು ಹಾಡುಗಳಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ. ಅರುಣ್ ಸುರೇಶ್ ಛಾಯಾಗ್ರಹಣ ಹಾಗೂ ಮನುಗೌಡ ಅವರ ಸಂಕಲನ ಚಿತ್ರಕ್ಕಿದೆ.

ಧ್ರುವನ್ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಸೋನಾಲ್ ಮಾಂಟೆರೊ ಈ ಚಿತ್ರದ ನಾಯಕಿ. ಯಶ್ ಶೆಟ್ಟಿ, ಯಶಸ್ ಸೂರ್ಯ, ಕಾಮಿಡಿ ಕಿಲಾಡಿಗಳು ಸೂರಜ್, ಶೋಭ್ ರಾಜ್, ಬಲರಾಜವಾಡಿ, ಸ್ವಾತಿ ಇತರರು ಇದ್ದಾರೆ.

Related Posts

error: Content is protected !!