ಅಪ್ಪುಗೆ ರಾಜರತ್ನ – ಚರ್ಚಿಸಿ ನಿರ್ಧಾರ ಅಂದ್ರು ಸಿಎಂ ಬಸವರಾಜ ಬೊಮ್ಮಾಯಿ

ಕನ್ನಡದ ಪ್ರತಿಭಾವಂತ ನಟ ಪುನೀತ್‌ ರಾಜಕುಮಾರ್‌ ಈಗ ನೆನಪು ಮಾತ್ರ. ಆದರೆ ಅವರಿಗೆ ಮರಣೋತ್ತರವಾಗಿ ʼರಾಜರತ್ನʼ ಪ್ರಶಸ್ತಿ ನೀಡಬೇಕೆನ್ನುವ ಕೂಗು ಅವರ ಅಭಿಮಾನಿಗಳಿಂದ ಕೇಳಿ ಬರುತ್ತಿದೆ. ಕಳೆದ ಎರಡು ದಿನಗಳಿಂದ ಸೋಷಲ್‌ ಮೀಡಿಯಾದಲ್ಲಿ ಅಪ್ಪು ಅಭಿಮಾನಿಗಳು ಹಾಗೊಂದು ಒತ್ತಾಯದ ಕೂಗು ಆರಂಭಿಸಿದ್ದಾರೆ. ಈ ಮಧ್ಯೆ ಸೋಮವಾರ ಕನ್ನಡ ರಾಜ್ಯೋತ್ಸವದಲ್ಲಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಈ ವಿಚಾರಕ್ಕೆ ಪ್ರತಿ ಕ್ರಿಯೆ ನೀಡಿದ್ದಾರೆ.

ರಾಜ್ಯೋತ್ಸವ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ, ಅಪ್ಪು ಅವರಿಗೆ ರಾಜರತ್ನ ಪ್ರಶಸ್ತಿ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಪ್ರಮುಖರ ಜತೆಗೆ ಈ ಸಂಬಂಧ ಚರ್ಚೆ ನಡೆಸಿ, ಅಭಿಪ್ರಾಯ ಪಡೆಯಬೇಕಿದೆ. ಸರ್ಕಾರಕ್ಕೂ ಈ ಬಗ್ಗೆ ಮನಸಿದೆ. ಮುಂದಿನ ದಿನಗಳಲ್ಲಿ ಒಂದು ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದರು. ನಟ ಪುನೀತ್‌ ರಾಜಕುಮಾರ್‌ ಅವರು ಬಾಲ್ಯದಲ್ಲಿಯೇ ರಾಷ್ಟ್ರ ಪ್ರಶಸ್ತಿಗೆ ಪಾತ್ರರಾದವರು. ಹಾಗೆಯೇ ಬೇಕಾದಷ್ಟು ರಾಜ್ಯ ಪ್ರಶಸ್ತಿಗಳಿಗೂ ಪಾತ್ರರಾದವರು. ಉಳಿದಂತೆ ಮಾನ-ಸನ್ಮಾನಗಳಿಗೆ ಲೆಕ್ಕವೇ ಇಲ್ಲ. ಆದರೂ, ಅವರಿಗೆ ಮರಣೋತ್ತರವಾಗಿ ರಾಜರತ್ನ ನೀಡಬೇಕೆನ್ನುವುದು ಅಭಿಮಾನಿಗಳ ಕೂಗು. ಸರ್ಕಾರ ಇದಕ್ಕೆ ಸ್ಪಂದಿಸುತ್ತಾ ಎನ್ನುವುದು ಕುತೂಹಲಕರ.

  • ಎಂಟರ್‌ ಟೈನ್‌ ಮೆಂಟ್‌ ಬ್ಯೂರೋ ಸಿನಿಲಹರಿ

Related Posts

error: Content is protected !!