ಹಿರಿಯ ನಿರ್ದೇಶಕ ಕಟ್ಟೆ ರಾಮಚಂದ್ರ ನಿಧನ

ಕನ್ನಡ ಚಿತ್ರರಂಗದ ಮತ್ತೊಬ್ಬ ಹಿರಿಯ ನಿರ್ದೇಶಕ ಕಟ್ಟೆ ರಾಮಚಂದ್ರ (75) ಅವರು ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು (ಇಂದು) ಜನವರಿ 28ರಂದು ಅಗಲಿದ್ದಾರೆ. ಕಟ್ಟೆ ರಾಮಚಂದ್ರ ಅವರು ನಿರ್ದೇಶಕರಾಗಿ ಮತ್ತು ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದರು.

ಅವರು ವೈಶಾಖದ ದಿನಗಳು, ಅರಿವು ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದರು. ಮಹಾಲಕ್ಷ್ಮಿ ಸಿನಿಮಾ ನಿರ್ಮಾಣ ಮಾಡಿದ್ದರು. ಕಿರುತೆರೆಯಲ್ಲೂ ಅವರು ತನು ನಿನ್ನದು ಮನ ನಿನ್ನದು ಎಂಬ ಧಾರಾವಾಹಿಯನ್ನು ನಿರ್ದೇಶಿಸಿ, ನಿರ್ಮಿಸಿದ್ದರು. ಅವರು ಮನೆ ಮನೆ ಕಥೆ, ಅಲೆಗಳು ಸೇರಿದಂತೆ ಹಲವು ಸಿನಿಮಾಗಳಲ್ಲೂ ನಟಿಸಿದ್ದರು. ಅವರಿಗೆ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿಗಳು ಲಭಿಸಿದ್ದವು. ಅವರು ರಾಷ್ಟ್ರ ಪ್ರಶಸ್ತಿಯ ಸಮಿತಿಯಲ್ಲಿ ಜ್ಯೂರಿಯಾಗಿಯೂ ಕೆಲಸ ಮಾಡಿದ್ದರು. ಇನ್ನು, ಅವರಿಗೆ ರಂಗಭೂಮಿ ಹಿನ್ನೆಲೆಯೂ ಇತ್ತು. ಅವರೊಂದಿಗೆ ರಂಗಭೂಮಿಯಲ್ಲಿ ಕೆಲಸ ಮಾಡಿದ ಅನೇಕರು ಇಂದು ನಿರ್ದೇಶಕರಾಗಿ, ನಟ,ನಟಿಯರಾಗಿದ್ದಾರೆ.

Related Posts

error: Content is protected !!