ನಟ ಅಜಯ್ ರಾವ್ ಹೊಸದೊಂದು ಸಿನಿಮಾಗೆ ಸಜ್ಜಾಗುತ್ತಿದ್ದಾರೆ. ಪವನ್ ಭಟ್ ನಿರ್ದೇಶನದ ಚಿತ್ರದಲ್ಲಿ ನಾಯಕ ನಟರಾಗಿ ನಟಿಸುತ್ತಿದ್ದು, ಈ ಚಿತ್ರದ ನಿರ್ಮಾಣವನ್ನು ಅಜಯ್ ರಾವ್ ಮಾಡುತ್ತಿದ್ದಾರೆ. ಈ ಮೂಲಕ ಕೃಷ್ಣ ಲೀಲಾ ಸಿನಿಮಾ ನಂತರ ಮತ್ತೊಮ್ಮೆ ನಿರ್ಮಾಣ ಸಾಹಸಕ್ಕೆ ಮುಂದಾಗಿದ್ದಾರೆ ನಟ ಅಜಯ್ ರಾವ್.
![](https://cinilahari.in/wp-content/uploads/2022/09/IMG_20220928_093050-1009x1024.jpg)
ನಿರ್ದೇಶಕ ಪವನ್ ಭಟ್ ಕಥೆ ಕೇಳಿ ಇಂಪ್ರೆಸ್ ಆಗಿರುವ ಅಜಯ್ ರಾವ್ ತಮ್ಮದೇ ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್ ಬ್ಯಾನರ್ ನಡಿ ಸಿನಿಮಾ ನಿರ್ಮಾಣ ಮಾಡಲು ಡಿಸೈಡ್ ಮಾಡಿದ್ದಾರೆ.
![](https://cinilahari.in/wp-content/uploads/2022/09/IMG_20220928_092825-1024x1015.jpg)
‘ಕಟಿಂಗ್ ಶಾಪ್’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಪವನ್ ಭಟ್ ಎರಡನೇ ಸಿನಿಮಾವಿದು.
![](https://cinilahari.in/wp-content/uploads/2022/09/IMG_20220928_093000-817x1024.jpg)
ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದ್ದು ಹೊಸ ಕಲಾವಿದರಿಗಾಗಿ ಹುಡುಕಾಟ ನಡೆಸುತ್ತಿದೆ. ಸದ್ಯದಲ್ಲೇ ಟೈಟಲ್ ಹಾಗೂ ಚಿತ್ರದ ಬಗೆಗಿನ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ ಚಿತ್ರತಂಡ.