ಯೋಗರಾಜ್‌ ಭಟ್ಟರ ʼಪದವಿ ಪೂರ್ವʼ ಕ್ಕೆ ಸೇರಿದ ನಟಿ ದಿವ್ಯ ಉರುಡುಗ !

ಬಿಗ್‌ ಬಾಸ್‌ ಖ್ಯಾತಿಯ ನಟಿ ದಿವ್ಯ ಉರುಡುಗ ಮತ್ತೆ ನಟನೆಯಲ್ಲಿ ಬ್ಯುಸಿ ಆಗುತ್ತಿದ್ದಾರೆ. ಇದೀಗ ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್‌ರವರ ಜಂಟಿ ನಿರ್ಮಾಣದಲ್ಲಿ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ ಚಿತ್ರ “ಪದವಿಪೂರ್ವ”ಕ್ಕೆ ಈಗ ದಿವ್ಯ ಉರುಡುಗ ಎಂಟ್ರಿ ಆಗಿರುವ ಹೊಸ ಸುದ್ದಿ ರಿವೀಲ್‌ ಆಗಿದೆ. ಅಂದ ಹಾಗೆ, ಈಗಾಗಲೇ ಪದವಿ ಪೂರ್ವ ಚಿತ್ರ ಬಹುತೇಕ ಚಿತ್ರೀಕರಣ ಮುಗಿಸಿರುವುದು ನಿಮಗೂ ಗೊತ್ತಿದೆ. ಅಂದ್ಮೇಲೆ ಈ ಚಿತ್ರದಲ್ಲಿ ಅವರೇನು ಪಾತ್ರ ಅಂತ ನಿಮಗೂ ಕುತೂಹಲ ಇರಬಹುದು. ಅದು ವಾಸ್ತವವೂ ಹೌದು. ದಿವ್ಯ ಉರುಡುಗ ಪದವಿ ಪೂರ್ವಕ್ಕೆ ಬಂದರೂ ನಾಯಕಿ ಆಗಿ ಅಲ್ಲ ಎನ್ನುವುದು ನಿಮಗೂ ಗೊತ್ತಿರುವ ಹಾಗೆಯೇ ಅವರಲ್ಲಿ ಅತಿಥಿ ಪಾತ್ರವೊಂದನ್ನು ನಿರ್ವಹಿಸಿದ್ದಾರಂತೆ. ಭಟ್ಟರ ತಂಡ ಸೇರಿದ್ದಕ್ಕೆ ಅವರಿಗೂ ಸಿಕ್ಕಾಪಟ್ಟೆ ಖುಷಿ ಆಗಿದೆಯಂತೆ.

ʼ ಭಟ್ಟರ ಸಿನಿಮಾ ಅಂದ್ರೆ ಹೆಚ್ಚೇನು ಹೇಳಬೇಕಿಲ್ಲ, ಅಲ್ಲಿ ವಿಶೇಷತೆ ಇದ್ದೇ ಇರುತ್ತದೆ. ಇಲ್ಲಿ ಅವರು ನಿರ್ದೇಶನ ಮಾಡುತ್ತಿಲ್ಲ ಅಂದ್ರು ನಿರ್ಮಾಣ ಅವರದ್ದೇ ಆಗಿದೆ. ಹಾಗಾಗಿ ಅವರ ಸಿನಿಮಾಗಳ ಮೇಲೆ ಪ್ರೇಕ್ಷಕರಿಗೂ ಸಾಕಷ್ಟು ನಿರೀಕ್ಷೆ ಇದ್ದೇ ಇರುತ್ತದೆ. ನಂಗೆ ಅಂತಹ ಕುತೂಹಲ ಇತ್ತು. ಈಗ ಅವರದ್ದೇ ನಿರ್ಮಾಣದ ಸಿನಿಮಾದಲ್ಲಿ ಅಭಿನಯಿಸುವ ಅವಕಾಶ ಹುಡುಕಿಕೊಂಡು ಬಂದಿದೆ. ಖುಷಿ ಆಗಿದೆ ಅಂತ ನಟಿ ದಿವ್ಯ ಉರುಡುಗ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಇನ್ನು ದಿವ್ಯ ನಟಿಸಲಿರುವ ಭಾಗದ ಚಿತ್ರೀಕರಣವು ಬೆಂಗಳೂರು ಹಾಗು ಮಂಗಳೂರಿನ ಸುತ್ತಮುತ್ತ ಶೀಘ್ರದಲ್ಲೇ ಶುರು ಆಗಲಿದ್ದು, ಚಿತ್ರದ ಐದನೇ ಹಂತದ ಚಿತ್ರೀಕರಣಕ್ಕೆ ಚಿತ್ರತಂಡ ಸಕಲ ಸಿದ್ಧತೆ ನಡೆಸಿದೆ. ಇದು ಹರಿಪ್ರಸಾದ್‌ ಜಯಣ್ಣ ನಿರ್ದೇಶನದ ಚಿತ್ರ. ಚಿತ್ರದ ನಾಲ್ಕನೇ ಹಂತದ ಚಿತ್ರೀಕರಣವು ಕಳೆದ ತಿಂಗಳಷ್ಷೇ ಪೂರ್ಣಗೊಂಡಿದ್ದು, ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಡೆಸಿದ ಚಿತ್ರೀಕರಣದ ದೃಶ್ಯಗಳು ಅತ್ಯಂತ ಸೊಗಸಾಗಿ ಮೂಡಿಬಂದಿದೆಯಂತೆ.

ಹೊಸಬರ ದಂಡೇ ಇರುವ ಈ ಚಿತ್ರಕ್ಕೆ ಯುವ ಪ್ರತಿಭೆ ಪೃಥ್ವಿ ಶಾಮನೂರು ನಾಯಕನಾದರೆ, ಅಂಜಲಿ ಅನೀಶ್ ಮತ್ತು ಯಶ ಶಿವಕುಮಾರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಅರ್ಜುನ್ ಜನ್ಯ ಸಂಯೋಜಿಸಿರುವ ರಾಗಗಳಿಗೆ ಕನ್ನಡ ಶೋತೃಗಳ ವಿಕಟಕವಿ ಯೋಗರಾಜ್ ಭಟ್ ಸಾಹಿತ್ಯ ರಚಿಸಿದರೆ, ಖ್ಯಾತ ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಹಾಗೂ ಮಧು ತುಂಬಕೆರೆಯ ಸಂಕಲನದ ಕೈಚಳಕ ಚಿತ್ರವನ್ನು ಮತ್ತಷ್ಟು ಶ್ರೀಮಂತಗೊಳಿಸಿದೆ ಎನ್ನುವುದು ಚಿತ್ರ ತಂಡದ ಮಾತು

  • ಎಂಟರ್‌ ಟೈನ್‌ ಮೆಂಟ್‌ ಸಿನಿಲಹರಿ

Related Posts

error: Content is protected !!