ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ, ಈಗ ನಟರೂ ಕೂಡ. ಇವರು ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರ ವಿಜಯ ದಶಮಿ ಶುಭದಿನದಂದು ಆರಂಭವಾಗಲಿದೆ.
![](https://cinilahari.in/wp-content/uploads/2022/09/IMG_20220919_091150.jpg)
ಕನ್ನಡ ಚಿತ್ರರಂಗದಲ್ಲಿ ಇತ್ತೀಚಿಗೆ ಹಾಡುಗಳ ಬಿಡುಗಡೆ, ಪ್ರೀ ರಿಲೀಸ್ ಇವೆಂಟ್ ಸೇರಿದಂತೆ ಸಾಕಷ್ಟು ಸಮಾರಂಭಗಳನ್ನು ಅದ್ದೂರಿಯಾಗಿ ಆಯೋಜಿಸುವುದರಲ್ಲಿ ಮುಂಚೂಣಿಯಲ್ಲಿರುವ ಮೈ ಮೂವೀ ಬಜಾರ್ ಹಾಗೂ ಶ್ರೇಯಸ್ ಮೀಡಿಯಾ ದ ನವರಸನ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
![](https://cinilahari.in/wp-content/uploads/2022/09/IMG_20220919_091205.jpg)
ಈವರೆಗೂ “ದಮಯಂತಿ” ಸೇರಿದಂತೆ ನಾಲ್ಕು ಚಿತ್ರಗಳನ್ನು ನವರಸನ್ ನಿರ್ಮಾಣ ಮಾಡಿದ್ದಾರೆ. ನಿರ್ಮಾಣದೊಂದಿಗೆ ಕ್ರಿಯೇಟಿವ್ ನಿರ್ದೇಶಕನಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ.
![](https://cinilahari.in/wp-content/uploads/2022/09/IMG_20220919_091220.jpg)
ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿರಣ್ ಕುಮಾರ್ ನಿರ್ದೇಶಿಸಲಿದ್ದಾರೆ. ಇದು ಅವರಿಗೆ ಮೊದಲ ಚಿತ್ರ. ಚಂದನ್ ಶೆಟ್ಟಿ ಸಂಗೀತ ಸಂಯೋಜಿಸಲಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ತಬಲ ನಾಣಿ ಸೇರಿದಂತೆ ಅನೇಕ ಹಿರಿಯ ಕಲಾವಿದರು ಇದರಲ್ಲಿ ನಟಿಸುತ್ತಿದ್ದಾರೆ. ನಾಯಕಿಯ ಆಯ್ಕೆ ನಡೆಯುತ್ತಿದೆ.