ಒಗ್ಗಟ್ಟಿನ ಮಂತ್ರ ಜಪಿಸಿದ ಗಂಧದಗುಡಿಯ ಅಭಿಮಾನಿ ಬಳಗ…ಫ್ಯಾನ್ಸ್ ವಾರ್ ಗೆ ಫುಲ್ ಸ್ಟಾಪ್ ಇಟ್ಟ ಫ್ಯಾನ್ಸ್…!

ಗಂಧದಗುಡಿ ಅಂಗಳದಲ್ಲೀಗ ಹೊಸ ಬೆಳವಣಿಗೆಯೊಂದು ನಡೆಯುತ್ತಿದೆ. ಈ ಬೆಳವಣಿಗೆ ಇಡೀ ಕನ್ನಡ ಸಿನಿಪ್ರಿಯರಿಗೆ ಖಂಡಿತ ಖುಷಿ ಕೊಡುತ್ತೆ. ಅಂತಹ ಬೆಳವಣಿಗೆ ಏನು ಅಂತಾ ಬಾಯಮೇಲೆ ಬೆರಳಿಡಬೇಡಿ. ಇಡೀ ಕನ್ನಡ ಅಭಿಮಾನಿದೇವರುಗಳು ಒಗ್ಗಟ್ಟಿನ ಮಂತ್ರ ಜಪಿಸ್ತಿದೆ

ಹೌದು.. ಕನ್ನಡದ ರಾಜರತ್ನ..ಯುವರತ್ನ..ಪವರ್ ಸ್ಟಾರ್ ಪುನೀತ್ ಹಠಾತ್ ಸಾವು ಎಲ್ಲರನ್ನು ದಿಗ್ರ್ಬಮೆಗೆ ತಳ್ಳಿದೆ. ಇರೋ ನಾಲ್ಕೈದು ದಿನ ಎಲ್ಲರು ಖುಷಿಯಿಂದ ಒಗ್ಗಟ್ಟಿನಿಂದ ಇರೋಣ. ಈ ಸ್ಟಾರ್ ವಾರ್, ಫ್ಯಾನ್ ವಾರ್ ಎಲ್ಲ ಪಕ್ಕಕ್ಕಿಟ್ಟು. ಒಗ್ಗಟ್ಟಿನಿಂದ ಜೀವಿಸೋಣ ಅನ್ನೋ ಸಂದೇಶವನ್ನು ಅಭಿಮಾನಿಗಳು ಸಾರಿ ಸಾರಿ ಹೇಳ್ತಿದ್ದಾರೆ.

ನಮ್ಮ ಕನ್ನಡ ಇಂಡಸ್ಟ್ರೀಯ ಎಲ್ಲಾ ಸ್ಟಾರ್ಸ್ ಅಭಿಮಾನಿಗಳು ಒಂದಾಗಿದ್ದಾರೆ. ಸದಾ ಸ್ಟಾರ್ಸ್ ವಾರ್ ಫ್ಯಾನ್ ವಾರ್ ಅಂತಾ ತೋಳೇರಿಸಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಕಿತ್ತಾಟ ನಡೆಸ್ತಿದ್ದ ಅಭಿಮಾನಿ ದೇವರುಗಳು ಈಗ ನಾವೆಲ್ಲ ಒಂದೇ ಅನ್ನೋ ಮಂತ್ರ ಜಪಿಸ್ತಿದ್ದಾರೆ.

ಕನ್ನಡದ ಹಿರಿಯ ನಟ..ನವರಸ ನಾಯಕ ಜಗ್ಗೇಶ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಎಲ್ಲರ ಸ್ಟಾರ್ಸ್‌ ಒಂದಾಗಿರುವ ಫೋಟೋವನ್ನು ಹಂಚಿಕೊಂಡು, ಈ ಭಾವ ನನ್ನ ಕಣ್ಣಲ್ಲಿ ಆನಂದಭಾಷ್ಪ ತರಿಸಿತು!
ಮಾನ್ಯರೆ ನಾವೆಲ್ಲಾ ಶಾರದೆಯ ಮಕ್ಕಳು ಚಿತ್ರರಂಗ ನಮ್ಮ ಮನೆ!
ಕನ್ನಡಿಗರು ನಮ್ಮ ಬಂಧುಗಳು!
ನಮ್ಮ ಈಒಗ್ಗಟ್ಟು ರಾಜಣ್ಣನ ಕಾಲದಲ್ಲಿ ಇತ್ತು!ಮತ್ತೆ ಬರೋದಿಲ್ಲವೆ ಎಂಬ ಕೊರಗು ಕಾಡುತ್ತಿತ್ತು!ಈಗ ಇದನ್ನ ನೋಡಿ ಹಾಲುಜೇನು ಸವಿದಂತೆ ಆಯಿತು!ಈಒಗ್ಗಟ್ಟಿನ ಮಂತ್ರ ಯಾವ ಅಡೆತಡೆ ಇಲ್ಲದೆ ಮುಂದುವರಿಯಲಿ
ಅಂತ ಟ್ವೀಟ್ ಮಾಡಿದ್ದಾರೆ.

ಅಭಿಮಾನಿಗಳ ಈ ನಡೆಗೆ ಜಗ್ಗೇಶ್ ಸಾಥ್ ಕೊಟ್ಟಿದ್ದಾರೆ. ಅಪ್ಪು, ಕಿಚ್ಚ, ದಚ್ಚು ಗಣಿ, ಶಿವಣ್ಣ ಹೀಗೆ ಕನ್ನಡದ ಎಲ್ಲಾ ಸ್ಟಾರ್ಸ್‌ ಫ್ಯಾನ್ಸ್, ಫ್ಯಾನ್ಸ್ ವಾರ್ ಬೇಡ್ವೇ ಬೇಡ ಅನ್ನೋ ನಿರ್ಧಾರಕ್ಕೆ ಬಂದಿದ್ದಾರೆ. ಜೇನಿನಗೂಡ ನಾವೆಲ್ಲ ಹೀಗೆ ಇರೋಣ ಅಂತ ಮನವಿ ಮಾಡಿಕೊಳ್ಳುತ್ತಿದ್ದಾರೆ.

Related Posts

error: Content is protected !!