ಅಪ್ಪು ಮನೆಗೆ ಕಮಲ್‌ ಹಾಸನ್‌ ಭೇಟಿ; ಕುಟುಂಬಕ್ಕೆ ಸಾಂತ್ವನ

ಪುನೀತ್ ರಾಜ್‌ಕುಮಾರ್ ಅವರು ನಮ್ಮೊಂದಿಗಿಲ್ಲ. ಆದರೆ, ಅದ್ಭುತ ಸಿನಿಮಾಗಳ ಮೂಲಕ ಅವರಿನ್ನೂ ನಮ್ಮೊಂದಿಗೆ ಜೀವಂತವಾಗಿದ್ದಾರೆ. ಅವರು ಇಲ್ಲ ಎಂಬ ಭಾವನೆ ಯಾರಲ್ಲೂ ಇಲ್ಲ. ಅವರು ನಿಧನರಾಗಿ ಎರಡು ತಿಂಗಳಾದರೂ ಪ್ರತಿ ದಿನ ಸಮಾಧಿಗೆ ಸಾವಿರಾರು ಜನ ಭೇಟಿ ನೀಡಿ ಪೂಜಿಸುತ್ತಿದ್ದಾರೆ. ಅವರ ಮನೆಗೂ ಭೇಟಿ ನೀಡುವ ಸ್ಟಾರ್‌ ನಟರ ಸಂಖ್ಯೆ ಕೂಡ ಕಡಿಮೆಯಾಗಿಲ್ಲ. ಇತ್ತೀಚೆಗಷ್ಟೇ ನಟ ಪ್ರಭಾಸ್‌ ಅವರು ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಜನವರಿ ೧ರಂದು ತಮಿಳಿನ ಖ್ಯಾತ ನಟ ಕಮಲ್‌ ಹಾಸನ್‌ ಅವರು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಅವರು ವಿಕ್ರಂ ಸಿನಿಮಾದ ಶೂಟಿಂಗ್‌ಗಾಗಿ ಬೆಂಗಳೂರಿಗೆ ಬಂದಿದ್ದಾರೆ. ಈ ಸಮಯದಲ್ಲಿ ಅವರು ಪುನೀತ್‌ ರಾಜಕುಮಾರ್‌ ಅವರ ನಿವಾಸಕ್ಕೆ ಭೇಟಿ ನೀಡಿ, ಅಶ್ವಿನಿ ಪುನೀತ್‌ ರಾಜಕುಮಾರ್‌ ಅವರ ಜೊತೆ ಮಾತನಾಡಿ, ಚರ್ಚಿಸಿ ಸಾಂತ್ವನ ಹೇಳಿದ್ದಾರೆ.

ಪುನೀತ್ ಅವರು ನಿಧನರಾದಾಗ ಕಮಲ್ ಹಾಸನ್ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಸಂತಾಪ ಸೂಚಿಸಿದ್ದರು. ಪುನೀತ್‌ ಅವರ ಅಂತಿಮ ದರ್ಶನಕ್ಕೆ ಅವರು ಆಗಮಿಸಿರಲಿಲ್ಲ. ಈಗ ಪುನೀತ್ ನಿವಾಸಕ್ಕೆ ಆಗಮಿಸಿ, ಅಪ್ಪುಗೆ ನಮನ ಸಲ್ಲಿಸಿದ್ದಾರೆ. ಈಗಾಗಲೇ ಸ್ಟಾರ್ ನಟ-ನಟಿಯರು ಪುನೀತ್ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಚಿರಂಜೀವಿ, ರಾಮ್ ಚರಣ್ ತೇಜ, ಜೂ ಎನ್‌ಟಿಆರ್, ಬಾಲಕೃಷ್ಣ, ನಾಗಾರ್ಜುನ, ಮೋಹನ್‌ಬಾಬು, ತಮಿಳು ನಟ ವಿಶಾಲ್, ಸೂರ್ಯ, ಸಿದ್ಧಾರ್ಥ್ ಸೇರಿದಂತೆ ಹಲವರು ಆಗಮಿಸಿ ಸಾಂತ್ವನ ಹೇಳಿದ್ದಾರೆ.

Related Posts

error: Content is protected !!