ಪೂರ್ಣಚಂದ್ರರ ಅದ್ವಿತೀಯ ಚಿತ್ರ! ಬ್ರಹ್ಮಕಮಲ ಹಿಡಿದ ಅದ್ವಿತಿ ಶೆಟ್ಟಿ…

“ದಾರಿ ಯಾವುದಯ್ಯಾ ವೈಕುಂಠಕೆ” ಖ್ಯಾತಿಯ ನಿರ್ದೇಶಕ “ಸಿದ್ದು ಪೂರ್ಣಚಂದ್ರ” ಅವರು ಕಥೆ, ಚಿತ್ರಕಥೆ ಬರೆದು ಹೊಸ ಚಿತ್ರ ನಿರ್ದೇಶಿಸುತ್ತಿದ್ದಾರೆ. ಅ ಸಿನಿಮಾಗೆ “ಬ್ರಹ್ಮಕಮಲ” ಎಂದು ಹೆಸರಿಟ್ಟಿದ್ದಾರೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿ ಬೆಂಗಳೂರಿನ ಸುತ್ತಮುತ್ತ ನಡೆಯುತ್ತಿದೆ.

ರಾತ್ರಿ ಹುಟ್ಟಿ ರಾತ್ರಿಯ ಬಾಡುವಂತಹ ಒಂದು ಮಗುವಿನ ಸುತ್ತ ಘಟಿಸುವ ಕಥೆಯೇ ಬ್ರಹ್ಮ ಕಮಲ.

ಈ ಚಿತ್ರದಲ್ಲಿ ಅಧ್ವಿತಿ ಶೆಟ್ಟಿ, ಲೋಕೇಂದ್ರ ಸೂರ್ಯ, ಋತು ಚೈತ್ರ, ಮಮತಾ ರಾಹುತ್, ಪ್ರಮಿಳಾ ಸುಬ್ರಹ್ಮಣ್ಯ, ಬಲ ರಾಜ್ ವಾಡಿ, ಸಿದ್ದು ಪೂರ್ಣಚಂದ್ರ, ಆಟೋ ನಾಗರಾಜ್, ಗಂಡಸಿ ಸದಾನಂದಸ್ವಾಮಿ, ಇನ್ನೂ ಮುಂತಾದವರು ಅಭಿನಯಿಸುತ್ತಿದ್ದಾರೆ.

ಛಾಯಾಗ್ರಹಣ ಲೋಕೇಂದ್ರ ಸೂರ್ಯ, ಸಂಕಲನ ದೀಪು ಸಿ ಎಸ್, ಸಂಗೀತ ಅನಂತ್ ಆರ್ಯನ್ ಮಾಡುತ್ತಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಎ.ಕೆ. ಪುಟ್ಟರಾಜು. ನಿರ್ಮಾಣ ನಿರ್ವಹಣೆ ಮತ್ತು ವಸ್ತ್ರ ವಿನ್ಯಾಸ ಋತು ಚೈತ್ರ ನಿರ್ವಹಿಸುತ್ತಿದ್ದಾರೆ.

Related Posts

error: Content is protected !!