ಧನ್ವೀರ್‌ ಹೊಸ ಸಿನಿಮಾಗೆ ಚಾಲನೆ; ವಾಮನ ಚಿತ್ರೀಕರಣ ಶುರು ಗುರು…

ಬಜಾರ್ ಸಿನಿಮಾ ಮೂಲಕ ಕನ್ನಡ ಸಿನಿ ಪ್ರೇಕ್ಷಕರಿಗೆ ಚಿರಪರಿಚಿತರಾಗಿದ್ದ ಶೋಕ್ದಾರ್ ಧನ್ವೀರ್ ಸದ್ಯ ಬೈ ಟು ಲವ್ ಸಿನಿಮಾ ಸಕ್ಸಸ್ ಖುಷಿಯಲ್ಲಿದ್ದಾರೆ. ಬೈ ಟು ಲವ್ ಸಕ್ಸಸ್ ಯಾತ್ರೆ ಮುಗಿಸಿಕೊಂಡು ಇದೀಗ ಹೊಸ ಸಿನಿಮಾದತ್ತ ಮುಖ ಮಾಡಿದ್ದಾರೆ. ಹೌದು, ಅವರೀಗ “ವಾಮನ” ಎಂಬ ಹೊಸ ಸಿನಿಮಾ ಒಪ್ಪಿಕೊಂಡಿದ್ದು ಗೊತ್ತೇ ಇದೆ. ಅದಕ್ಕೆ ಕತ್ತಿ ಮಾರಮ್ಮ ದೇಗುಲದಲ್ಲಿ ಮಂಗಳವಾರ ಸರಳವಾಗಿ ಮುಹೂರ್ತ ನಡೆದಿದೆ.

ಧನ್ವೀರ್ ಗೌಡ ನಟಿಸುತ್ತಿರುವ ಮೂರನೇ ಸಿನಿಮಾ ಇದು. ಸಂಕ್ರಾಂತಿ ಹಬ್ಬದ ಪ್ರಯುಕ್ತ ವಾಮನ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಬಿಟ್ಟರೆ, ಬೇರೆ ಅಪ್ ಡೇಟ್ ಸಿಕ್ಕಿರಲಿಲ್ಲ. ಇದೀಗ ವಾಮನ ಸಿನಿಮಾದ ಮುಹೂರ್ತ ಸರಳವಾಗಿ ದೇವನಹಳ್ಳಿಯ ಕತ್ತಿ ಮಾರಮ್ಮ ದೇಗುಲದಲ್ಲಿ ನೆರವೇರಿದೆ.

ವಾಮನ ಸಿನಿಮಾದ ಮುಹೂರ್ತದ ನಂತರ ಚಿತ್ರತಂಡ ಶೂಟಿಂಗ್ ಗೆ‌ ಮುನ್ನುಡಿ ಬರೆದಿದೆ. ಬೆಂಗಳೂರಿನಲ್ಲಿಯೇ‌ ಮೊದಲ ಹಂತದ ಶೂಟಿಂಗ್ ನಡೆಸುತ್ತಿದೆ. ಕನ್ನಡ ಮತ್ತು ತೆಲುಗು ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಅಗಿರುವ ಶಂಕರ್ ರಾಮನ್ ವಾಮನ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಕ್ವಿನಾಕ್ಸ್ ಗೋಬಲ್ ಎಂಟರ್ ಟ್ರೈನ್ಮೆಂಟ್ ಪ್ರೊಡಕ್ಷನ್ ನಡಿ ಚೇತನ್ ಕುಮಾರ್ ಸಿನಿಮಾ ನಿರ್ಮಿಸುತ್ತಿದ್ದಾರೆ.

Related Posts

error: Content is protected !!