ಕನ್ನಡದ ಉಸಿರಿಗೆ ತೆಲುಗಿನ ಬ್ರಹ್ಮಾನಂದಂ- ಅಲಿ ಸಾಥ್…

” ಉಸಿರೇ ಉಸಿರೇ” ಅಂದಾಕ್ಷಣ ನೆನಪಾಗೋದೇ ಕಿಚ್ಚ ಸುದೀಪ್. ಅವರ ಹುಚ್ಚ ಸಿನಿಮಾದ ಉಸಿರೇ ಉಸಿರೇ ಹಾಡು ಈಗ ಸಿನಿಮಾವೊಂದರ ಟೈಟಲ್ ಆಗಿದೆ. ಹೌದು ಆ ಹಾಡಿಂದಲೆ ಆರಂಭವಾದ ಚಿತ್ರ “ಉಸಿರೇ ಉಸಿರೇ”. ಸಿಸಿಎಲ್ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ಈ ಚಿತ್ರದ ಹೀರೋ. ಈ ಚಿತ್ರದ ಚಿತ್ರೀಕರಣ ಸದ್ಯ ಕೋಲಾರದಲ್ಲಿ ನಡೆಯುತ್ತಿದೆ.

ರಾಜೀವ್, ನಾಯಕಿ ಶ್ರೀಜಿತ, ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಸಾಯಿಕುಮಾರ್, ಬ್ರಹ್ಮಾನಂದಂ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಖ್ಯಾತ ನಟ ಅಲಿ ಸಹ ಈ ಚಿತ್ರದಲ್ಲಿ ನಟಿಸುತ್ತಿದ್ದು, ಕೋಲಾರದಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರು, ಕೋಲಾರ, ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ. ಎನ್ ಗೊಂಬೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಿಸುತ್ತಿರುವ
ಈ ಚಿತ್ರವನ್ನು ಸಿ.ಎಂ.ವಿಜಯ್ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ ಕೂಡ ಅವರದೆ‌.

ಸುಮಧುರ ಹಾಡುಗಳಿರುವ ಈ ಚಿತ್ರಕ್ಕೆ ವಿವೇಕ್ ಚಕ್ರವರ್ತಿ ಸಂಗೀತ ನೀಡುತ್ತಿದ್ದಾರೆ. ಸರವಣನ್ ಛಾಯಾಗ್ರಹಣ ಮಾಡುತ್ತಿದ್ದಾರೆ.ಕೆ.ಎಂ.ಪ್ರಕಾಶ್ ಈ ಚಿತ್ರದ ಸಂಕಲನಾರರು.

Related Posts

error: Content is protected !!