ಅಪ್ಪು ಇಲ್ಲದ ಎರಡು ತಿಂಗಳು; ಸಮಾಧಿಗೆ ಕುಟುಂಬ ಪೂಜೆ

ಪುನೀತ್‌ ರಾಜಕುಮಾರ್‌ ಇಲ್ಲದೆ ಇಂದಿಗೆ ಎರಡು ತಿಂಗಳು ಕಳೆದಿವೆ. ಅಪ್ಪು ಅಗಲಿ ಎರಡು ತಿಂಗಳು ಕಳೆದಿದ್ದರಿಂದ ಅವರ ಕುಟುಂಬ ವರ್ಗ ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ರಾಘವೇಂದ್ರ ರಾಜ್‌ಕುಮಾರ್ ಮತ್ತು ಅವರ ಕುಟುಂಬ ಅಪ್ಪು ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿತು. ಪೂಜೆ ನಂತರ ರಾಘವೇಂದ್ರ ರಾಜ್‌ಕುಮಾರ್ ಮತ್ತು ನಾರಾಯಣ ನೇತ್ರಾಲಯದ ಹಿರಿಯ ನೇತ್ರತಜ್ಞ ಭುಜಂಗ ಶೆಟ್ಟಿ ಅವರು ಈ ವೇಳೆ ನೇತ್ರದಾನದ ಸಹಾಯವಾಣಿ ಲೋಕಾರ್ಪಣೆ ಮಾಡಿದರು.


ಅಲ್ಲೇ ಇದ್ದ ಮಾಧ್ಯಮ ಜೊತೆ ಮಾತಿಗಿಳಿದ ರಾಘವೇಂದ್ರ ರಾಜ್‌ಕುಮಾರ್, “ಇಂದು ಅಪ್ಪು ಬಿಟ್ಟು ಹೋದ ಎರಡು ಕಣ್ಣುಗಳಿಂದ ನಾಲ್ಕು ಜನ ಪ್ರಪಂಚ ನೋಡುತ್ತಿದ್ದಾರೆ. ಇದು ನಿಜಕ್ಕೂ ಸಂತೋಷದ ವಿಷಯ. ಹಾಗೆಯೇ ಅಪ್ಪು ಹಾಕಿಕೊಟ್ಟಿರುವ ಈ ಹಾದಿಯಲ್ಲಿ ನಾವು ಸಾಗಬೇಕು ಜಗತ್ತಿನಿಂದ ಅಂಧತ್ವ ನಿವಾರಣೆ ಮಾಡಬೇಕು” ಎಂದರು.
‘ಅಪ್ಪು ನಿಧನದ ಬಳಿಕ ಕಣ್ಣು ದಾನ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಅಷ್ಟೇ ಅಲ್ಲ ಕಣ್ಣು ದಾನ ಮಾಡಿದವರು ತೀರಿ ಹೋದಾಗ ಕರೆ ಮಾಡಿ ಕಣ್ಣು ಸಂಗ್ರಹಿಸಲು ಹೇಳುವಷ್ಟು ಜಾಗೃತಿ ಮೂಡಿದೆ.

ಈ ರೀತಿಯ ನೇತ್ರದಾನದ ಕ್ರಾಂತಿ ಎಲ್ಲೂ ಆಗಿಲ್ಲ. ನಾವು ಅಂಧತ್ವ ತೊಲಗಿಸಬೇಕು. ಇನ್ನು, ” 8884018800 ಸಂಖ್ಯೆಗೆ ಸ್ ಕಾಲ್ ಕೊಟ್ಟರೆ ನೇತ್ರದಾನ ಮಾಡುವ ಫಾರಂ ಸಿಗುತ್ತದೆ ಅದನ್ನು ಅಲ್ಲಿಯೇ ತುಂಬಿ ಸಲ್ಲಿಸಬಹುದು. ನೇತ್ರದಾನ ಮಾಡಿದ್ದಕ್ಕೆ ನಿಮಗೆ ಸರ್ಟಿಫಿಕೇಟ್ ಸಹ ಸಿಗುತ್ತದೆ. ಕೇವಲ ನೇತ್ರದಾನ ಮಾಡಿ ಸುಮ್ಮನಾಗುವಂತಿಲ್ಲ. ಕಾಲವಾದಾಗ ಕಣ್ಣು ದಾನ ಕಡ್ಡಾಯವಾಗಿ ಮಾಡುವಂತೆ ಸುತ್ತಲಿನವರಿಗೆ ಹೇಳಿಟ್ಟಿರಬೇಕು. ನಾನು ನನ್ನ ನೇತ್ರದಾನದ ಸರ್ಟಿಫಿಕೇಟ್ ಅನ್ನು ಫ್ರೇಮ್ ಹಾಕಿಸಿ ಮನೆಯಲ್ಲಿಟ್ಟಿದ್ದೀನಿ. ನಮ್ಮವರಿಗೆ ಸದಾ ಗೊತ್ತಾಗುತ್ತಿರಬೇಕು ‘ಆ ದಿನ’ ಬಂದಾಗ ನೇತ್ರದಾನದ ಪ್ರಕ್ರಿಯೆ ಪೂರ್ಣ ಮಾಡಬೇಕು. ಅಪ್ಪಾಜಿ ಹುಟ್ಟುಹಬ್ಬದ ಸಂದರ್ಭದಲ್ಲಿ ನಾನು ಮತ್ತು ನನ್ನ ಅಣ್ಣ ದೇಹದಾನ ಮಾಡಿದ್ದೇವೆ” ಎಂದರು ರಾಘವೇಂದ್ರ ರಾಜಕುಮಾರ್.


”ಇಂತಹ ಕಾರ್ಯಕ್ರಮಗಳ ಉದ್ಘಾಟನೆ ಮಾಡಿ ನಾವು ಹೆಸರು ಮಾಡಿಕೊಂಡು ಬಿಡುತ್ತೇವೆ. ಆದರೆ ಇದರ ಹಿಂದೆ ನಿಜವಾಗಿಯೂ ಇರುವುದು ವೈದ್ಯರು. ಈ ನೇತ್ರದಾನದ ಕೆಲಸ ಅವರದ್ದು, ಕೊರೊನಾ ಸಮಯದಲ್ಲಿ ಎಲ್ಲರೂ ಆಸ್ಪತ್ರೆಗಳಿಗೆ ಬಂದು, ಕೇಂದ್ರಗಳಿಗೆ ಬಂದು ನೇತ್ರದಾನ ಮಾಡಲು ಆಗುವುದಿಲ್ಲ. ಹಾಗಾಗಿ ಕುಳಿತ ಜಾಗದಿಂದಲೇ ನೇತ್ರದಾನ ಮಾಡಲು ಅನುಕೂಲ ಆಗಲೆಂದು ವೈದ್ಯರ ತಂಡ ಹೀಗೊಂದು ಪ್ರಯತ್ನ ಮಾಡಿದೆ. ಇದರ ಉಪಯೋಗ ಪಡೆದುಕೊಳ್ಳಬೇಕು ಎಂದಿದ್ದಾರೆ.

Related Posts

error: Content is protected !!