ಸುಂದರ ದೃಶ್ಯಕಾವ್ಯ ಕಟ್ಟಿಕೊಟ್ಟಿರೋ ಬನಾರಸ್, ರುದ್ರತಾಂಡವ ಆಡ್ತಿದ್ದಾನೆ. ಈ ಸಿನಿಮಾವನ್ನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಝೈದ್ ಖಾನ್ ಜೊತೆ ವೀಕ್ಷಿಸಿದ್ದಾರೆ.
ಭಾನುವಾರ ರಾತ್ರಿ, ತಮ್ಮ ಕೆಲವು ಸಹೋದ್ಯೋಗಿಗಳ ಜೊತೆಗೆ ಮಲ್ಟಿಪ್ಲೆಕ್ಸ್ನಲ್ಲಿ ‘ಬನಾರಸ್’ ಸಿನಿಮಾವನ್ನು ಸಿದ್ದರಾಮಯ್ಯ ವೀಕ್ಷಿಸಿದ್ದಾರೆ. ಈ ಸಮಯದಲ್ಲಿ ಸಿದ್ದರಾಮಯ್ಯ ಜೊತೆಗೆ ನಟ ಝೈದ್ ಖಾನ್ ಹಾಗೂ ಚಿತ್ರತಂಡದ ಇತರ ಸದಸ್ಯರು ಸಹ ಇದ್ದರು.
ಈ ಸಿನಿಮಾದಲ್ಲಿ ಜಮೀರ್ ಅಹ್ಮದ್ ಅವರ ಪುತ್ರ ಝೈದ್ ಖಾನ್ ಹೀರೋ ಆಗಿ ನಟಿಸಿದ್ದಾರೆ. ಇದು ಅವರ ಚೊಚ್ಚಲ ಸಿನಿಮಾ. ‘ಮೊದಲ ಸಿನಿಮಾದಲ್ಲಿಯೇ ಅನುಭವ ಹೀರೋ ರೀತಿ ಝೈದ್ ಖಾನ್ ನಟಿಸಿದ್ದಾರೆ.
ಅವರ ಮತ್ತು ಸೋನಲ್ ಮಾಂಥೆರೋ ಜೋಡಿ ಚೆನ್ನಾಗಿದೆ. ಜಯತೀರ್ಥ ಬರೆದ ಕಥೆ ಕುತೂಹಲಕಾರಿ ಆಗಿದೆ. ಎಲ್ಲಿಯೂ ಬೋರ್ ಆಗಲ್ಲ’ ಎಂದು ಹೇಳಿರುವ ಸಿದ್ದರಾಮಯ್ಯ ಅವರು ಇದರಲ್ಲಿನ ಸಸ್ಪೆನ್ಸ್ ಅಂಶವನ್ನು ಹೆಚ್ಚು ಇಷ್ಟಪಟ್ಟಿದ್ದಾರೆ.