ಗರುಡ ಗಮನ ಮೆಚ್ಚಿದ ತೆಲುಗು ನಿರ್ದೇಶಕ; ಆಸ್ಕರ್ ಅವಾರ್ಡ್ ವಿನ್ನಿಂಗ್ ಮೂವಿ ಎಂದ ದೇವ ಕಟ್ಟ!

ಸ್ಯಾಂಡಲ್​ವುಡ್​​ನಲ್ಲಿ ವಿಭಿನ್ನ ಕಂಟೆಂಟ್ ಮೂಲಕ ಪ್ರೇಕ್ಷಕರ ಮನಗೆದ್ದ ಗರುಡ ಗಮನ ವೃಷಭ ವಾಹನ ಸಿನಿಮಾ ಜೀ5ನಲ್ಲಿ ಇಂದಿನಿಂದ ಸ್ಟ್ರೀಮ್ ಆಗಲಿದೆ. ಕಳೆದ‌ ನವೆಂಬರ್ 19ರಂದು ಥಿಯೇಟರ್ ಗೆ ಲಗ್ಗೆ ಇಟ್ಟ ‘ಗರುಡ ಗಮನ ವೃಷಭ ವಾಹನ’ ಸಿನಿಮಾವು ನೋಡುಗರಿಂದ ಸಖತ್ ಮೆಚ್ಚುಗೆ ಪಡೆದುಕೊಂಡಿತ್ತು. ‘ಒಂದು ಮೊಟ್ಟೆಯ ಕಥೆ’ ಥರದ ಕಾಮಿಡಿ ಸಿನಿಮಾ ಮಾಡಿದ್ದ ರಾಜ್ ಬಿ. ಶೆಟ್ಟಿ, ಇಂಥದ್ದೊಂದು ಗ್ಯಾಂಗ್‌ಸ್ಟರ್ ಸಿನಿಮಾ ಮಾಡುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಅದರಲ್ಲೂ ಅವರು ಮಾಡಿದ್ದ ಶಿವ ಪಾತ್ರ ಸಖತ್ ರಗಡ್ ಆಗಿ ಮೂಡಿಬಂದಿತ್ತು. ರಾಜ್ ಬಿ. ಶೆಟ್ಟಿ ಮತ್ತು ರಿಷಬ್‌ ಶೆಟ್ಟಿ ಕಾಂಬಿನೇಷನ್ ನೋಡುಗರಿಗೆ ಇಷ್ಟವಾಗಿತ್ತು. ಇದೀಗ ಈ ಸಿನಿಮಾವನ್ನು‌ ಟಾಲಿವುಡ್ ಖ್ಯಾತ ನಿರ್ಮಾಪಕ ದೇವ ಕಟ್ಟ ಮೆಚ್ಚುಕೊಂಡಿದ್ದಾರೆ.

ಆಸ್ಕರ್ ಅವಾರ್ಡ್ ವಿನ್ನಿಂಗ್ ಮೂವಿ ಎಂದ ದೇವ

ಟಾಲಿವುಡ್ ಸೇರಿದಂತೆ ಬಾಲಿವುಡ್ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿ ಸಕ್ಸಸ್ ಕಂಡಿರುವ ದೇವ ಕಟ್ಟಾ ಗರುಡ ಗಮನ ವೃಷಭ ವಾಹನ ಸಿನಿಮಾವನ್ನು ಹಾಡಿ ಹೊಗಳಿದ್ದಾರೆ.
2021ರ ಭಾರತೀಯ ಸಿನಿಮಾಗಳ ಪೈಕಿ ಅತ್ಯುತ್ತಮ ಚಲನಚಿತ್ರ ಗರಡುಗಮನ ವೃಷಭ ವಾಹನ. ನನಗೆ ಆಸ್ಕರ್ ಗೆ ಸಿನಿಮಾ ಆಯ್ಕೆ ಮಾಡುವ ಪವರ್ ಇದ್ದಿದ್ದರೆ ಈ ಸಿನಿಮಾವನ್ನು ಆಯ್ಕೆ‌ ಮಾಡುತ್ತಿದ್ದೆ. ಗರುಡ ಗಮನ ವೃಷಭ ವಾಹನ ಸಿನಿಮಾ‌‌ವನ್ನು ನನ್ನ ಸ್ನೇಹಿತರ ಜೊತೆ ನೋಡಿದೆ. ಫಿಲ್ಮಂ ಮೇಕಿಂಗ್ ಅದ್ಭುತವಾಗಿದೆ.

ಸಿನಿಮಾ‌ ಬಹಳಷ್ಟು ಇಷ್ಟದ‌‌ ನಂತರ ಮತ್ತೆ ಕೆಲ ದಿನ ಬಳಿಕ ಥಿಯೇಟರ್ ಗೆ ಹೋದಾಗ ಸಿನಿಮಾ‌ ಇರಲಿಲ್ಲ. ಹೀಗಾಗಿ ಬೇಸರ ಆಯ್ತು. ಈಗ ಜೀ5 ಫ್ಲಾಟ್ ಫಾರ್ಮ್ ನಲ್ಲಿ‌ ಸಿನಿಮಾ ಬಿಡುಗಡೆಯಾಗುತ್ತಿದೆ. ರಾಜ್ ಬಿ ಶೆಟ್ಟಿ ಸಿನಿಮಾವನ್ನು ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಪ್ರತಿಯೊಬ್ಬರಿಗೆ ಇಷ್ಟು ಆಗುತ್ತೆ ಮಿಸ್ ಮಾಡದ್ದೇ ಎಲ್ಲರೂ ನೋಡಿ‌ ಎಂದಿದ್ದಾರೆ ದೇವ್.

Related Posts

error: Content is protected !!