ಸ್ವಾತಂತ್ರ್ಯ ದಿನಕ್ಕೆ ಕಾಂತಾರ ಹಾಡು: ಮೊದಲ ಹಾಡಲ್ಲಿ ಜಾನಪದ ಸೊಗಡು…

ಕನ್ನಡ ಚಿತ್ರರಂಗಕ್ಕೆ ಕೆ‌.ಜಿ.ಎಫ್ ನಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಸಿರುವ “ಕಾಂತಾರ” ಚಿತ್ರದ ಮೊದಲ ಹಾಡು ಸ್ವಾತಂತ್ರ್ಯ ದಿನಾಚರಣೆ ಶುಭ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ. ನಟ – ನಿರ್ದೇಶಕ ರಿಷಬ್ ಶೆಟ್ಟಿ ಈ ಚಿತ್ರವನ್ನು ನಿರ್ದೇಶಿಸಿರುವುಲ್ಲದೆ, ನಾಯಕರಾಗಿಯೂ ನಟಿಸಿದ್ದಾರೆ.

ಪ್ರಮೋದ್ ಮರವಂತೆ ರಚಿಸಿರುವ “ಸಿಂಗಾರ ಸಿರಿಯೆ” ಎಂಬ ಮನಮೋಹಕ ಹಾಡಿನಲ್ಲಿ ಜಾನಪದ ಸೊಗಡನ್ನು ಎತ್ತಿ ಹಿಡಿಯಲಾಗಿದೆ.

ಗಾಯಕ ವಿಜಯ್ ಪ್ರಕಾಶ್, ಅನನ್ಯ ಭಟ್ ಹಾಗೂ ನಾಗರಾಜ್ ಪನ್ನಾರ್ ವಲ್ಟುರ್ ಅವರ ಕಂಠಸಿರಿಯಲ್ಲಿ ಮೂಡಿಬಂದಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.
ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಸೆಪ್ಟೆಂಬರ್ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

Related Posts

error: Content is protected !!