ರವಿಚಂದ್ರನ್‌ ಈಗ ರಾಮಸ್ವಾಮಿ! ಚಿ.ಗುರುದತ್‌ ನಿರ್ದೇಶನದಲ್ಲಿ ಕ್ರೇಜಿ…

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಉತ್ತಮ ಚಿತ್ರಗಳನ್ನು ನೀಡಿರುವ ಎನ್. ಎಸ್. ರಾಜಕುಮಾರ್ ತಮ್ಮ ಓಂಕಾರ್ ಫಿಲಂಸ್ ಮೂಲಕ “ರಮ್ಯ ರಾಮಸ್ವಾಮಿ” ಎಂಬ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ. ಇತ್ತೀಚೆಗೆ ರವಿಚಂದ್ರನ್‌ ಅವರಿಗೆ “ಕನ್ನಡಿಗ” ಸಿನಿಮಾ ನಿರ್ಮಿಸಿದ್ದ ರಾಜಕುಮಾರ್‌, ಇದೀಗ ಮತ್ತೊಂದು ಸಿನಿಮಾ ನಿರ್ಮಿಸುತ್ತಿದ್ದಾರೆ.

ಈ ಚಿತ್ರಕ್ಕೆ ಚಿ.ಗುರುದತ್‌ ಅವರು ನಿರ್ದೇಶನ ಮಾಡುತ್ತಿದ್ದಾರೆ ಅನ್ನೋದು ವಿಶೇಷ. ಇನ್ನು, ಈ ಚಿತ್ರಕ್ಕೆ ಜನಾರ್ದನ ಮಹರ್ಷಿ ಕಥೆ ಬರೆದಿದ್ದಾರೆ. ಇಲ್ಲಿ ನಾಯಕರಾಗಿ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯಿಸುತ್ತಿದ್ದು, ರಾಮಸ್ವಾಮಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಮ್ಯ ಪಾತ್ರದಲ್ಲಿ ಯಾರು ನಟಿಸುತ್ತಿದಾರೆಂಬ ಕುತೂಹಲವಿದೆ. ಆ ಪಾತ್ರದಲ್ಲಿ ಖ್ಯಾತ ನಟಿಯೊಬ್ಬರು ನಟಿಸಲಿದ್ದು, ಯಾರು ನಟಿಸುತ್ತಾರೆಂಬುದನ್ನು ಸದ್ಯದಲ್ಲೇ ನಿರ್ಮಾಪಕರು ಹೇಳಲಿದ್ದಾರೆ.

ಜಿ.ಎಸ್.ವಿ ಸೀತಾರಾಂ ಛಾಯಾಗ್ರಹಣವಿದೆ. ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರು ಅವರ ಸಂಗೀತ ನಿರ್ದೇಶನ ಚಿತ್ರಕ್ಕಿರಲಿದೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿ ಇಷ್ಟರಲ್ಲೇ ಕೊಡಲಿದ್ದಾರೆ ನಿರ್ದೇಶಕರು.

Related Posts

error: Content is protected !!