ನೋಡೋರಿಗೆ ಮೈಸೂರು ರೆಡಿ! ಈ ವಾರ ಬಿಡುಗಡೆ

ಕಿರುತೆರೆಯಲ್ಲಿ ಸಾಕಷ್ಟು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ವಾಸುದೇವ ರೆಡ್ಡಿ ನಿರ್ಮಿಸಿ, ನಿರ್ದೇಶಿಸಿರುವ “ಮೈಸೂರು” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ಬಿಡುಗಡೆಯಾಗಿದ್ದ ಈ ಚಿತ್ರದ ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದೆ. ಮೂಲತಃ ಒರಿಸ್ಸಾದವರಾದ ಸಂವಿತ್ ಈ ಚಿತ್ರದ ನಾಯಕ. ಪೂಜಾ ನಾಯಕಿ. ಜೂ.ನರಸಿಂಹರಾಜು, ಸತ್ಯಜಿತ್, ಕುರಿ ಪ್ರತಾಪ್, ಭಾಸ್ಕರ್ ಶೆಟ್ಟಿ, ಅಶೋಕ್ ಹೆಗ್ಡೆ, ಜೈಶ್ರೀ, ರವಿಕುಮಾರ್ ಇತರರು ಚಿತ್ರದಲ್ಲಿದ್ದಾರೆ.

ಎಸ್ ಆರ್ ಕಂಬೈನ್ಸ್ ಲಾಂಛನದಲ್ಲಿ ವಾಸುದೇವ ರೆಡ್ಡಿ ಅವರೆ ಈ ಚಿತ್ರ ನಿರ್ಮಾಣವನ್ನು ಮಾಡಿದ್ದಾರೆ. ಜಗದೀಶ್ (ಜೆ.ಕೆ), ಆರ್.ಅಪ್ಪಾಜಿ(ಕೊಡವತ್ತಿ) ಈ ಚಿತ್ರದ ಸಹ‌ ನಿರ್ಮಾಪಕರು. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳಿಂದ ಕಲಾವಿದನಾಗಿ ಗುರುತಿಸಿಕೊಂಡಿರುವ ಜ್ಯೂನಿಯರ್ ನರಸಿಂಹರಾಜು ಅವರ ಸಾರಥ್ಯದಲ್ಲಿ ಈ ಚಿತ್ರ ತಯಾರಾಗಿದೆ.

ರಘು ಶಾಸ್ತ್ರಿ, ರವಿಶಂಕರ್ ನಾಗ್, ಅನಿತಕೃಷ್ಣ ಬರೆದಿರುವ ಹಾಡುಗಳಿಗೆ ರಮಣಿ ಸುಂದರೇಶನ್, ಅನಿತಕೃಷ್ಣ, ವಿಜಯ್ ರಾಜ್ ಸಂಗೀತ ನೀಡಿದ್ದಾರೆ.

ಕೃಷ್ಣ ಮಳವಳ್ಳಿ ಸಂಭಾಷಣೆ ಬರೆದಿದ್ದಾರೆ. ಭಾಸ್ಕರ್ ವಿ ರೆಡ್ಡಿ ಛಾಯಾಗ್ರಹಣ, ಸಿದ್ದು ಭಗತ್ ಸಂಕಲನ ಹಾಗೂ ಸ್ಟಾರ್ ನಾಗಿ, ಮೈಸೂರು ರಾಜು, ಸುಧಾಕರ್ ವಸಂತ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

Related Posts

error: Content is protected !!