ಗ್ಯಾಂಗ್‌ ಸ್ಟರ್‌ ಪಾತ್ರದಲ್ಲಿ ಶಾನ್ವಿ ಶ್ರೀವಾಸ್ತವ್-‌ ಇಲ್ಲಿ ಡ್ಯಾಡಿ ಆಗಿದ್ದಾರೆ ಗಾಯಕ ರಘು ದೀಕ್ಷಿತ್‌ !

ಅವನೇ ಶ್ರೀಮನ್ನಾರಾಯಣ ಚಿತ್ರದ ಖ್ಯಾತಿಯ ನಟಿ ಶಾನ್ವಿ ಶ್ರೀವಾಸ್ತವ್‌ ʼಕಸ್ತೂರಿ ಮಹಲ್‌ʼ ಪ್ರವೇಶಿಸಿದ್ದು ನಿಮಗೆಲ್ಲ ಗೊತ್ತೇ ಇದೆ. ಅದೀಗ ತೆರೆಗೆ ಬರುವುದಕ್ಕೂ ರೆಡಿಯಾಗಿದೆ. ಈ ನಡುವೆಯೇ ಅವರೀಗ ಬ್ಯಾಂಗ್‌ ಹೆಸರಿನ ಚಿತ್ರಕ್ಕೂ ಬಣ್ಣ ಹಚ್ಚಿದ್ದು, ಅಲ್ಲಿ ಅವರು ಗ್ಯಾಂಗ್‌ ಸ್ಟರ್‌ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಅದೀಗ ರಿಲೀಸ್‌ ಹತ್ತಿರಕ್ಕೆ ಬಂದಿದೆ. ಇತ್ತೀಚೆಗಷ್ಟೇ ಆ ಚಿತ್ರದ ಟೀಸರ್ ಹಾಗೂ ಫಸ್ಟ್ ಲುಕ್ ಲಾಂಚ್‌ ಆಯಿತು. ವಸಂತ್‌ ಕುಮಾರ್‌ ಹಾಗೂ ಪೂಜಾ ವಸಂತ್‌ ಕುಮಾರ್‌ ನಿರ್ಮಾಣದ ಈ ಚಿತ್ರಕ್ಕೆ ಗಣೇಶ್‌ ಆಕ್ಷನ್‌ ಕಟ್‌ ಹೇಳಿದ್ದಾರೆ. ಹೆಸರಿಗೆ ತಕ್ಕಂತೆ ಇದೊಂದು ಡಾರ್ಕ್‌ ಕಾಮಿಡಿ ಹಾಗೂ ಆಕ್ಷನ್ ಥ್ರಿಲ್ಲರ್ ಚಿತ್ರವಂತೆ.

ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಗಣೇಶ್‌ ಪರಶುರಾಮ್‌, ಇದು ಯಾವುದೇ ಒಂದು ವರ್ಗಕ್ಕೆ ಸೀಮಿತವಾಗದೇ ಎಲ್ಲರಿಗೂ ಹಿಡಿಸುವ ಕಥೆ. ನಲವತ್ತೆಂಟು ಘಂಟೆಗಳಲ್ಲಿ ನಡೆಯುವ ಘಟನೆಯೊಂದನ್ನು ವಿಭಿನ್ನವಾಗಿ ಹೇಳುವ ಪ್ರಯತ್ನ ಮಾಡಿದ್ದೇನೆ. ಮೊದಲ ಬಾರಿಗೆ ಶಾನ್ವಿ ಶ್ರೀವಾಸ್ತವ್ ಇಲ್ಲಿ ಗ್ಯಾಂಗ್ ಸ್ಟರ್ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ಗಾಯಕ ಹಾಗೂ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಇದೇ ಪ್ರಥಮ ಬಾರಿಗೆ ಡ್ಯಾಡಿ ಎಂಬ ಪಾತ್ರದ ಮೂಲಕ ತೆರೆ ಮೇಲೆ ಬರುತ್ತಿದ್ದಾರೆ ಎಂದರು. ವಿಶೇಷ ಅಂದ್ರೆ ಈ ಚಿತ್ರವು ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಏಕಕಾಲದಲ್ಲಿ ತೆರೆಗೆ ಬರುತ್ತಿದೆ. ಫೆಬ್ರವರಿಗೆ ರಿಲೀಸ್‌ ಪ್ಲಾನ್‌ ಹಾಕಿಕೊಂಡಿದೆ ಚಿತ್ರ ತಂಡ. ಅದಕ್ಕೂ‌ ಮುನ್ನ ‌ಜನವರಿಯಲ್ಲಿ ಟ್ರೇಲರ್ ಲಾಂಚ್‌ ಆಗಲಿದೆಯಂತೆ.


ಚಿತ್ರಕ್ಕೆ ತಾವು ಎಂಟ್ರಿಯಾದ ಬಗ್ಗೆ ಹಾಗೂ ತಮ್ಮ ಪಾತ್ರದ ಬಗ್ಗೆ ನಟಿ ಶಾನ್ವಿ ಶ್ರೀವಾಸ್ತವ್‌ ಹೇಳಿಕೊಂಡರು.ʼ ನಾನು ಈ ರೀತಿ ಪಾತ್ರ ಯಾವತ್ತೂ ಮಾಡಿಲ್ಲ.‌ ಮೊದಲು ಯೋಚನೆ ಮಾಡಿದ್ದೆ. ನನಗೆ ಈ ಪಾತ್ರ ಸರಿ ಹೊಂದುತ್ತದೊ ಇಲ್ಲವೋ? ಎಂದು. ಮೊದಲ ದಿನ ಚಿತ್ರೀಕರಣಕ್ಕೆ ಹೋದಾಗ, ನಾನು‌ ನಿರ್ಧಾರ ಸರಿ ಅನಿಸಿತು. ನಾಯಕಿಯಾಗಿ ಸಾಕಷ್ಟು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಇಂತಹ ಪಾತ್ರಗಳು ಬರುವುದು ಕಡಿಮೆ. ಕಥೆ ತುಂಬಾ ಚೆನ್ನಾಗಿದೆ ಎಂದರು ಶಾನ್ವಿ ಶ್ರೀವಾಸ್ತವ್. ಹಾಗೆಯೇ ಗಾಯಕ ಹಾಗೂ ಸಂಗೀತ ನಿರ್ದೇಶಕ ರಘು ದೀಕ್ಷಿತ್‌ ತಾವು ಡ್ಯಾಡಿ ಯಾದ ಕಥೆ ಬಿಚ್ಚಿಟ್ಟರು. ʼ ಗೆಳೆಯ ರಿತ್ವಿಕ್ ಹಾಗೂ ನಿರ್ದೇಶಕ ಗಣೇಶ್ ಮಾತನಾಡಲು ಮನೆಗೆ ಬಂದರು. ನಾನು ಸಂಗೀತ ನಿರ್ದೇಶನ ಅಥವಾ ಹಾಡು ಹಾಡಿಸುವುದಕ್ಕಾಗಿ ಕೇಳಲು ಮನೆಗೆ ಬಂದಿದ್ದಾರೆ ಅಂದು ಕೊಂಡೆ. ನಂತರ ಅವರು ನೀವು ಈ ಚಿತ್ರದಲ್ಲಿ ನಟಿಸಬೇಕೆಂ ದರು.‌ ಒಂದು ಸಲ ಆಶ್ಚರ್ಯವಾಯಿತು. ಮೊದಲು ನಾನು ಒಪ್ಪಲಿಲ್ಲ. ನಂತರ ಅವರ ಒತ್ತಡಕ್ಕೆ ಮಣಿದು ಒಪ್ಪಿಕೊಂಡೆ. ಡ್ಯಾಡಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಒಳ್ಳೆಯ ನಿರ್ಮಾಪಕ ರೊಂದಿಗೆ ಹಾಗೂ ಚಿತ್ರತಂಡದೊಂದಿಗೆ ಕೆಲಸ ಮಾಡಿದ ಖುಷಿ ಇದೆʼ ಎಂದರು ರಘು ದೀಕ್ಷಿತ್.

ಚಿತ್ರದಲ್ಲಿ ನಾಲ್ಕು ಸ್ನೇಹಿತರ ಪಯಣದಲ್ಲಿ ಈ ಕಥೆ ನಡೆಯುತ್ತದೆ. ಚಿತ್ರದ‌ ಸಂಗೀತ ನಿರ್ದೇಶಕ ರಿತ್ವಿಕ್ ಮುರಳಿಧರ್ ಆರವ್ ಪಾತ್ರದಲ್ಲಿ, ಸುನೀಲ್ ತಮ್ಮದೇ ಹೆಸರಿನ ಪಾತ್ರದಲ್ಲಿ, ನಾಟ್ಯ ರಂಗ ಭೂಷಣ್ ಆಗಿ‌ ಹಾಗೂ ಸಾತ್ವಿಕ ಅವರು ಸಿರಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ನಾಲ್ಕು ಜನರು ತಮ್ಮ ಪಾತ್ರದ ಬಗ್ಗೆ ವಿವರಣೆ ನೀಡಿದರು. ಛಾಯಾಗ್ರಾಹಕ ಉದಯಲೀಲ, ಸಂಕಲನಕಾರ ಹಾಗೂ‌ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿರುವ ವಿಜೇತ್ ಚಂದ್ರ ಚಿತ್ರದ ತಮ್ಮ ಕಾರ್ಯದ ಬಗ್ಗೆ ಮಾಹಿತಿ ನೀಡಿದರು. ಯು.ಕೆ.ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾ ವಸಂತಕುಮಾರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.‌ ಈಗಾಗಲೇ ಆನ ಹಾಗೂ ನಾನು, ಅದು ಮತ್ತು ಸರೋಜ ಚಿತ್ರಗಳನ್ನು ನಿರ್ಮಾಣ ಮಾಡಿರುವ ಪೂಜಾ ವಸಂತಕುಮಾರ್ ಅವರ ನಿರ್ಮಾಣದ ಮೂರನೇ ಚಿತ್ರ ‘ಬ್ಯಾಂಗ್’.
ಎಂಟರ್‌ ಟೈನ್‌ ಮೆಂಟ್‌ ಬ್ಯುರೋ ಸಿನಿಲಹರಿ

Related Posts

error: Content is protected !!